ಲಲಿತ ಕಲಾ ಅಕಾಡೆಮಿ: ಜಿಲ್ಲಾ ಪ್ರತಿನಿಧಿಯಿಲ್ಲ; ಕಲೆಗೆ ಬೇಕಿದೆ ಪ್ರೋತ್ಸಾಹದ ಬೆಲೆ


Team Udayavani, Oct 6, 2021, 5:55 AM IST

ಲಲಿತ ಕಲಾ ಅಕಾಡೆಮಿ: ಜಿಲ್ಲಾ ಪ್ರತಿನಿಧಿಯಿಲ್ಲ; ಕಲೆಗೆ ಬೇಕಿದೆ ಪ್ರೋತ್ಸಾಹದ ಬೆಲೆ

ಉಡುಪಿ: ಕಲಾ ಚಟುವಟಿಕೆಯಲ್ಲಿ ಶ್ರೀಮಂತಿಕೆ ಮೆರೆದಿರುವ ಉಡುಪಿ ಜಿಲ್ಲೆ ಲಲಿತ ಕಲಾ ಅಕಾಡೆಮಿಯಿಂದ ನಿರ್ಲಕ್ಷ್ಯಕ್ಕೊಳಗಾಗಿದೆ. ಕಳೆದ 6 ವರ್ಷಗಳಿಂದ ಲಲಿತ ಕಲಾ ಅಕಾಡೆಮಿಗೆ ಜಿಲ್ಲೆಯಿಂದ ಪ್ರತಿನಿಧಿಗಳ ನೇಮಕವೇ ನಡೆದಿಲ್ಲ.

ರಾಜ್ಯದ ಎಲ್ಲ ಜಿಲ್ಲೆಗಳಿಗೂ ಪ್ರತಿನಿಧಿಗಳ ನೇಮಕ ಕಷ್ಟವಾದರೂ ಲಲಿತಕಲೆಗೆ ತನ್ನದೇ ಆದ ಕೊಡುಗೆ ನೀಡುತ್ತಿರುವ ಉಡುಪಿ ಜಿಲ್ಲೆಯನ್ನು 6 ವರ್ಷಗಳಿಂದಲೂ ಅವಗಣಿಸುತ್ತಿರುವುದು ಯಾಕೆಂಬುದು ಪ್ರಶ್ನಾರ್ಥಕವಾಗಿ ಉಳಿದಿದೆ.

ಹಲವು ವರ್ಷದ ಹಿಂದೆ ಬ್ರಹ್ಮಾವರದ ಪೀಟರ್‌ ಲೂವಿಸ್‌ ಅವರು ಲಲಿತ ಕಲಾ ಅಕಾಡೆಮಿಯ ಅಧ್ಯಕ್ಷರಾಗಿದ್ದರು.ಜಿಲ್ಲೆಯ ಹಲವಾರು ಮಂದಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿ ತಮ್ಮದೇ ಆದ ಕೊಡುಗೆ ಸಲ್ಲಿಸಿದ್ದರು. ಕಲಾವಿದರಾದ ಭಾಸ್ಕರ ರಾವ್‌, ಚಂದ್ರನಾಥ ಆಚಾರ್ಯ, ಪೀಟರ್‌ ಲೂವಿಸ್‌, ಜಿ.ಎಸ್‌.ಶೆಣೈಯಂತಹ ಕಲಾವಿದರು ವೆಂಕಟಪ್ಪ ಪ್ರಶಸ್ತಿಗೂ ಭಾಜನರಾಗಿದ್ದರು.

ದಿನಾಚರಣೆಗೂ ಪ್ರೋತ್ಸಾಹವಿಲ್ಲ
ಪ್ರತೀ ವರ್ಷ ಎ.15ರಂದು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತದೆ. ಆದರೆ ಉಡುಪಿ ಜಿಲ್ಲೆಯಲ್ಲಿ ತಮ್ಮ ಸ್ವ ಆಸಕ್ತಿಯಿಂದ ಈ ದಿನವ ನ್ನು ಆಚರಿಸುವವರಿಗೂ ಅಕಾಡೆಮಿ ಯಾವ ಪ್ರೋತ್ಸಾಹವನ್ನೂ ನೀಡುತ್ತಿಲ್ಲ.

