ಅಜ್ಞಾನ,ದೌರ್ಜನ್ಯದಿಂದ ಪಾರು ಮಾಡಿ, ಕಷ್ಟಕ್ಕೆ ಅನುಕೂಲವಾಗುವುದೇ ಶಿಕ್ಷಣ


Team Udayavani, Oct 2, 2021, 7:05 PM IST

aa

ಬೈಲಹೊಂಗಲ: ಜನರನ್ನು ಅಜ್ಞಾನದಿಂದ, ದೌರ್ಜನ್ಯದಿಂದ ಪಾರು ಮಾಡಿ, ಕಷ್ಟ ಕಾಲಕ್ಕೆ ಅನುಕೂಲ ಕಲಿಸುವದೇ ಶಿಕ್ಷಣವಾಗಿದೆ ಎಂದು ಹಿರಿಯ ಐಪಿಎಸ್ ಅಧಿಕಾರಿ ರವಿ ಚನ್ನಣ್ಣವರ್  ಹೇಳಿದರು.

ಚಚಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ಶನಿವಾರ ನಡೆದ ಉಚಿತ ಸ್ಪರ್ಧಾತ್ಮಕ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಗಣ್ಯರ ಸತ್ಕಾರ ಸಮಾರಂಭದಲ್ಲಿ ಮಾತನಾಡಿ, ನಾವು ಸರಕಾರಿ ಹುದ್ದೆ ಸೇರಿದ ಮೇಲೆ ಇತರರು ನಮ್ಮಂತೆ ಮುಂದೆ ಒಳ್ಳೆಯ ಅಧಿಕಾರಿಯಾಗಲು ಮಾರ್ಗದರ್ಶನ ಮಾಡುವುದು ಒಬ್ಬ ಒಳ್ಳೆಯ ವ್ಯಕ್ತಿಯ ಆದ್ಯ ಜವಾಬ್ದಾರಿಯಾಗಿದೆ.ನಮಗೆ ಸಿಗುವ ಸೌಲಭ್ಯಗಳು ಎಲ್ಲರಿಗೂ ಸಿಗಬೇಕೆಂಬ ಕನಸನ್ನು ಪ್ರತಿಯೊಬ್ಬ ಅಧಿಕಾರಿಯ ಕರ್ತವ್ಯವೆಂದು ತಿಳಿಯಬೇಕು. ಜನರನ್ನು ಕಚೇರಿಯಿಂದ ಕಚೇರಿಗೆ ಅಲೆಯುವದನ್ನು ತಪ್ಪಿಸಲು ಮನೆಬಾಗಿಲಿಗೆ ಹೋಗಿ ಅವರ ಕೆಲಸಗಳನ್ನು ಮಾಡಿಕೊಡಬೇಕೆಂದು ತಿಳಿಸಿದರು.

ನಾವಷ್ಟೇ ಓದುವಂತಾಗಬಾರದು. ನೂರಾರು ಜನರಿಗೆ ಬೆಳಕಾಗುವ ನಿಟ್ಟಿನಲ್ಲಿ ನಾವು ಪಡೆದ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕು. ಬಡವರು ಅವಕಾಶ ಕೊರತೆಯಿಂದ ದೊಡ್ಡ ಹುದ್ದೆಗೆ ಹೋಗಲು ಸಾಧ್ಯವಾಗುವದಿಲ್ಲ. ಅಂತಹವರಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸುವ ಸಾಮರ್ಥ್ಯವನ್ನು ಒದಗಿಸುವ ಸ್ಪರ್ಧಾ ಪರೀಕ್ಷೆ ಪುಸ್ತಕಗಳನ್ನು ಸ್ಪರ್ಧಾಳುಗಳಿಗೆ ಹಂಚುವ ಮೂಲಕ ಸಮಾಜಿಕ ಕಾರ್ಯಕರ್ತ ನಾಗಪ್ಪ ಮೇಟಿಯವರು ಉತ್ತಮ ಕಾರ್ಯ ಮಾಡುತ್ತಿದ್ದಾರೆ ಎಂದರು.

