![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 11, 2021, 9:36 PM IST
ಚಾಮರಾಜನಗರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೋಯರ್ ಹರ್ಷಲ್ ನಾರಾಯಣ ರಾವ್ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಅವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಲಾಗಿದೆ.
ಹರ್ಷಲ್ ಅವರನ್ನು ವಿಜಯನಗರ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ನೇಮಕ ಮಾಡಲಾಗಿದೆ. ಚಾಮರಾಜನಗರ ಜಿ.ಪಂ. ನೂತನ ಸಿಇಒ ಆಗಿ ಕೆ.ಎಂ. ಗಾಯತ್ರಿ ನೇಮಕಗೊಂಡಿದ್ದಾರೆ. ಪ್ರಸ್ತುತ ಅವರು ಮೈಸೂರಿನ ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಿರ್ದೆಶಕರಾಗಿದ್ದರು. ಗಾಯತ್ರಿ ಅವರು ಈ ಹಿಂದೆ ಚಾಮರಾಜನಗರ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ಸಿಸಿಎಫ್ ಮನೋಜ್ಕುಮಾರ್ ವರ್ಗ:
ಚಾಮರಾಜನಗರ ವೃತ್ತದ ಮುಖ್ಯ ಅರಣ್ಯಸಂರಕ್ಷಣಾಧಿಕಾರಿ (ಸಿಸಿಎಫ್) ಆಗಿದ್ದ ಮನೋಜ್ ಕುಮಾರ್ ಅವರನ್ನು ಜಂಗಲ್ ಲಾಡ್ಡಸ್ ಅಂಡ್ ರೆಸಾರ್ಟ್ಸ ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
(ಮನೋಜ್ ಕುಮಾರ್ ಸಿಸಿಎಫ್)
ವರ್ಗಾವಣೆಗೊಂಡ ಮನೋಜ್ ಕುಮಾರ್ ಅವರ ಜಾಗಕ್ಕೆ ಉಪೇಂದ್ರ ಪ್ರತಾಪ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಉಪೇಂದ್ರ ಪ್ರತಾಪ್ ಸಿಂಗ್ ಅವರು ಜವಳಿ ಅಭಿವೃದ್ಧಿ ಆಯುಕ್ತರಾಗಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.