ಚೈ-ಸ್ಯಾಮ್ ವಿಚ್ಛೇದನಕ್ಕೆ ನಟ ಅಮೀರ್ ಖಾನ್ ಕಾರಣ : ಕಂಗನಾ ಗಂಭೀರ ಆರೋಪ


Team Udayavani, Oct 3, 2021, 1:28 PM IST

ghftyht

ಮುಂಬೈ : ನಟ ನಾಗಚೈತನ್ಯ ಹಾಗೂ ನಟಿ ಸಮಂತಾ ವಿಚ್ಛೇದನಕ್ಕೆ ಬಾಲಿವುಡ್ ನಟ ಅಮೀರ್ ಖಾನ್ ಕಾರಣ ಎಂದು ನಟಿ ಕಂಗನಾ ರಣಾವತ್ ಆರೋಪ ಮಾಡಿದ್ದಾರೆ.

ಶನಿವಾರ ಸ್ಯಾಮ್-ಚೈ ಬ್ರೇಕಪ್ ಮಾಡಿಕೊಂಡರು. ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ ದಾಂಪತ್ಯದಲ್ಲಿ ಬಿರುಕು ಮೂಡಲು ಕಾರಣ ಏನು ? ಎನ್ನುವುದು ಇನ್ನೂ ರಹಸ್ಯವಾಗಿಯೇ ಉಳಿದುಕೊಂಡಿದೆ. ಈ ಜೋಡಿ ಬೇರೆಯಾಗಿದ್ದಕ್ಕೆ ಅವರ ಅಭಿಮಾನಿಗಳು ಬೇಸರಪಟ್ಟುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಬಾಲಿವುಡ್ ಲೇಡಿ ಸೂಪರ್ ಸ್ಟಾರ್ ಕಂಗನಾ ಅವರು ಮಾಡಿರುವ ಕಾಮೆಂಟ್ ಇದೀಗ ಗಮನ ಸೆಳೆಯುತ್ತಿದೆ.

ಸಮಂತಾ ಹಾಗೂ ನಾಗಚೈತನ್ಯ ಬೇರೆಯಾಗುತ್ತಿರುವುದಕ್ಕೆ ಕಾರಣ ಡಿವೋರ್ಸ್ ಎಕ್ಸ್ ಪರ್ಟ್ ಅಮೀರ್ ಖಾನ್ . ನಾಗಚೈತನ್ಯ ಅವರು ಅಮೀರ್ ಖಾನ್ ಜೊತೆಗೆ ನಿಕಟವಾದ ಕೂಡಲೇ ಈ ವಿಚ್ಛೇದನ ನಡೆದಿದೆ   ಎಂದು ಟೀಕಿಸಿದ್ದಾರೆ.

ಈ ಬಗ್ಗೆ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿರುವ ಕಂಗನಾ, ವಿಚ್ಛೇದನ ಏರ್ಪಟ್ಟ ಸಮಯದಲ್ಲಿ ತಪ್ಪು ಯಾವಾಗಲೂ ಪುರುಷನದ್ದೇ ಆಗಿರುತ್ತದೆ. ನಾನು ಹೀಗೆ ಹೇಳಿದರೆ ಗೊಡ್ಡು ಸಂಪ್ರದಾಯದಂತೆ ಅಥವಾ ಪೂರ್ವ ನಿರ್ಧರಿತವಾಗಿ ಪೂರ್ವಾಗ್ರಹಪೀಡಿತವಾಗಿ ಮಾತನಾಡುತ್ತಿದ್ದೇನೆ ಎಂದೆನಿಸಬಹುದು ಎಂದಿದ್ದಾರೆ.

ವಿಚ್ಛೇದನ ವಿಷಯದಲ್ಲಿ ನೂರರಲ್ಲಿ ಒಬ್ಬ ಮಹಿಳೆಯ ತಪ್ಪು ಇರಬಹುದು, ಆದರೆ ಬಹುತೇಕ ಸಂದರ್ಭಗಳಲ್ಲಿ ತಪ್ಪು ಪುರುಷರದ್ದೇ. ಮಹಿಳೆಯರನ್ನು ಬಟ್ಟೆಯಂತೆ ಬದಲಾಯಿಸುವ ಮತ್ತು ನಂತರ ಅವರು ಉತ್ತಮ ಸ್ನೇಹಿತರೆಂದು ಹೇಳಿಕೊಳ್ಳುವ ಇಂತವರಿಗೆ ದಯೆ ತೋರಿಸುವುದನ್ನು ನಿಲ್ಲಿಸಿ ಎಂದು ನೇರವಾಗಿ ನಾಗಚೈತನ್ಯ ಹೆಸರು ಹೇಳದೆ ಕಂಗನಾ ಬೈದಿದ್ದಾರೆ.

ಇನ್ನು ನಾಗಚೈತನ್ಯ ಅವರು ಅಮೀರ್ ಖಾನ್ ಅವರ ಲಾಲ್ ಸಿಂಗ್ ಚಡ್ಡಾ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದೇ ಕಾರಣಕ್ಕೆ ಕಂಗನಾ ಅವರು ಅಮೀರ್ ಖಾನ್ ವಿರುದ್ಧ ಆರೋಪ ಮಾಡಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.