![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 11, 2021, 10:30 AM IST
ನವದೆಹಲಿ:ಮದುವೆಯ ನೆಪದಲ್ಲಿ ಯುವ ಹಿಂದೂ ಯುವಕ ಮತ್ತು ಯುವತಿಯರನ್ನು ಮತಾಂತರ ಮಾಡುವುದು ತಪ್ಪು ಎಂದಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್, ಯುವಕ, ಯುವತಿಯರಲ್ಲಿ ತಮ್ಮ ಧರ್ಮ ಮತ್ತು ಸಂಪ್ರದಾಯಗಳ ಬಗ್ಗೆ ಹೆಮ್ಮೆ ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಆಳ್ವಾಸ್ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ
“ಮತಾಂತರ ಹೇಗೆ ನಡೆಯುತ್ತಿದೆ? ಹಿಂದು ಯುವಕ, ಯುವತಿಯರು ಇತರ ಧರ್ಮಗಳನ್ನು ಮದುವೆಯಂತಹ ಸಣ್ಣ ಸ್ವಾರ್ಥಕ್ಕಾಗಿ ಹೇಗೆ ಮತಾಂತರವಾಗುತ್ತಿದ್ದಾರೆ? ಯಾರು ಇದನ್ನು ಮಾಡುತ್ತಿದ್ದಾರೋ ಅದು ತಪ್ಪು. ಆದರೆ ಅದು ಬೇರೆ ವಿಷಯವಾಗಿದೆ” ಎಂದು ಭಾಗವತ್ ತಿಳಿಸಿರುವುದಾಗಿ ವರದಿ ಹೇಳಿದೆ.
ನಾವು ನಮ್ಮ ಮಕ್ಕಳನ್ನು ಪೋಷಿಸುವುದಿಲ್ಲವೇ? ನಾವು ಮನೆಯಲ್ಲೇ ಅವರಿಗೆ ನಮ್ಮ ಧರ್ಮದ ಬಗ್ಗೆ ತಿಳಿಸಿಕೊಡಬೇಕು. ನಾವು ನಮ್ಮ ಬಗ್ಗೆ, ನಮ್ಮ ಧರ್ಮದ ಬಗ್ಗೆ, ನಮ್ಮ ಸಂಪ್ರದಾಯ, ಪೂಜೆಗಳನ್ನು ಗೌರವಿಸುವುದನ್ನು ಕಲಿಸಿಕೊಡಬೇಕಾಗಿದೆ ಎಂದು ಮೋಹನ್ ಭಾಗವತ್ ಅವರು ಭಾನುವಾರ ಉತ್ತರಾಖಂಡ್ ನಲ್ಲಿ ನಡೆದ ಆರ್ ಎಸ್ ಎಸ್ ಕಾರ್ಯಕರ್ತರ ಮತ್ತು ಕುಟುಂಬ ಸದಸ್ಯರನ್ನು ಉದ್ದೇಶಿಸಿ ಮಾತನಾಡುತ್ತ ಹೇಳಿದರು.
ಈ ಪ್ರಶ್ನೆ ಬಗ್ಗೆ ಜನರು ಯಾವುದೇ ಗೊಂದಲಕ್ಕೀಡಾಗದೇ ಉತ್ತರಿಸಬೇಕಾಗಿದೆ. ಒಂದು ವೇಳೆ ಮತಾಂತರದ ಪ್ರಶ್ನೆ ಎದುರಾದರೆ ಅದಕ್ಕೆ ತಕ್ಕ ಉತ್ತರ ಕೊಡಬೇಕು. ಆ ಬಗ್ಗೆ ನಮ್ಮಲ್ಲಿ ಗೊಂದಲ ಇರಬಾರದು. ನಾವು ನಮ್ಮ ಮಕ್ಕಳನ್ನು ಆ ರೀತಿಯಲ್ಲಿ ಬೆಳೆಸಬೇಕಾಗಿದೆ ಎಂದು ಭಾಗವತ್ ತಿಳಿಸಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.