![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-415x229.jpg)
ಲಡಾಖ್ಗೆ ವಜ್ರಕವಚ; ಎಲ್ಎಸಿಯಲ್ಲಿ ಹೆಚ್ಚಿದ ಚೀನ ಸೇನೆ
ಟ್ಯಾಂಕರ್ಗಳನ್ನು ನಿಯೋಜಿಸಿದ ಭಾರತ
Team Udayavani, Oct 3, 2021, 7:15 AM IST
![ಲಡಾಖ್ಗೆ ವಜ್ರಕವಚ; ಎಲ್ಎಸಿಯಲ್ಲಿ ಹೆಚ್ಚಿದ ಚೀನ ಸೇನೆ](https://www.udayavani.com/wp-content/uploads/2021/10/vajra-620x465.jpg)
ಲಡಾಖ್: ಲಡಾಖ್ನ ಪೂರ್ವ ಭಾಗ ಮತ್ತು ಉತ್ತರ ಭಾಗದಲ್ಲಿ ಚೀನ ಹೆಚ್ಚಿನ ಸಂಖ್ಯೆಯಲ್ಲಿ ಅತ್ಯಾಧುನಿಕ ಶಸ್ತ್ರಾಸ್ತ್ರ ಸಹಿತ ಯೋಧರ ಪಡೆ ನಿಯೋಜಿಸಿದೆ.
ಹೀಗಾಗಿ, ಸಂಭಾವ್ಯ ದಾಳಿ ತಡೆಯುವ ನಿಟ್ಟಿನಲ್ಲಿ ಭಾರತ ಕೂಡ ಅಲ್ಲಿಗೆ “ಕೆ-9′ ವಜ್ರ ಟ್ಯಾಂಕರ್ಗಳನ್ನು ರವಾನಿಸಿದೆ. ಜಗತ್ತಿನ ಅತ್ಯಂತ ಎತ್ತರದಲ್ಲಿರುವ ಯುದ್ಧಭೂಮಿಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಭೂಸೇನಾ ಮುಖ್ಯಸ್ಥ ಜ| ಎಂ.ಎಂ. ನರವಾಣೆ ಈ ಮಾಹಿತಿ ನೀಡಿದ್ದಾರೆ.
ಚೀನ ನಡೆಸಿ ರುವ ಈ ಕ್ರಮ ನಿಜಕ್ಕೂ ದೇಶಕ್ಕೆ ಕಳವಳ ತರುವ ವಿಚಾರ ಎಂದು ಹೇಳಿದ್ದಾರೆ. ಭಾರತ-ಚೀನ ನಡು ವಿನ ಗಡಿಯ 18 ಸೂಕ್ಷ್ಮ ಪ್ರದೇಶಗಳನ್ನು ಗುರುತಿ ಸಲಾಗಿದ್ದು, ಅಲ್ಲಿಯೇ ಹೆಚ್ಚುವರಿ ಸೇನೆ ನಿಯೋಜಿಸಲಾಗಿದೆ. ಟಿ-90 ಟ್ಯಾಂಕರ್ಗಳನ್ನೂ ರವಾನಿಸಲಾಗಿದೆ.
“ವಾಸ್ತವಿಕ ನಿಯಂತ್ರಣ ರೇಖೆ (ಎಲ್ಎಸಿ)ಯ ಮಂಚೂಣಿ ಪ್ರಾಂತ್ಯಗಳಲ್ಲಿ ಸೇನಾ ಬಲವನ್ನು ಹೆಚ್ಚಿಸಿ ದ್ದೇವೆ. ಚೀನದ ಯಾವುದೇ ದುಃಸ್ಸಾಹಕ್ಕೆ ತಡೆಯೊ ಡ್ಡಲು ಸಮರ್ಥರಾಗಿದ್ದೇವೆ ಮತ್ತು ನಮ್ಮ ಸಿದ್ಧತೆ ಯನ್ನು ಆಗಾಗ ಪರಿಶೀಲಿಸಲಾಗುತ್ತದೆ’ ಎಂದಿದ್ದಾರೆ ಜ| ನರವಾಣೆ.
