ಸಮರ್ಪಕವಾಗಿ ಉದ್ಯೋಗ ನೀತಿ ಜಾರಿಯಾಗಲಿ


Team Udayavani, Oct 13, 2021, 6:20 AM IST

ಸಮರ್ಪಕವಾಗಿ ಉದ್ಯೋಗ ನೀತಿ ಜಾರಿಯಾಗಲಿ

ಕಳೆದ ಎರಡು ವರ್ಷಗಳಿಂದ ಕಾಡುತ್ತಿರುವ ಕೋವಿಡ್‌ ಸೋಂಕಿನಿಂದಾಗಿ ಜನರ ಜತೆಗೆ ಕಾರ್ಖಾನೆಗಳು, ಕಂಪೆನಿಗಳು, ಸಣ್ಣ ಕೈಗಾರಿಕೆಗಳು, ಬೃಹತ್‌ ಕೈಗಾರಿಕೆಗಳು, ರಿಯಲ್‌ ಎಸ್ಟೇಟ್‌ ಸೇರಿದಂತೆ ಹೆಚ್ಚು ಕಡಿಮೆ ಎಲ್ಲ ಉದ್ಯಮಗಳು ನಷ್ಟಕ್ಕೀಡಾಗಿವೆ. ಇದು ನೇರವಾಗಿ ತಟ್ಟಿರುವುದು ಉದ್ಯೋಗಿಗಳ ಮೇಲೆ. ಒಂದು ವೇತನ ಕಡಿತ,ಮತ್ತೊಂದು ಉದ್ಯೋಗದಿಂದ ವಜಾದಂಥ ಪರಿಣಾಮಗಳು. ಇದಷ್ಟೇ ಅಲ್ಲ, ಹೊಸ ಹೊಸ ಉದ್ಯೋಗಗಳು ಸೃಷ್ಟಿಯಾಗುವಲ್ಲಿಯೂ ವಿಳಂಬವಾಗುತ್ತಿರುವುದು ಉಂಟು. ಈ ನಿಟ್ಟಿನಲ್ಲಿ ಕೇಂದ್ರ ಸರಕಾರವೂ ಸೇರಿದಂತೆ ಎಲ್ಲ ರಾಜ್ಯ ಸರಕಾರಗಳು ಉದ್ಯೋಗ ಸೃಷ್ಟಿಗಾಗಿ ಒಂದಿಲ್ಲೊಂದು ಪೂರಕ ಸನ್ನಿವೇಶಗಳನ್ನು ಸೃಷ್ಟಿಸುತ್ತಲೇ ಇವೆ.

ಇದರ ಬೆನ್ನಲ್ಲೇ ಕರ್ನಾಟಕ ಸರಕಾರ, ಉದ್ಯೋಗಗಳನ್ನು ಸೃಷ್ಟಿಸುವ ಸಲುವಾಗಿಯೇ ಉದ್ಯೋಗ ನೀತಿ ಜಾರಿ ಮಾಡಲು ಮುಂದಾಗಿದೆ. ಇಂಥ ನೀತಿ ಜಾರಿ ಮಾಡುವ ರಾಜ್ಯಗಳ ಪೈಕಿ ಅಗ್ರ ಸ್ಥಾನದಲ್ಲಿರುವ ಕರ್ನಾಟಕ, ಹೆಚ್ಚು ಉದ್ಯೋಗ ಸೃಷ್ಟಿಸುವವರಿಗೆ ಪ್ರೋತ್ಸಾಹಧನ ನೀಡಲೂ ನಿರ್ಧರಿಸಿದೆ. ಸೋಮವಾರವಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಈ ಉದ್ಯೋಗ ನೀತಿ ಜಾರಿ ಬಗ್ಗೆ ಘೋಷಿಸಿದ್ದಾರೆ.

ಕರ್ನಾಟಕ ಸರಕಾರ ಈಗಾಗಲೇ ಸ್ಟಾರ್ಟ್‌ಆ್ಯಪ್‌ ನೀತಿ, ಕೈಗಾರಿಕ ನೀತಿ ಸೇರಿದಂತೆ ವಿವಿಧ ಉದ್ಯಮಿಗಳ ಪ್ರೋತ್ಸಾಹಕ್ಕಾಗಿ ಹಲವಾರು ಕ್ರಮಗಳನ್ನು ಜಾರಿ ಮಾಡಿದೆ. ಈ ವಿಚಾರದಲ್ಲಿ ರಾಜ್ಯ ಸರಕಾರ ಯಶಸ್ವಿಯೂ ಆಗಿದೆ. ಸ್ಟಾರ್ಟ್‌ಆ್ಯಪ್‌ ನೀತಿಯಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಹೊಸ ಹೊಸ ಸ್ಟಾರ್ಟ್‌ಆ್ಯಪ್‌ಗಳು ರಚನೆಯಾಗಿ ಸಾವಿರಾರು ಮಂದಿಗೆ ಉದ್ಯೋಗವನ್ನೂ ನೀಡಿವೆ.

