ವಿವಿಗಳು ಸಂಶೋಧನಾ ಚಟುವಟಿಕೆಗೆ ಆದ್ಯತೆ ನೀಡಿ

ಫಿಸಿಟಾಲ್‌ ಸೆಂಟರ್‌ ಆಫ್ ಅಕಾಡೆಮಿಕ್ಸ್‌ಗೆ ಚಾಲನೆ ನೀಡಿದ ಡಾ.ಕೆ.ಸುಧಾಕರ್‌ ಸಲಹೆ

Team Udayavani, Oct 13, 2021, 11:13 AM IST

ವಿವಿಗಳು ಸಂಶೋಧನಾ ಚಟುವಟಿಕೆಗೆ ಆದ್ಯತೆ ನೀಡಿ

ಬೆಂಗಳೂರು: ಆವಿಷ್ಕಾರ, ಸಂಶೋಧನೆಗಳಿಂದಲೇ ಪ್ರಗತಿ ಸಾಧ್ಯವಾಗಿದ್ದು, ಪ್ರತಿ ವಿಶ್ವವಿದ್ಯಾಲಯಗಳು ಸಂಶೋಧನಾ ಚಟುವಟಿಕೆಗೆ ಆದ್ಯತೆ ನೀಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಮಂಗಳವಾರ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಫಿಸಿಟಾಲ್‌ ಸೆಂಟರ್‌ ಆಫ್ ಅಕಾಡೆಮಿಕ್ಸ್‌ಗೆ ಚಾಲನೆ ನೀಡಿ ಮಾತನಾಡಿ, ಖಾಸಗಿ ವೈದ್ಯಕೀಯ ಕಾಲೇಜುಗಳು ಬಹಳಷ್ಟಿವೆ. ಆದರೆ ಚಿಕಿತ್ಸೆ, ಶಿಕ್ಷಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು.

ಕೋವಿಡ್‌ ಲಸಿಕೆಯನ್ನು ಆಕ್ಸ್‌ಫ‌ರ್ಡ್‌ ವಿಶ್ವವಿದ್ಯಾನಿಲಯ ಆವಿಷ್ಕಾರ ಮಾಡಿದೆ. ಅದೇ ರೀತಿ ನಮ್ಮಲ್ಲೂ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಆದ್ಯತೆ ನೀಡಬೇಕು. ಹಾಗೆಯೇ ಯುವಜನರು ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳ ಬೇಕು. ಅನೇಕ ಯುವಜನರು ವೈದ್ಯರಾಗಬೇಕೆಂದು ಮುಂದೆ ಬರುತ್ತಾರೆ. ಆದರೆ ಎಷ್ಟು ಜನರು ಸಂಶೋಧಕರಾಗಲು ಮುಂದೆ ಬರುತ್ತಾರೆ ಎಂದು ಚಿಂತನೆ ನಡೆಸಬೇಕಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರತಿ ರಾಜ್ಯದಲ್ಲಿ ಏಮ್ಸ… ನಿರ್ಮಿಸಲು ಕ್ರಮ ವಹಿಸಿದೆ. ಪ್ರತಿ ಜಿÇÉೆಯಲ್ಲಿ ಉತ್ತಮ ಆರೋಗ್ಯ ಸೌಲಭ್ಯ ಒದಗಿಸಬೇಕು. ಇದಕ್ಕಾಗಿ ರಾಜ್ಯದ ನಾಲ್ಕು ಕಡೆಗಳಲ್ಲಿ ಮೆಡಿಕಲ್‌ ಕಾಲೇಜುಗಳು ಶೀಘ್ರ ಆರಂಭವಾಗಿದೆ. ಇತ್ತೀಚೆಗೆ ಅಟಲ್‌ ಬಿಹಾರಿ ವಾಜಪೇಯಿ ಮೆಡಿಕಲ್‌ ಕಾಲೇಜು ಆರಂಭಿಸಲಾಗಿದೆ ಎಂದು ಸುಧಾಕರ್‌ ತಿಳಿಸಿದರು. ಪ್ರತಿ ಜಿಲ್ಲೆಗಳಲ್ಲಿ ಹೃದಯ ಸಂಬಂಧಿ ಆರೋಗ್ಯ ಸೌಲಭ್ಯಗಳನ್ನು ನೀಡಬೇಕಿದೆ.