ಪ್ರೋತ್ಸಾಹ ಅಗತ್ಯಲಲಿತ ಕಲೆಗಳು ಮುಖ್ಯವಾಗಿ ಬಣ್ಣಗಳು ಮತ್ತು ಚಿತ್ರಗಳಿಂದ ನಮ್ಮ ಕಲ್ಪನೆಗೆ ಹತ್ತಿರವಾಗಿರುತ್ತದೆ. ಸ್ವತ್ಛ ನಗರಗಳ ಅಂದ ಹೆಚ್ಚಿಸಲು ಅಭಿವೃದ್ಧಿ ಚಟುವಟಿಕೆ ಜತೆಗೆ ಕಲಾನೈಪುಣ್ಯದ ಮೂಲಕ ಮತ್ತಷ್ಟು ಶ್ರೀಮಂತಗೊಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಅಕಾಡೆಮಿಗಳು ಕಲಾವಿದರಿಗೆ ಮತ್ತಷ್ಟು ಪ್ರೋತ್ಸಾಹ ನೀಡುವ ಕೆಲಸವನ್ನು ಮಾಡ ಬೇಕು ಎನ್ನುತ್ತಾರೆ ಜಿಲ್ಲೆಯ ಹಿರಿಯ ಚಿತ್ರಕಲಾವಿದರು. ರಾಜ್ಯದಲ್ಲಿ ಉಡುಪಿಯ ಆರ್ಟಿಸ್ಟ್‌ ಫಾರಂ ಹಾಗೂ ಧಾರವಾಡದ ಕಲಾಸಂಗಮ ಕೇಂದ್ರವನ್ನು ಕೇಂದ್ರ ಲಲಿತ ಕಲಾ ಅಕಾಡೆಮಿ ಗುರುತಿಸಿದ್ದರೂ ಜಿಲ್ಲೆಯ ಪ್ರತಿನಿಧಿ ನೇಮಕದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಈ ಬಗ್ಗೆ ಸ್ಥಳೀಯ ಶಾಸಕರು ಹಾಗೂಜಿಲ್ಲೆಯವರೇ ಆದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ.ಸುನಿಲ್‌ ಕುಮಾರ್‌ ಅವರು ಗಮನಹರಿಸುವ ಅಗತ್ಯ ಇದೆ.

ಇದನ್ನೂ ಓದಿ:ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ, ಪ್ರತಿಭಟನಾ ಸಭೆ

ಕಲೆ, ಕಲಾಭಿಮಾನ ಉಳಿಯಲಿ
ಪ್ರತೀ ಶಾಲೆಗಳಲ್ಲಿ ಚಿತ್ರಕಲೆಯನ್ನು ಕಡ್ಡಾಯ ಮಾಡಬೇಕು. ಈಗಾಗಲೇ ಹಲವೆಡೆ ಚಿತ್ರಕಲೆಗೆ ಸಂಬಂಧಿಸಿದಂತೆ ಪದವಿ ತರಗತಿಗಳಿದ್ದು, ಇಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸುವ ಕೆಲಸವೂ ಆಗಬೇಕಿದೆ. ಇಂತಹ ಪ್ರೋತ್ಸಾಹ ಅಕಾಡೆಮಿಯಿಂದ ಲಭಿಸಿದರಷ್ಟೇ ಕಲಾ ಚಟುವಟಿಕೆ ಉಳಿದು ಮತ್ತಷ್ಟು ಬೆಳೆಯಲು ಸಾಧ್ಯವಿದೆ.

ಜಿಲ್ಲೆಯವರಿಗೆ ಅವಕಾಶ ನೀಡಲಿ
ಜಿಲ್ಲೆಯಲ್ಲಿ ಆರ್ಟಿಸ್ಟ್‌ ಫಾರಂ ಮೂಲಕ ಹಲವಾರು ಕಲಾಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಇದಕ್ಕೆ ಪೂರಕವಾಗಿ ಅಕಾಡೆಮಿ ಜಿಲ್ಲೆಯ ಚಿತ್ರಕಲಾವಿದರನ್ನು ಅಕಾಡೆಮಿ ಸದಸ್ಯರನ್ನಾಗಿಸಿದರೆ ಮತ್ತಷ್ಟು ಕಲಾ ಚಟುವಟಿಕೆ ನಡೆಸಲು ಪೂರಕವಾಗಲಿದೆ.
-ಯು.ರಮೇಶ್‌ ರಾವ್‌,
ಅಧ್ಯಕ್ಷರು, ಆರ್ಟಿಸ್ಟ್‌ ಫಾರಂ ಉಡುಪಿ

– ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.