ಡಿಸಿಸಿ ಬ್ಯಾಂಕ್ ಶಾಖೆಗೆ ನುಗಿದ ಮಳೆ ನೀರು
Team Udayavani, Oct 3, 2021, 3:17 PM IST
ಕೆ.ಆರ್.ಪೇಟೆ: ಪಟ್ಟಣದಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಾಜಕಾಲುವೆ ಒತ್ತುವರಿಯಾಗಿರುವ ಕಾರಣ ಬಸ್ ನಿಲ್ದಾಣದಿಂದ ಮಳೆಯ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸೇರಿ ಡಿಸಿಸಿ ಬ್ಯಾಂಕ್ ತಾಲೂಕು ಶಾಖೆ ರಾತ್ರಿಯಿಡೀ ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿತ್ತು.
ಬೆಳಗ್ಗೆ ನೀರು ಕಡಿಮೆಯಾಗಿದ್ದು ಬ್ಯಾಂಕ್ ಸಿಬ್ಬಂದಿಗಳೇ ಬ್ಯಾಂಕ್ನೊಳಗಿನ ನೀರನ್ನು ಹೊರಸಾಗಿಸಿ ಸ್ವತ್ಛಗೊಳಿಸಿದರು. ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಕೆ.ಅಶೋಕ್ ಬ್ಯಾಂಕ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ಬ್ಯಾಂಕ್ನಲ್ಲಿ ಸುಮಾರು 4 ಅಡಿಗಳಷ್ಟು ನೀರು ನಿಂತಿದ್ದು ಬ್ಯಾಂಕಿನಲ್ಲಿ ಕೆಳಭಾಗದಲ್ಲಿ ಇಟ್ಟಿದ್ದ ಸಣ್ಣ ಪುಟ್ಟ ಡೆಬಿಟ್, ಕ್ರೆಡಿಟ್ ಚಲನ್ ಸೇರಿ ಸಾಕಷ್ಟು ದಾಖಲೆ ಪತ್ರ ನೀರಿನಲ್ಲಿ ತೊಯ್ದು ಹೋಗಿವೆ.
ಇದನ್ನೂ ಓದಿ:- ಶಾರ್ಜಾದಲ್ಲಿ ರಾಹುಲ್- ವಿರಾಟ್ ಪೈಪೋಟಿ: ಟಾಸ್ ಗೆದ್ದ RCB; ಪಂಜಾಬ್ ತಂಡದಲ್ಲಿ 3 ಬದಲಾವಣೆ
ಆದರೆ ಬ್ಯಾಂಕ್ ಸಂಪೂರ್ಣ ಕಂಪ್ಯೂಟರೀಕರಣಗೊಂಡಿರುವ ಕಾರಣ ಗ್ರಾಹಕರ ಯಾವುದೇ ದಾಖಲೆ ಪತ್ರಗಳಿಗೆ ತೊಂದರೆ ಯಾಗಿಲ್ಲ. ಹಣ ಮತ್ತು ಗಿರಿವಿ ಒಡವೆ, ಲಾಕರ್ ರೂಂಗೆ ನೀರು ಹೋಗಿಲ್ಲ. ಹೀಗಾಗಿ ಯಾವುದೇ ತೊಂದರೆಯಾಗಿಲ್ಲ ಹೀಗಾಗಿ ಗ್ರಾಹಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಅಶೋಕ್ ತಿಳಿಸಿದರು.
ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿ ಜನರಲ್ ಮ್ಯಾನೇಜರ್ ರೂಪಾಶ್ರೀ ಮಾತನಾಡಿ, ಬ್ಯಾಂಕಿಗೆ ನೀರು ನುಗ್ಗಿ ಕಚೇರಿ ಪೀಠೊಪಕರಣ, ಬ್ಯಾಂಕ್ ಕಂಪ್ಯೂಟರೀಕರಣವಾಗುವುದಕ್ಕೂ ಮುನ್ನ ಬರೆದಿಟ್ಟಿದ್ದ ಕಡತ ದಾಖಲೆ ನೀರಿನಲ್ಲಿ ತೊಯ್ದು ಹೋಗಿವೆ.ಇದನ್ನು ಹೊರತುಪಡಿಸಿ ಉಳಿದೆಲ್ಲಾ ದಾಖಲೆ
ಸುರಕ್ಷತವಾಗಿವೆ. ಗ್ರಾಹಕರ ಯಾವುದೇ ದಾಖಲೆ ನಾಶವಾಗಿಲ್ಲ. ಗ್ರಾಹಕರು ಎಂದಿನಂತೆ ಇಂದಿನಿಂದಲೇ ಬ್ಯಾಂಕಿನಲ್ಲಿ ವ್ಯವಹರಿಸಬಹುದು ಎಂದು ತಿಳಿಸಿದರು.
ಡಿಸಿಸಿ ಬ್ಯಾಂಕಿನ ಶಾಖಾ ವ್ಯವಸ್ಥಾಪಕ ಎಂ.ಎನ್. ಅಶ್ವತ್ಥ, ಕಿಕ್ಕೇರಿ ಶಾಖೆ ವ್ಯವಸ್ಥಾಪಕಿ ಮೀನಾಕ್ಷಿ, ಮೇಲ್ವಿಚಾರಕ ಆದಿಲ್ ಪಾಷಾ, ಸೀನಿಯರ್ ಅಕೌಂಟೆಂಟ್ ಗಿರಿವರ್ಧನ್ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬ್ಯಾಂಕ್ನಲ್ಲಿ ನಿಂತಿದ್ದ ನೀರನ್ನು ನೋಡಲಾಗದೇ ಬ್ಯಾಂಕ್ ಸಿಬ್ಬಂದಿ ವರ್ಗದವರೇ ಬ್ಯಾಂಕ್ ಶಾಖೆ ಸ್ವತ್ಛಗೊಳಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ
Mandya: ಕೆಎಸ್ಆರ್ ಟಿಸಿ ಬಸ್- ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್ ಬಯೋಮೆಟ್ರಿಕ್!
MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.