ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ  ಗಾಂಧಿ ಜಯಂತಿ  ಪ್ರಯುಕ್ತ ಗಾಂಧೀ ಸ್ಮೃತಿ ಕಾರ್ಯಕ್ರಮ


Team Udayavani, Oct 2, 2021, 3:26 PM IST

ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ  ಗಾಂಧಿ ಜಯಂತಿ  ಪ್ರಯುಕ್ತ ಗಾಂಧೀ ಸ್ಮೃತಿ ಕಾರ್ಯಕ್ರಮ

ಮೂಡಿಗೆರೆ: ರಾಜ್ಯದ 143 ತಾಲೂಕಿನಲ್ಲಿ ಗಾಂಧಿ ಸ್ಮೃತಿ ಕಾರ್ಯಕ್ರಮದ ಮುಖಾಂತರ ಕುಡಿತದ ಚಟವನ್ನು ಬಿಟ್ಟಿರುವ ನವಜೀವನ ಸಮಿತಿಯ ಸದಸ್ಯರಿಗೆ ಅಭಿನಂದನೆ ಮತ್ತು ಜಾಗೃತಿ ಅಣ್ಣ ಜಾಗೃತಿ ಮಿತ್ರ ಎಂಬ ಗೌರವವನ್ನು ನೀಡುತ್ತಿದ್ದು ಮೂಡಿಗೆರೆ ತಾಲೂಕಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ  ನವಜೀವನ ಸಮಿತಿ ಸದಸ್ಯರಿಗೆ ಅಭಿನಂಧನೆಯನ್ನು ಸಲ್ಲಿಸಿ ಮೂಡಿಗೆರೆ ತಾಲೂಕಿನ ಯೋಜನಾಧಿಕಾರಿಯವರಾದ ಶಿವಾನಂಧ ಪಿ ಇವರು ಪ್ರಾಸ್ತಾವಿಕ ಮಾತುಗಳನ್ನು ಆಡಿದರು.

ಸಮಾಜದಲ್ಲಿ ಜಾತಿ ನಿಂಧನೆ, ಸಹಿಷ್ಣತೆಯಿಂದಾಗಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದ್ದು ಉತ್ತಮ ಸಮಾಜ ನಿರ್ಮಾಣ ಮಾಡ ಬೇಕಾದರೆ ಬಾಪೂಜಿ ಕಂಡ ಕನಸು ಸತ್ಯ ಮತ್ತು ಅಹಿಷ್ಣುತೆ  ಮಾರ್ಗವನ್ನು ಮೈಗೂಡಿಸಿ ಕೊಂಡರೆ ಉತ್ತಮ ಸಮಾಜವನ್ನು ಮಾಡಲು ಸಾದ್ಯ. ಪ್ರತಿ ಗ್ರಾಮದಲ್ಲಿಯೂ ಸರ್ವಧರ್ಮದವರು ಶಾಂತಿಯಿಂದ ನಡೆದು ಕೊಂಡರೆ ಒಳ್ಳೆಯ ಚಿಂತನೆ ನಿರ್ಮಾಣ ಮಾಡಲು ಸಾದ್ಯ, ಆಧ್ಯಾತ್ಮಕಿ ಚಿಂತಕರು, ಜಿಲ್ಲಾ ಜನಜಾಗೃತಿ ಸ್ಥಾಪಕಾಧ್ಯಕ್ಷರಾದ ಚಿಪ್ರಗುತ್ತಿ ಪ್ರಶಾಂತ್‌ರವರು ತಿಳಿಸಿದರು.

ಇಡೀ ರಾಷ್ಟ್ರವೇ ಗಾಂಧೀಜಿಯವರ ಆದರ್ಶ ವ್ಯಕ್ತಿತ್ವವನ್ನು ಮನಗಂಡು ನಮ್ಮ ಸುತ್ತಲಿನ ಪರಿಸರ ಸ್ವಚ್ಛತೆ ನೈರ್ಮಲ್ಯವನ್ನು ಮಾಡುವ ನಿಟ್ಟಿನಲ್ಲಿ ಇಂದಿನ ಪ್ರದಾನಿ ನರೇಂದ್ರ ಮೋದಿಯವರು ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸಿದ್ದು ಯಶಸ್ವಿಯೂ ಆಗಿದೆ ಇದೇ ನಿಟ್ಟಿನಲ್ಲಿ ಗ್ರಾಮಾಭೀವೃಧ್ಧಿ ಯೋಜನೆ ದುರ್ಬಲ ವರ್ಗದಲ್ಲಿ ತಾಂಡವ ಆಡುತ್ತಿರುವ ಮದ್ಯಪಾನ ಪಿಡುಗನ್ನು ದೂರ ಮಾಡಲು ದುಶ್ಚಟ ಮುಕ್ತ ಸಮಾಜವನ್ನು ನಿರ್ಮಾಣ ಮಾಡಲು ಮದ್ಯ ವರ್ಜನ ಶಿಭಿರ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳ ಮುಖಾಂತರ  ಗ್ರಾಮೀಣ ಪರಿವರ್ತನೆಯನ್ನು ಗ್ರಾಮಾಭೀವೃದ್ಧಿ ಯೋಜನೆ ಮಾಡುತ್ತಿದೆ ಎಂದು ರವಿ ಜೆ.ಎ ಪೋಲೀಸ ಠಾಣಾಧಿಕಾರಿ, ಮೂಡಿಗೆರೆ ಇವರು ಕಾರ್ಯಕ್ರಮವನ್ನು ಉದ್ಠಾಟನೆ ಮಾಡಿ ಮಾತನಾಡಿದರು.