ಹಾಗೆಯೇ ಕೈಗಾರಿಕ ನೀತಿಯಿಂದಲೂ ಕೈಗಾರಿಕೆ ಆರಂಭವೂ ಸೇರಿದಂತೆ ವಿವಿಧ ವಿಚಾರಗಳಲ್ಲಿ ಸುಲಭವಾಗಿ ಸರಕಾರದ ಒಪ್ಪಿಗೆಗಳು ಸಿಗುತ್ತಿವೆ. ಬೇರೆ ಬೇರೆ ದೇಶಗಳಿಂದ ಬಂದು ಇಲ್ಲಿ ಹೂಡಿಕೆ ಮಾಡಿ ಕೈಗಾರಿಕೆಗಳನ್ನು ಸ್ಥಾಪಿಸಲಾಗುತ್ತಿದೆ. ಉದ್ಯೋಗ ಸೃಷ್ಟಿಯೂ ಆಗುತ್ತಿದೆ.

ಇದೇ ರೀತಿಯಲ್ಲಿ ಈಗ ಉದ್ಯೋಗ ನೀತಿಯನ್ನು ರೂಪಿಸಲು ನಿರ್ಧರಿಸಲಾಗಿದೆ. ಈ ಉದ್ಯೋಗ ನೀತಿಯ ಉದ್ದೇಶವೊಂದೇ. ಕೊರೊನಾ ಅನಂತರದಲ್ಲಿ ಕಡಿಮೆಯಾಗಿರುವ ಉದ್ಯೋಗ ಸೃಷ್ಟಿ ಮತ್ತು ಹೊಸ ಉದ್ಯೋಗ ಸೃಷ್ಟಿ ಮಾಡಬೇಕು ಎಂಬುದಾಗಿದೆ. ಇದರ ಜತೆಗೆ ಸಂಶೋಧನೆ ಮತ್ತು ಅಭಿವೃದ್ಧಿಗೆ ಉತ್ತೇಜನ ನೀಡುವ ಸಲುವಾಗಿಯೂ ಹೊಸ ನೀತಿಯೊಂದನ್ನು ಜಾರಿಗೊಳಿಸಲೂ ಉದ್ದೇಶಿಸಲಾಗಿದೆ.

ಇದನ್ನೂ ಓದಿ:ಐಟಿ ದಾಳಿಗೆ ಸಿದ್ದರಾಮಯ್ಯ ಕಾರಣ: ಎಚ್‌ಡಿಕೆ

ಜತೆಗೆ ಉದ್ಯೋಗ ನೀಡುವವರಿಗೆ ಪ್ರೋತ್ಸಾಹ ಧನ ನೀಡುವ ಅಂಶ ಇರುವುದೂ ಉತ್ತಮ ವಿಚಾರವೇ. ಇದು ಉದ್ಯೋಗದಾತರಿಗೆ

ಒಂದು ರೀತಿ ಪ್ರೇರಕ ಶಕ್ತಿಯಂತೆ ಆಗಲಿದ್ದು ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಇಲ್ಲಿನವರಿಗೇ ಹೆಚ್ಚು ಉದ್ಯೋಗ ನೀಡಲು ಉತ್ತಮ ವೇದಿಕೆಯಂತೆ ಆಗಲಿದೆ.

ಈಗಂತೂ ಉದ್ಯೋಗ ನೀತಿ ಜಾರಿ ಬಗ್ಗೆ ಸ್ವಯಂ ಮುಖ್ಯಮಂತ್ರಿಗಳೇ ಘೋಷಣೆ ಮಾಡಿದ್ದಾರೆ. ಆದರೆ ಇದು ಕೇವಲ ಪೇಪರ್‌ನಲ್ಲಿ ಅಥವಾ ಘೋಷಣೆ ರೂಪದಲ್ಲಿ ಉಳಿಯುವಂತೆ ಆಗಬಾರದು. ಸರಕಾರದ ಈ ಉದ್ದೇಶ ಜಾರಿಯಾಗುವಲ್ಲಿ ಅಧಿಕಾರಿಗಳ ಪಾತ್ರವೂ ಬಹುಮುಖ್ಯ. ಹೀಗಾಗಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತ್ವರಿತಗತಿಯಲ್ಲಿ ಕೆಲಸ ಮಾಡಿ ಉದ್ಯೋಗ ನೀತಿಯನ್ನು ಜಾರಿ ಮಾಡಲು ಪ್ರಯತ್ನಿಸಬೇಕು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.