ಶಾಸಕರ ದರ್ಪದ ಮಾತಿಗೆ ಸಾರ್ವಜನಿಕರ ಆಕ್ರೋಶ


Team Udayavani, Oct 16, 2021, 11:54 AM IST

Public outrage over legislators’ dirty talk – issue at Nelamangala

ನೆಲಮಂಗಲ: ರಸ್ತೆ ಸಮಸ್ಯೆ ನಿಮಗೆ ತಿಳಿದಿದೆ ಸಮಸ್ಯೆ ಬಗೆಹರಿಸಿಕೊಡಿ ಸರ್‌ ಎಂದು ಕೇಳಿದ ಗ್ರಾಮದ ಯುವಕನಿಗೆ ಶಾಸಕರು ದರ್ಪದ ಉತ್ತರ ನೀಡಿರುವ ಆಡಿಯೋ ವೈರಲ್‌ ಆಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ತಾಲೂಕಿನ ಶ್ರೀನಿವಾಸಪುರ ಗ್ರಾಪಂ ಭೈರಸಂದ್ರದ ತೊರೆಪಾಳ್ಯ ಗ್ರಾಮ, ನಗರದಿಂದ 7ಕಿಮೀ ದೂರವಿದ್ದು ಉತ್ತಮ ರಸ್ತೆ ಇಲ್ಲದೆ ಕೆಸರುಗದ್ದೆ ಹಾಗೂ ಗುಂಡಿಬಿದ್ದು ಸಮಸ್ಯೆ ಎದುರಾಗಿತ್ತು.

ಅನೇಕ ಬಾರಿ ಮನವಿ ಮಾಡಿದರು ಸಮಸ್ಯೆ ಬಗೆಹರಿಸದ ಕಾರಣ ಶಾಸಕರ ವಿರುದ್ಧ ಅ.11ರಂದು ತೊರೆಪಾಳ್ಯಗ್ರಾಮದ ಜನರು ವಿನೂತನ ಪ್ರತಿಭಟನೆ ಮಾಡಿ ಶಾಸಕರೇ ನಮ್ಮ ಗ್ರಾಮಕ್ಕೆ ರಸ್ತೆ ಮಾಡಿಸಿಕೊಡಿ ನಿಮ್ಮ ಪಾದಪೂಜೆ ಮಾಡುವೆವು ಎಂದು ಮಾಧ್ಯಮದ ಮೂಲಕ ಮನವಿ ಮಾಡಿದ್ದರು. ಅನಂತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಮಾಡಿ ವಾಸ್ತವತೆ ಮನಗಂಡಿದ್ದರು.

ಇದನ್ನೂ ಓದಿ:- ಜನ ನನ್ನ ಕೈ ಬಿಡಲ್ಲ: ರಮೇಶ ಭೂಸನೂರ

ಕೆಸರಲ್ಲಿ ಸಿಲುಕಿದ ಕಾರು: ಪತ್ರಿಕಾ ಮಾಧ್ಯಮದಲ್ಲಿ ಸುದ್ದಿಯಾದ ತಕ್ಷಣ ಸ್ಥಳಕ್ಕೆ ಬಂದ ತಾಪಂ ಅಧಿಕಾರಿಗಳು ಹಾಗೂ ಗ್ರಾಪಂ ಅಧ್ಯಕ್ಷರು ರಸ್ತೆ ಪರಿಶೀಲನೆ ಮಾಡಿ ಹೋಗುವಾಗ ಅವರ ಕಾರು ಕೆಸರಿನಲ್ಲಿ ಸಿಲುಕಿತು. ಗ್ರಾಮಸ್ಥರು ಟ್ರ್ಯಾಕ್ಟರ್‌ಮೂಲಕ ಕಾರನ್ನು ಎಳೆದು ಹೊರಗೆ ತೆಗೆದ ಘಟನೆ ನಡೆದಿದ್ದು ಗ್ರಾಮದ ರಸ್ತೆ ಸಮಸ್ಯೆಅಧಿಕಾರಿಗಳಿಗೆ ಸ್ಥಳದಲ್ಲಿ ಅರಿವಾಗಿದೆ.

 ಜಿಲ್ಲಾಧಿಕಾರಿ ಬರುವಂತೆ ಮನವಿ: ನೆಲಮಂಗಲ ದಲ್ಲಿ ಈ ಬಾರಿ ಡಿಸಿ ನಡೆ ಹಳ್ಳಿ ಕಡೆ ಕಾರ್ಯಕ್ರಮವಿದ್ದು ಜಿಲ್ಲಾಧಿಕಾರಿಗಳು ತೊರೆಪಾಳ್ಯ ಗ್ರಾಮಕ್ಕೆ ಬಂದು ರಸ್ತೆ ಸಮಸ್ಯೆ ಬಗೆಹರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಸಾಮಾಜಿಕ ಜಾಲತಾಣದಲ್ಲಿ ಜಿಲ್ಲಾಧಿಕಾರಿಗಳು ಯಾವಾಗ ಬರುತ್ತೀರಾ ತೊರಪಾಳ್ಯಕ್ಕೆ ಎಂಬ ಸಂದೇಶ ವೈರಲ್‌ ಆಗಿದೆ.