ರಾಮರಾಜ್ಯ ನಿರ್ಮಾಣವಾಗ ಬೇಕಾದರೆ ಮಕ್ಕಳ ಶೈಕ್ಷಣಿಕ ಜೀವನದಲ್ಲಿಯೇ ಧಾರ್ಮಿಕತೆ ಮತ್ತು ಆಧ್ಯಾತ್ಮಿಕ ಚಿಂತನೆಗೆ ಪ್ರಭಾವಿತರಾದರೆ ಆದರ್ಶ ವ್ಯಕ್ತಿಗಳನ್ನಾಗಿ ನಿರ್ಮಾಣ ಮಾಡಲು ಸಾಧ್ಯ. ಅಹಿಂಸ್ಮಾತ್ಮಕ ವಿಷಯದ ಮುಖಾಂತರ ಶಾಂತಿ ಸ್ಥಾಪನೆ ಮಾಡಬಹುದು. ಎಲ್ಲಾ ಧರ್ಮದ ಜನರು ದೇವನೊಬ್ಬ ನಾಮ ಹಲವು ಎಂಬ ತತ್ವವನ್ನು ಅನುಸರಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾದ್ಯವಿದೆ ಗ್ರಾಮೀಣ ಪ್ರದೇಶದಲ್ಲಿ ಮಕ್ಕಳೀಗೆ ವ್ಯಕ್ತಿತ್ವ ನಿರ್ಮಾಣ ಸಮಾಜದ ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸುವುದೇ ಶಿಕ್ಷಕರ ಆದ್ಯ ಕರ್ತವ್ಯ ಆಗಬೇಕು ಎಂದು ಶಿಕ್ಷಕರಾದ ಸುರೇಶ್‌ ಗೌಡರವರು ತಿಳಿಸಿದರು.

ಧೃಡ ನಿರ್ಧಾರ ಮತ್ತು ಸತತ ಪ್ರಯತ್ನದಿಂದ ಅಧ್ಯಯನ ಶೀಲರಾದರೆ ನಮ್ಮ ಮನೆಯ ಮಕ್ಕಳನ್ನು ಗಾಂಧೀಜಿಯನ್ನಾಗಿ ನೋಡಲು ಸಾಧ್ಯವಿದೆ. ಬದಲಾವಣೆ  ಜಗದ ನಿಯಮ ಎಂಬ ವೇದೋಕ್ತಿಯಂತೆ ಸರ್ಕಾರಗಳು ಉಚಿತ ಕಾನೂನು ಸಲಹೆಗಳನ್ನು ನೀಡುವುದರ ಮೂಲಕ ಕೋಮು ಸೌಹಾರ್ಧತೆಯನ್ನು ಕಾಪಾಡಲು ಸಾಧ್ಯವಾಗಿದೆ ಎಂದು ವಕೀಲರಾದ ಭಾಗ್ಯ ನಾರಾಯಣ್‌ ರವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಾನ ಮುಕ್ತ ಜೀವನವನ್ನು ನಡೆಸುತ್ತಿರುವ ನವಜೀವನ ಸಮಿತಿ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಸದಸ್ಯರು., ಯೋಜನೆಯ ಸಿಬ್ಬಂಧಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿವರಾಜ್‌ ಬಿ.ಎಸ್‌ ಇವರು ನಿರೂಪಿಸಿ ಸ್ವಾಗತವನ್ನು ದಿನೇಶ್‌ ಹಾಗೂ ಧನ್ಯವಾದವನ್ನು ವಿಘ್ನೇಶ್‌ರವರು ಮಾಡಿದರು.

ಟಾಪ್ ನ್ಯೂಸ್

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.