ಸಾವರ್ಕರ್ ಗೆ ಕ್ಷಮಾಪಣಾ ಪತ್ರ ಬರೆಯಲು ಸಲಹೆ ಕೊಟ್ಟಿದ್ದು ಮಹಾತ್ಮ ಗಾಂಧಿ; ಸಿಂಗ್
ವ್ಯಕ್ತಿತ್ವಕ್ಕೆ ಧಕ್ಕೆ ತರುವುದು ಸೂಕ್ತವಾದುದಲ್ಲ ಮತ್ತು ಸಮರ್ಥಿಸಿಕೊಳ್ಳುವಂತದ್ದಲ್ಲ.
Team Udayavani, Oct 13, 2021, 4:37 PM IST
ನವದೆಹಲಿ: ಸ್ವಾತಂತ್ರ್ಯ ಹೋರಾಟದ ವೇಳೆ ವೀರ್ ವಿನಾಯಕ ದಾಮೋದರ್ ಸಾವರ್ಕರ್ ಅವರು ಅಂಡಮಾನ್ ಜೈಲಿನಲ್ಲಿದ್ದಾಗ ಕ್ಷಮಾಪಣಾ ಪತ್ರ ಬರೆಯುವಂತೆ ಸಲಹೆ ನೀಡಿದ್ದು ಮಹಾತ್ಮ ಗಾಂಧಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಆತಂಕಕ್ಕೆ ಕಾರಣವಾದ ಸೂಟ್ ಕೇಸ್: ಒಳಗೇನಿತ್ತು ಗೊತ್ತಾ ?
ಸಾವರ್ಕರ್ ಕುರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು, ಸಾವರ್ಕರ್ ಬಗ್ಗೆ ಸುಳ್ಳನ್ನು ಹಬ್ಬಿಸಲಾಗುತ್ತಿದೆ. ಅಂಡಮಾನ್ ಜೈಲಿನಿಂದ ಬಿಡುಗಡೆ ಮಾಡುವಂತೆ ಕೋರಿ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದರು. ಆದರೆ ಕ್ಷಮಾಪಣಾ ಪತ್ರ ಬರೆಯುವಂತೆ ಸಲಹೆ ನೀಡಿದ್ದು, ಮಹಾತ್ಮ ಗಾಂಧಿ ಎಂದು ಹೇಳಿದರು.
ಸಾವರ್ಕರ್ ರಾಷ್ಟ್ರೀಯತೆಯ ಪ್ರತೀಕ ಎಂದ ರಕ್ಷಣಾ ಸಚಿವ ಸಿಂಗ್, ಮಾರ್ಕ್ಸ್ ವಾದಿಗಳು ಮತ್ತು ಲೆನಿನ್ ನಿಷ್ಟ್ ಸಿದ್ಧಾಂತ ಹೊಂದಿರುವ ಜನರು ಸಾವರ್ಕರ್ ಅವರನ್ನು ಫ್ಯಾಸಿಸ್ಟ್ ಎಂದು ಕರೆದಿದ್ದಾರೆ ಎಂದು ತಿಳಿಸಿದರು.
ಸಾವರ್ಕರ್ ಅವರು ಭಾರತದ ಇತಿಹಾಸದ ಪ್ರತೀಕವಾಗಿದ್ದಾರೆ, ಮುಂದೆಯೂ ಇರುತ್ತಾರೆ. ಈ ಬಗ್ಗೆ ಕೆಲವೊಂದು ಭಿನ್ನಾಭಿಪ್ರಾಯಗಳು ಇದೆ. ಆದರೆ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವುದು ಸೂಕ್ತವಾದುದಲ್ಲ ಮತ್ತು ಸಮರ್ಥಿಸಿಕೊಳ್ಳುವಂತದ್ದಲ್ಲ. ಸಾವರ್ಕರ್ ಧೀಮಂತ ಸ್ವಾತಂತ್ರ್ಯ ಹೋರಾಟಗಾರ, ಅವರೊಬ್ಬ ರಾಷ್ಟ್ರೀಯವಾದಿ ಎಂದು ರಾಜನಾಥ್ ಸಿಂಗ್ ಹೇಳಿದರು.
ಕಮ್ಯುನಿಷ್ಟ್ ಮತ್ತು ಲೆನಿನಿಸ್ಟ್ ಸಿದ್ಧಾಂತ ನಂಬಿರುವ ಜನರು ಸಾವರ್ಕರ್ ಅವರನ್ನು ಫ್ಯಾಸಿಸ್ಟ್ ಎಂದು ಆರೋಪಿಸುತ್ತಿದ್ದಾರೆ ಎಂಬುದಾಗಿ ಸಿಂಗ್ ತಿಳಿಸಿದ್ದಾರೆ. ಸಾವರ್ಕರ್ ದೇಶಕ್ಕೆ ನೀಡಿರುವ ಕೊಡುಗೆ ಅಪಾರವಾದದ್ದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು
Puja Khedkar: ಐಎಎಸ್ ಸೇವೆಯಿಂದ ಪೂಜಾ ಖೇಡ್ಕರ್ ವಜಾ; ಕೇಂದ್ರ ಆದೇಶ
ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ
Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ
Crime: ಸೈನೈಡ್ ಮಿಶ್ರಿತ ಜ್ಯೂಸ್ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್ ಅರೆಸ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.