ಶಾಸಕರ ವಿರುದ್ಧ ಆಕ್ರೋಶ: ತೊರೆಪಾಳ್ಯಗ್ರಾಮದ ಯುವಕನೊಬ್ಬ ಶಾಸಕರಿಗೆ ಕರೆ ಮಾಡಿ, ಸರ್‌ ನಾನು ನೆಲಮಂಗಲ ತಾಲೂಕಿನ ತೊರೆಪಾಳ್ಯ ಗ್ರಾಮದವನು. ನಮ್ಮ ಗ್ರಾಮದಲ್ಲಿ ರಸ್ತೆ ಸಮಸ್ಯೆ ನಿಮಗೆ ತಿಳಿದಿದೆ. ಸರಿ ಪಡಿಸಿ ಸರ್‌ ಎಂದು ಕೇಳಿರುವುದಕ್ಕೆ ಶಾಸಕ ಡಾ.ಕೆ. ಶ್ರೀನಿವಾಸಮೂರ್ತಿ ಪ್ರತಿಕ್ರಿಯಿಸಿ ಮಾಧ್ಯಮದಲ್ಲಿ ತೋರಿಸಿ ಸುದ್ದಿ ಮಾಡಿದ್ದಾರಲ್ಲ, ಅವರ ಕೈಯಲ್ಲೇ ಮಾಡಿಸಿಕೊಳ್ಳಿ, ಮಾಧ್ಯಮದವರೇ ಬಂದು ಮಾಡುತ್ತಾರೆ ಡೋಂಟ್‌ವರಿ ಎಂದು ಹೇಳಿ ಕರೆ ಕಟ್‌ ಮಾಡಿರುವ ಆಡಿಯೋ ಜಾಲ ತಾಣದಲ್ಲಿ ವೈರಲ್‌ ಆಗಿದೆ.

ಇದಕ್ಕೆ ಸಾಮಾಜಿಕ ಜಾಲತಾಣ ಸೇರಿದಂತೆ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ. ಸಮಸ್ಯೆ ವರದಿ ಮಾಡುವುದು ಮಾಧ್ಯಮದ ಕರ್ತವ್ಯ, ಹೋರಾಟ ಮಾಡಿ ಸಮಸ್ಯೆ ಬಗೆಹರಿಸುವಂತೆ ಕೇಳುವುದು ಸಂಘಟನೆಗಳ ಕರ್ತವ್ಯ, ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವುದು ಜನಪ್ರತಿನಿಧಿಯ ಕರ್ತವ್ಯ.

ಆದರೆ ಮಾಧ್ಯಮದವರೇ ಮಾಡಿಸಲಿ ಎಂಬ ಶಾಸಕರ ಬೇಜವಾಬ್ದಾರಿಯ ಹೇಳಿಕೆ ಸರಿಯಲ್ಲ, ಶಾಸಕರೇ ನಿಮ್ಮ ಕೈನಲ್ಲಿ ಆಗಲ್ಲ ಅಂದ್ರೆ ಹೇಳಿ ನಾವೇ ಭಿಕ್ಷೆಬೇಡಿ ರಸ್ತೆ ಮಾಡಿಸುತ್ತೇವೆ ಎಂದು ಕರ್ನಾಟಕ ಜನ ಸೈನ್ಯ, ಕರ್ನಾಟಕ ರಣಧೀರ ವೇದಿಕೆ ರಾಜ್ಯಾಧ್ಯಕ್ಷರು ಹಾಗೂ ರೈತಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಮಾನವಿಯತೆ ಮರೆತ ಶಾಸಕ ಗ್ರಾಮದ ಜನರ ಮನವಿಗೆ ಸ್ಪಂದಿಸಿ ಸ್ಥಳ ಪರಿಶೀಲನೆ ಮಾಡಿ ಕಾಮಗಾರಿ ಮಾಡಬೇಕಾಗಿದ್ದ ಶಾಸಕರು ದರ್ಪದ ಮಾತುಗಳನ್ನು ಹೇಳುವ ಜತೆ ಕಾಮಗಾರಿ ಮಾಡಲು ಮುಂದಾಗದಿ ರುವುದು ದುರಂತವೇ ಸರಿ. ಅಧಿಕಾರಕ್ಕಾಗಿ ಮತ ಕೇಳಲು ಬರುವ ಶಾಸಕರು ಸಮಸ್ಯೆಗಳಿಗೆ ಬೆನ್ನು ತೋರಿಸಿರೋದಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.