ನನ್ನಂತಹ ಅಧಿಕಾರಿಗಳು ದೇಶದಲ್ಲಿ ನೂರಾರು ಜನರಿದ್ದಾರೆ. ಯಾರಿಗೆ ಸಮಸ್ಯೆ ಇದೆ ಅಂಥವರ ಪರವಾಗಿ ಕೆಲಸ ಮಾಡುತ್ತಿದ್ದೇನೆ. ಪ್ರತಿಯೊಬ್ಬರು ನ್ಯಾಯ ಕೊಡಿಸುವ ಕೆಲಸವನ್ನು ಮಾಡಬೇಕು. ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ಪ್ರಾಮಾಣಿಕತೆಗೆ ಇನ್ನೊಂದು ಹೆಸರು ಲಾಲ್ ಬಹಾದ್ದೂರ ಶಾಸ್ತ್ರೀಯಾಗಿದ್ದಾರೆ ಅವರ ಜನ್ಮದಿನದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಉತ್ತಮ ಕಾರ್ಯವಾಗಿದೆ. ರಾಮಕೃಷ್ಣ ಪರಮಹಂಸರು, ಭಗತ್‌ಸಿಂಗ್, ಮಹಾತ್ಮಾಗಾಂಧೀಜಿಯವರ ಲಾಲ್ ಬಹದ್ದೂರ ಅವರ ಬದುಕಿನ ಬಗ್ಗೆ ಅಧ್ಯಯನ ಮಾಡಿ ಅವರ ಆದರ್ಶದಲ್ಲಿ ಬದುಕು ಸಾಗಿಸಬೇಕೆಂದರು. 120ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪುಸ್ತಕಗಳನ್ನು ವಿತರಿಸಲಾಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು, ಕಾಯಕಯೋಗಿಗಳು, ಮಾಜಿ ಸೈನಿಕರನ್ನು, ಆಶಾ ಕಾರ್ಯಕರ್ತೆಯರು, ಸಾಧಕರನ್ನು ಸನ್ಮಾನಿಸಲಾಯಿತು.

ಸರದಾರ ವಿ.ಗು.ದೇಸಾಯಿ ಪೌಂಡೇಶನ ಅಧ್ಯಕ್ಷ ನಾಗರಾಜ ದೇಸಾಯಿ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿ ಅಶೋಕ ಮಿರ್ಜಿ, ಕೆಎಎಸ್ ಅಧಿಕಾರಿ ಎಸ್.ವೈ .ಮಾರಿಹಾಳ, ಅಶೋಕ ಮಾಲಬನ್ನವರ, ಯುವ ನಾಯಕ ನಾಗಪ್ಪ ಮೇಟಿ, ಸದೆಪ್ಪ ವಾರಿ, ಗ್ರಾ.ಪಂ ಅಧ್ಯಕ್ಷೆ ಗಂಗವ್ವ ಸಿಂಗಾರಿ, ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ ಗಡ್ಡಿ, ರಾವಸಾಹೇಬ ದೇಸಾಯಿ, ಗಂಗಪ್ಪ ವನ್ನೂರ, ಮಲ್ಲಿಕಾರ್ಜುನ ಗಾಣಗಿ, ಮಹಾಂತಯ್ಯ ಹಿರೇಮಠ, ಶ್ರೀಶೈಲ ಖನಗಾಂವಿ, ಶಿವಲಿಂಗಪ್ಪ ಮೇಟಿ, ನಿವೃತ್ತ ಶಿಕ್ಷಕ ಎಸ್.ಎನ್.ಪಾಟೀಲ, ಬಸವರಾಜ ಸಾವಳಗಿ, ಸಿದ್ದನಗೌಡ ಪಾಟೀಲ, ಬಸನಗೌಡ ಪಾಟೀಲ, ಬಿ.ಎಸ್.ವಾರಿ, ಮಹಾಂತೇಶ ಕಡಬಿ, ಬಸಪ್ಪ ಮುನವಳ್ಳಿ, ನಿಂಗಪ್ಪ ಗಿರಜಮ್ಮನವರ, ಶಂಕರ ಇಟಿ, ಇನ್ನಿತರರು ಪಾಲ್ಗೊಂಡಿದ್ದರು. ಬಾಳೇಶ ಸಿದ್ದಬಸನ್ನವರ ಸ್ವಾಗತಿಸಿದರು. ಚನಗೌಡ ಪಾಟೀಲ ನಿರೂಪಿಸಿ, ವಂದಿಸಿದರು.

 

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತೀಶ್‌ ಜಾರಕಿಹೊಳಿ

Belagavi: ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

ಅ.23 ರಿಂದ 25: ಮಳೆ ನಡುವೆಯೂ ಕಿತ್ತೂರು ಉತ್ಸವಕ್ಕೆ ಭರದ ಸಿದ್ಧತೆ

ಅ.23 ರಿಂದ 25: ಮಳೆ ನಡುವೆಯೂ ಕಿತ್ತೂರು ಉತ್ಸವಕ್ಕೆ ಭರದ ಸಿದ್ಧತೆ

4

Chikkodi: ಮಹಡಿಯಿಂದ ಕಾಲು ಜಾರಿ ಬಿದ್ದು ವಿದ್ಯಾರ್ಥಿನಿ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.