ಇದನ್ನೂ ಓದಿ:- ಶಿವಮೊಗ್ಗ ಸೇರಿದಂತೆ 3 ರಾಜ್ಯಗಳ 20ಕ್ಕೂ ಹೆಚ್ಚು ಕಡೆ NIA ದಾಳಿ

ಜಯದೇವ ಆಸ್ಪತ್ರೆ ಯಾವುದೇ ಕಾರ್ಪೊರೇಟ್‌ ಸಂಸ್ಥೆಗೆ ಕಡಿಮೆ ಇಲ್ಲದಂತೆ ಬೆಳೆದಿದೆ. ಈ ಆಸ್ಪತ್ರೆಯಲ್ಲಿ ಸದಾ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುತ್ತದೆ. ಅದೇ ರೀತಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಏಕೆ ಬೆಳೆಯುವುದಿಲ್ಲ ಎಂದು ಚಿಂತಿಸಬೇಕಿದೆ. ಪ್ರತಿ ವೈದ್ಯರು, ಆಡಳಿತ ಮಂಡಳಿ ಇದನ್ನು ಮಾದರಿಯಾಗಿಸಿ ಬದ್ಧತೆ, ಜವಾಬ್ದಾರಿ ವಹಿಸಿಕೊಂಡು ಆಸ್ಪತ್ರೆಯನ್ನು ಅಭಿವೃದ್ಧಿ ಮಾಡಬೇಕು ಎಂದು ತಿಳಿಸಿದರು. ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ಇತರರು ಇದ್ದರು.

ವೈದ್ಯಕೀಯ ಸಾಧನ ರಫ್ತು ಸಾಮರ್ಥ್ಯ ಭಾರತಕ್ಕಿದೆ-

 ಬೆಂಗಳೂರು: ಮೇಕ್‌ ಇನ್‌ ಇಂಡಿಯಾದಿಂದಾಗಿ ಹೊರದೇಶಗಳಿಗೂ ವೈದ್ಯಕೀಯ ಸಾಧನಗಳನ್ನು ರಫ್ತು ಮಾಡುವ ಸಾಮರ್ಥ್ಯ ಬಂದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಮಂಗಳವಾರ ಐಐಟಿಪಿಎಲ್‌ನ ನೂತನ ಕ್ಯಾತ್‌ ಲ್ಯಾಬ್‌ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿ ಮಾತನಾಡಿ, ಕೋವಿಡ್‌ ಆರಂಭದಲ್ಲಿ ವೈದ್ಯಕೀಯ ಸಾಧನಗಳ ಕೊರತೆ ಇತ್ತು. ಹೆಚ್ಚಿನ ವೈದ್ಯಕೀಯ ಉಪಕರಣಗಳಿಗಾಗಿ ನಾವು ಬೇರೆ ದೇಶಗಳನ್ನು ಅವಲಂಬಿಸಿದ್ದೇವೆ. ಪಿಪಿಇ ಕಿಟ್‌ಗೂ ಚೀನಾವನ್ನು ಅವಲಂಬಿಸಬೇಕಾಗಿತ್ತು.

ನಂತರ ಪ್ರಧಾನಿ ಮೋದಿಯವರ ಪ್ರಯತ್ನದಿಂದ ಅನೇಕ ದೇಶೀಯ ಕಂಪನಿಗಳು ಮಾಸ್ಕ…, ಪಿಪಿಇ ಕಿಟ್‌ ತಯಾರಿಸಿ ವಿದೇಶಗಳಿಗೂ ರಫ್ತು ಮಾಡುವಂತಾಯಿತು. ಇದರಿಂದ ನವಭಾರತ ನಿರ್ಮಾಣ ಸಾಧ್ಯವಾಗಿದೆ ಎಂದರು. ನರೇಂದ್ರ ಮೋದಿಯವರು ದೇಶದ ಅಭಿವೃದ್ಧಿಗಾಗಿ ‘ಮೇಕ್‌ ಇನ್‌ ಇಂಡಿಯಾ’ ಕರೆ ನೀಡಿದ್ದಾರೆ.

ಉತ್ಪಾದನಾ ವಲಯದಲ್ಲಿ ಎಫ್ ಡಿ ಐ ಹೂಡಿಕೆ 2014 ಕ್ಕಿಂತ ಮುನ್ನ 20 ಬಿಲಿಯನ್‌ ಡಾಲರ್‌ ಇತ್ತು. ಈಗ ಮೂರು ಪಟ್ಟು ಹೆಚ್ಚಿದ್ದು, 68 ಬಿಲಿಯನ್‌ ಡಾಲರ್‌ ಹೂಡಿಕೆ ಬಂದಿದೆ. ಇನ್ನು ಐಐಟಿಪಿಎಲ್‌ ಕಂಪನಿ ಆತ್ಮನಿರ್ಭರ ಭಾರತದ ಪರಿಕಲ್ಪನೆಯನ್ನು ಸರಿಯಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.