ಕಲಬುರಗಿಯಲ್ಲಿ ಲಘು ಭೂಕಂಪ : 4.1 ತೀವ್ರತೆ ದಾಖಲು
Team Udayavani, Oct 12, 2021, 7:48 AM IST
ಕಲಬುರಗಿ: ಜಿಲ್ಲೆಯ ಹಲವೆಡೆ ಭೂಮಿ ಮತ್ತೆ ಕಂಪಿಸಿದ್ದು. ಚಿಂಚೋಳಿ ಮತ್ತು ಕಾಳಗಿ ತಾಲೂಕಿನಲ್ಲಿ ಲಘು ಭೂಕಂಪನ ಉಂಟಾಗಿದೆ.
ಸೋಮವಾರ ರಾತ್ರಿ 9.54ರ ಸುಮಾರಿಗೆ ಭೂಮಿ ಕಂಪಿಸಿರುವ ಅನುಭವ ಆಗಿದೆ. ರಿಕ್ಟರ್ ಮಾಪಕದಲ್ಲಿ 4.1ರಷ್ಟು ತೀವ್ರತೆ ದಾಖಲಾಗಿದೆ. ಚಿಮ್ಮನಚೋಡ, ಮುಕರಂಬಾ, ಟೆಂಗಳಿ, ಕೋಡ್ಲಿ, ಹೊಡೆಬಿರನಳ್ಳಿ, ಗಡಿಕೇಶ್ವರ, ಹೊಸಳ್ಳಿ, ತಾಜಾಲಾಪುರ ಸೇರಿ ಹಲವು ಗ್ರಾಮಗಳಲ್ಲಿ ಭೂಕಂಪನವಾಗಿದೆ.
ರಾತ್ರಿ ಭೂಮಿ ಕಂಪಿಸುತ್ತಿದ್ದಂತೆ ಕೆಲ ಗ್ರಾಮಗಳ ಜನರು ಮನೆಯಿಂದ ಓಡಿ ಬಂದಿದ್ದಾರೆ. ಜಿಲ್ಲೆಯಲ್ಲಿ ಪದೇ-ಪದೇ ಭೂಮಿ ಕಂಪಿಸುತ್ತಿರುವ ಹಿನ್ನೆಲೆ ಜನರಲ್ಲಿ ಆತಂಕ ಹೆಚ್ಚಾಗಿದೆ
ಶನಿವಾರ ಮತ್ತು ರವಿವಾರ ಕೂಡ ಭೂಕಂಪನವಾಗಿತ್ತು. ರವಿವಾರ ರಿಕ್ಟರ್ ಮಾಪಕದಲ್ಲಿ 3.4ರಷ್ಟು ತೀವ್ರತೆ ದಾಖಲಾಗಿತ್ತು. ಗಡಿಕೇಶ್ವರ, ತೇಗಲತಿಪ್ಪಿ, ಬೆನಕನಳ್ಳಿ, ಭೂತನೂರ, ಹೊಸಳ್ಳಿ ಮತ್ತಿತರ ಗ್ರಾಮಗಳಲ್ಲಿ ಭೂಮಿ ಕಂಪಿಸಿತ್ತು. ಚಿಂಚೋಳಿ ಭಾಗದಲ್ಲಿ ನಿರಂತರವಾಗಿ ಭೂಮಿ ಕಂಪಿಸುತ್ತಿದ್ದರೂ ಸರ್ಕಾರ ಮತ್ತು ಅಧಿಕಾರಿಗಳು ಮಾತ್ರ ಗಮನಹರಿಸಿಲ್ಲ ಎಂದು ಸಿಟ್ಟಿಗೆದ್ದ ಗ್ರಾಮಸ್ಥರು ಸೋಮವಾರ ಹೋರಾಟ ಕೂಡ ಮಾಡಿದ್ದರು.
ಭೂಮಿಯಲ್ಲಿ ಕಂಪನವಾದಾಗ ಅಧಿಕಾರಿಗಳು ಬರುತ್ತಾರೆ, ಹೋಗುತ್ತಾರೆ. ನಮಗೆ ನಿಖರವಾದ ಮಾಹಿತಿಯನ್ನೇ ಹೇಳುವುದಿಲ್ಲ. ಅಪಾಯದ ಮುನ್ಸೂಚನೆ ಇದ್ದರೆ ಗ್ರಾಮಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿ ಎಂಬುದು ಭೀತಿಗೊಳಗಾದ ಗ್ರಾಮಸ್ಥ ಒತ್ತಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.