ಬಳಕೆಯಾಗದ, ನಿರ್ವಹಣೆಯಿಲ್ಲದ ನಿವೇಶನದಿಂದ ಸಾರ್ವಜನಿಕರಿಗೆ ತೊಂದರೆ

ಕ್ರಮ ತೆಗೆದುಕೊಳ್ಳದ ನಗರಸಭೆ

Team Udayavani, Sep 30, 2021, 5:20 AM IST

ಬಳಕೆಯಾಗದ, ನಿರ್ವಹಣೆಯಿಲ್ಲದ ನಿವೇಶನದಿಂದ ಸಾರ್ವಜನಿಕರಿಗೆ ತೊಂದರೆ

ಉಡುಪಿ: ನಗರಸಭೆ ವ್ಯಾಪ್ತಿಯಲ್ಲಿ ದಶಕಗಳಿಂದ ಬಳಕೆಯಾಗದೆ ಹಾಗೂ ನಿರ್ವಹಣೆಯಿಲ್ಲದ ನಿವೇಶನದಲ್ಲಿ ಬೆಳೆದು ನಿಂತ ಬೃಹತ್‌ ಮರ ಹಾಗೂ ಪೊದೆಗಳಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ನಗರಸಭೆ ಯಾವುದೇ ಕ್ರಮ ತೆಗೆದುಕೊಳ್ಳದಿರುವುದಕ್ಕೆ ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ವಾಸ್ತವ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಖಾಲಿ ಹಾಗೂ ನಿರ್ವಹಣೆ ಇಲ್ಲದ ನೂರಾರು ಸೈಟ್‌ಗಳು ಜನರ ಜೀವಕ್ಕೆ ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿಯುಂಟು ಮಾಡುತ್ತಿದ್ದು, ಈ ಬಗ್ಗೆ ಕ್ರಮ ತೆಗೆದುಕೊಳ್ಳದ ನಗರಸಭೆ ವಿರುದ್ಧ ಸ್ಥಳೀಯರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ದಶಕದ ಹಿಂದೆ ಖರೀದಿಸಿ, ಮರಗಳನ್ನು ನೆಟ್ಟು ಬೇಲಿ ಹಾಕಿ, ಮತ್ತೆ ಹಿಂದಿರುಗದೇ ನಿವೇಶನದ ನಿರ್ವಹಣೆ ಮಾಡದ ನೂರಾರು ಸೈಟ್‌ಗಳು ನಗರಸಭೆ ವ್ಯಾಪ್ತಿಯಲ್ಲಿದೆ.

ವಿಷ ಜಂತು ನಿವಾಸ
ಮನೆಗಳ ಮಧ್ಯೆ ಖಾಲಿ ಉಳಿಸಿಕೊಂಡ ನಿರ್ವಹಣೆ ಕಾಣದ ಸೈಟ್‌ಗಳಲ್ಲಿ ಆಳೆತ್ತರದ ಪೊದೆಗಳು, ಹಾವು ಸೇರಿದಂತೆ ವಿಷ ಜಂತುಗಳ ವಾಸಸ್ಥಾನವಾಗಿ ಮಾರ್ಪಟ್ಟಿದೆ. ಇದರಿಂದಾಗಿ ಮನೆಯಂಗಳದಲ್ಲಿ ಆಟವಾಡುವ ಮಕ್ಕಳ ಹಾಗೂ ಹಿರಿಯ ನಾಗರಿಕರ ಜೀವಕ್ಕೆ ಕಂಟಕವಾಗಿ ಪರಿಣಿಮಿಸುತ್ತಿದೆ. ಕೆಲವಡೆ ಖಾಲಿ ಸೈಟ್‌ಗಳು ಕಸದಿಂದ ತುಂಬಿ ಹೋಗಿದ್ದು, ಸಾಂಕ್ರಾಮಿಕ ರೋಗಗಳ ತಾಣವಾಗಿ ಪರಿಣಮಿಸಿದೆ.

ಸಾರ್ವಜನಿಕ ಆಸ್ತಿಗೆ ಹಾನಿ!
ಸೈಟ್‌ಗಳಲ್ಲಿ ಬೆಳೆದು ನಿಂತಿರುವ ಬೃಹತ್‌ ಆಕಾರದ ಮರಗಳಿಂದ ಸರಕಾರಿ ಆಸ್ತಿಗೆ ಹಾನಿಯಾಗುತ್ತಿದೆ. ಖಾಲಿ ನಿವೇಶನದ ಮಾಲಕರು 10ವರ್ಷಗಳ ಹಿಂದೆ ನೆಟ್ಟ ಗಿಡಗಳು ಬೆಳೆದು ನಿಂತು ಸಮೀಪದ ವಿದ್ಯುತ್‌ ಕಂಬಗಳಿಗೆ ಹಾನಿಯುಂಟು ಮಾಡುತ್ತಿದೆ. ಮಳೆಗಾಲ, ಗಾಳಿ, ಮಳೆಗೆ ಭಾರಿ ಗಾತ್ರದ ಮರಗಳು ಬೇರು ಸಹಿತ ಬಿದ್ದು ಮನೆಗಳು ಹಾನಿಯಾಗಿವೆ. ಇಂತಹ ಘಟನೆ ಪರ್ಕಳ ಮಾರುತಿ ನಗರದ ಮೂರನೇ ಕ್ರಾಸ್‌ ತಿರುವಿನಲ್ಲಿ ಸಂಭವಿಸಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 539 ಪಾಸಿಟಿವ್ ಪ್ರಕರಣ | 591 ಸೋಂಕಿತರು ಗುಣಮುಖ