ಇದನ್ನೂ ಓದಿ:ನಮಾಮಿ ಗಂಗೆ ಯೋಜನೆಗೆ ಚಾಚಾ ಚೌಧರಿ ಲಾಂಛನ
ಚೀನ ಸೇನಾ ಜಮಾವಣೆ ಹೆಚ್ಚಿಸಿದ್ದರಿಂದ ನಾವೂ ನಮ್ಮ ಸೇನಾ ಬಲವನ್ನು ಹೆಚ್ಚಿಸಿ ದ್ದೇವೆ. ಹಾಗೆಯೇ ಗಡಿಯಾಚೆಗೆ ಆಗುವ ಎಲ್ಲ ರೀತಿಯ ಬದಲಾ ವಣೆಗಳಿಗೆ ನಾವೂ ಇತ್ತ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತೇವೆ. ಎಲ್ಲ ಆಯಕಟ್ಟಿನ ಜಾಗಗಳಲ್ಲಿ ನಾವು ಭದ್ರತೆ ಹೆಚ್ಚಿಸುವ ಮೂಲಕ ಯಾವುದೇ ಕ್ಷಣದಲ್ಲಿ ಉಂಟಾಗುವ ಪ್ರಕ್ಷುಬ್ಧ ಪರಿಸ್ಥಿತಿಯನ್ನು ನಿಭಾಯಿಸಲು ಸನ್ನದ್ಧರಾಗಿದ್ದೇವೆ. ಹಾಗಾಗಿಯೇ ಸಮುದ್ರ ಮಟ್ಟಕ್ಕಿಂತ ಅತೀ ಎತ್ತರದ ಪ್ರದೇಶಗಳಲ್ಲಿ ಕಾರ್ಯಾ ಚರಣೆ ನಡೆಸಬಲ್ಲ ಟ್ಯಾಂಕರ್ಗಳನ್ನೇ ಈ ಭಾಗದಲ್ಲಿ ನಿಯೋಜಿಸಲಾಗಿದೆ’ ಎಂದು ನರವಾಣೆ ತಿಳಿಸಿದ್ದಾರೆ.
ಭಾರತ ಮತ್ತು ಚೀನ ನಡುವೆ ಮುಂದಿನ ವಾರ 13ನೇ ಸುತ್ತಿನ ಸೇನಾಧಿಕಾರಿಗಳ ಮಾತುಕತೆ ನಡೆಯಲಿದೆ. ಈ ಸಂದರ್ಭದಲ್ಲಿ ಗಡಿ ತಂಟೆ ಬಗೆಹರಿಸುವ ಬಗ್ಗೆ ಪ್ರಸ್ತಾವ ಮಾಡಲಾಗುತ್ತದೆ ಎಂದಿದ್ದಾರೆ.
ಎರಡು ಬಾರಿ ಕದನ ವಿರಾಮ ಉಲ್ಲಂಘನೆ
ಫೆಬ್ರವರಿಯಿಂದ ಜುಲೈವರೆಗಿನ ಅವಧಿಯಲ್ಲಿ ಪಾಕಿಸ್ಥಾನ ಕದನ ವಿರಾಮ ಪಾಲಿಸಿಕೊಂಡು ಬಂದಿದೆ. ಇತ್ತೀಚೆಗೆ, ಆ ದೇಶ, ಎರಡು ಬಾರಿ ಕದನ ವಿರಾಮ ಉಲ್ಲಂ ಸಿದೆ. ಈ ಬಗ್ಗೆ ಪಾಕಿಸ್ಥಾನದ ಸೇನಾಧಿಕಾರಿಗಳಗೆ ಮಾಹಿತಿ ನೀಡಲಾಗಿದೆ. ಇದರ ನಡುವೆ, ಗಡಿಯಲ್ಲಿ ಒಳನುಸುಳುವಿಕೆ ಪ್ರಮಾಣ ಹೆಚ್ಚಾಗಿದೆ ಎಂದು ನರವಾಣೆ ತಿಳಿಸಿದ್ದಾರೆ.
ವಜ್ರದ ಹೆಗ್ಗಳಿಕೆ ಏನು?
ಎಲ್ ಆ್ಯಂಡ್ ಟಿ ನಿರ್ಮಾಣ
ದಕ್ಷಿಣ ಕೊರಿಯಾದ ಹನ್ವಾ ಡಿಫೆನ್ಸ್ನ ಮೂಲ ತಂತ್ರಜ್ಞಾನ
50 ಕಿ.ಮೀ. ದೂರದ ವರೆಗೆ ಶತ್ರು ನೆಲೆ ಛೇದನ
ಟಾಪ್ ನ್ಯೂಸ್
![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-150x83.jpg)
Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
![Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ](https://www.udayavani.com/wp-content/uploads/2024/07/3-8-150x90.jpg)
Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ
![rahul gandhi](https://www.udayavani.com/wp-content/uploads/2024/07/rahul-8-150x83.jpg)
LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ
![terror attack on Army camp in Jammu and Kashmir’s Rajouri](https://www.udayavani.com/wp-content/uploads/2024/07/rajuori-150x83.jpg)
Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ
MUST WATCH
ಹೊಸ ಸೇರ್ಪಡೆ
![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-150x83.jpg)
Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು
![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-150x83.jpg)
Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
![7-yellapura](https://www.udayavani.com/wp-content/uploads/2024/07/7-yellapura-150x90.jpg)
Yellapura: ನಿಯಂತ್ರಣ ತಪ್ಪಿದ ಕಂಟೈನರ್ ಲಾರಿ; ತಪ್ಪಿದ ಅನಾಹುತ
![belagavi](https://www.udayavani.com/wp-content/uploads/2024/07/belagavi-150x90.jpg)
Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.