ರೈತ ಪ್ರತಿಭಟನೆಯಲ್ಲಿ ಕ್ರಿಮಿನಲ್ ಗಳು ಸೇರಿ ತಾಲಿಬಾನ್ ವರ್ತನೆ: ಬಿಜೆಪಿ
Team Udayavani, Oct 16, 2021, 1:17 PM IST
ಹೊಸದಿಲ್ಲಿ : ‘ರೈತರ ಪ್ರತಿಭಟನೆಯಲ್ಲಿ ಕ್ರಿಮಿನಲ್ ಗಳು ಸೇರಿಕೊಂಡಿದ್ದು, ತಾಲಿಬಾನ್ ರೀತಿಯಲ್ಲಿ ವರ್ತನೆ ತೋರುತ್ತಿದ್ದಾರೆ’ ಎಂದು ಬಿಜೆಪಿ ನಾಯಕ ದುಷ್ಯಂತ್ ಕುಮಾರ್ ಗೌತಮ್ ಕಿಡಿ ಕಾರಿದ್ದಾರೆ.
ದಿಲ್ಲಿ- ಹರಿಯಾಣದ ಸಿಂಘು ಗಡಿಯಲ್ಲಿ 36 ವರ್ಷದ ದಲಿತ ವ್ಯಕ್ತಿ ಯೊಬ್ಬನನ್ನು ಅಮಾನುಷವಾಗಿ ಹತ್ಯೆಗೈದು, ಬ್ಯಾರಿಕೇಡ್ಗೆ ನೇತು ಹಾಕಿರುವ ಘಟನೆಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ದುಷ್ಯಂತ್ ಕುಮಾರ್ ಗೌತಮ್ ಈ ಹೇಳಿಕೆ ನೀಡಿದ್ದಾರೆ.
‘ರೈತ ಹೋರಾಟವನ್ನು ಕೆಲ ಕ್ರಿಮಿನಲ್ ಗಳು ಕೈಗೆತ್ತಿಕೊಂಡಿದ್ದು ತಾಲಿಬಾನ್ ರೀತಿಯಲ್ಲಿ ವರ್ತನೆ ತೋರುತ್ತಿದ್ದಾರೆ. ಈ ಹಿಂದೆ ಮಹಿಳೆಯೊಬ್ಬರನ್ನು ಅತ್ಯಾಚಾರ ಎಸಗಿ ಹತ್ಯೆಗೈಯಲಾಯಿತು, ರೈತರ ಪ್ರತಿಭಟನಾ ಸ್ಥಳಗಳಲ್ಲಿ ಇಂತಹ ದುಷ್ಕ್ರತ್ಯಗಳು ಹೆಚ್ಚುತ್ತಿರುವುದು ತಾಲಿಬಾನ್ ವರ್ತನೆಗೆ ಸಾಕ್ಷಿಯಾಗಿದೆ’ ಎಂದು ದುಷ್ಯಂತ್ ಕುಮಾರ್ ಗೌತಮ್ ಅಭಿಪ್ರಾಯ ವ್ಯಕ್ತಪಡಿಸಿದರು.
‘ಕಾಂಗ್ರೆಸ್ ಯಾಕೆ ದಲಿತ ವ್ಯಕ್ತಿಯ ಹತ್ಯೆಯ ವಿಚಾರದಲ್ಲಿ ಮೌನವಾಗಿದೆ, ರಾಜಸ್ಥಾನದಲ್ಲಿ, ಛತ್ತೀಸಘಡದಲ್ಲಿ ಹಲವು ದಲಿತರ ಮೇಲೆ ದಾಳಿಗಳಾಗಿವೆ ಆ ಬಗ್ಗೆ ಕಾಂಗ್ರೆಸ್ ಯಾಕೆ ಹೋರಾಟ ನಡೆಸುತ್ತಿಲ್ಲ’ ಎಂದು ಪಂಜಾಬ್ ಬಿಜೆಪಿ ಉಸ್ತುವಾರಿಯಾಗಿರುವ ದುಷ್ಯಂತ್ ಕುಮಾರ್ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್
ESI Hospital: ಬೆಳ್ಳಂಬೆಳಗ್ಗೆ ಇಎಸ್ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Bengaluru: ಎಎಸ್ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು
Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.