ಕೈಚೆಲ್ಲಿದ ಸ್ಥಳೀಯಾಡಳಿತ
ನಿರ್ವಹಣೆಯಿಲ್ಲದ ಖಾಲಿ ನಿವೇಶನದಲ್ಲಿ ಬೆಳೆದು ನಿಂತ ಮರಗಳ ತೆರವಿನ ಬಗ್ಗೆ ನಗರಸಭೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಏಕೆಂದರೆ ಅವರಲ್ಲಿ ಆ ನಿವೇಶನದ ಮಾಲಕರ ಪಹಣಿ, ವಿಳಾಸ, ದೂರವಾಣಿ ಸಂಖ್ಯೆ ಲಭ್ಯವಿಲ್ಲ ಎನ್ನುವ ಉತ್ತರ ಕೇಳಿ ಬರುತ್ತಿವೆ ಎನ್ನುತ್ತಾರೆ ಸ್ಥಳೀಯರು. ಜತೆಗೆ 2020ರಲ್ಲಿ ನಗರದ ಹಳೆಯ ಹಾಗೂ ಸ್ವಾತಂತ್ರ್ಯ ಪೂರ್ವದ ರಾಯಲ್‌ ಮಹಲ್‌ ಮುರಿದು ಬಿದ್ದ ಸಂದರ್ಭದಲ್ಲಿ ಅಧಿಕಾರಿಗಳು 35 ವಾರ್ಡ್‌ಗಳಲ್ಲಿ ವಾಸವಿಲ್ಲದ, ಹಳೆಯದಾದ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ನಿರ್ಧಾರ ಕೈಗೊಂಡಿದ್ದರು. ಆದರೆ ಇದುವರೆಗೆ ಈ ನಿಟ್ಟಿನಲ್ಲಿ ಯಾವುದೇ ಕೆಲಸಗಳು ನಡೆದಿಲ್ಲ.

ತೆರವು ಅಗತ್ಯ
ಖಾಲಿ ನಿವೇಶನಗಳಲ್ಲಿ ಸಾರ್ವಜನಿಕರ ಜೀವ ಹಾಗೂ ಸರಕಾರಿ ಆಸ್ತಿಗೆ ಹಾನಿಯಾಗುವ ಮರ, ಪೊದೆಗಳು ಇದ್ದಲ್ಲಿ ಅದನ್ನು ನಗರಸಭೆ ಸಾರ್ವಜನಿಕ ಹಿತಾಸಕ್ತಿಯಿಂದ ತೆರವುಗೊಳಿಸಲು ಮುಂದಾಗಬೇಕು. ಬೃಹತ್‌ ಗಾತ್ರದ ಮರಗಳನ್ನು ತೆರವುಗೊಳಿಸಿ ಅದರ ವೆಚ್ಚವನ್ನು ಸ್ಥಳದ ಮಾಲಕರಿಂದ ಸಂಗ್ರಹಿಸಬೇಕಾಗಿದೆ. ಮಾಲಕರು ಒಂದಲ್ಲ ಒಂದು ದಿನ ಮನೆ ನಿರ್ಮಾಣಕ್ಕೆ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ನಗರಸಭೆಗೆ ಭೇಟಿ ಮಾಡಬೇಕಾಗುತ್ತದೆ. ಈ ವೇಳೆ ಅವರಿಂದ ಬಡ್ಡಿ ಸಮೇತ ಶುಲ್ಕ ಸಂಗ್ರಹಿಸುವ ಅವಕಾಶ ನಗರಸಭೆಗಿದೆ.

ಆರ್ಥಿಕ ವಿಚಾರ ನಿರ್ಣಯ ಅಗತ್ಯ
ಖಾಲಿ ಸೈಟ್‌ನಲ್ಲಿ ಬೆಳೆದಿರುವ ಮರ, ಪೊದೆ ಹಾಗೂ ಹಳೆ ಕಾಲದ ಕಟ್ಟಡಗಳನ್ನು ತೆರವುಗೊಳಿಸುವುದಕ್ಕೆ ನಗರಸಭೆ ನಿಧಿ ಬಳಕೆ ಮಾಡಬೇಕು. ಇದಕ್ಕೆ ಜನಪ್ರತಿನಿಧಿಗಳು ನಿಗದಿ ಸ್ಥಳ ಹಾಗೂ ಕಟ್ಟಡವನ್ನು ಗುರುತಿಸಿ, ತೆರವುಗೊಳಿಸುವ ಬಗ್ಗೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಾಡಿದಾಗ ಮಾತ್ರ ನಗರಸಭೆ ನಿಧಿ ಬಳಸಿಕೊಂಡ ಕೆಲಸ ಮಾಡಲು ಸಾಧ್ಯ.
– ಮೋಹನ್‌ ರಾಜ್‌
ಎಎಇ, ನಗರಸಭೆ, ಉಡುಪಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.