ಸೋಲೂರು ಹಾಲು ಉತ್ಪಾದಕರ ಪ್ರತಿಭಟನೆ

ಹಾಲು ಗುಣಮಟ್ಟ ಸರಿಯಿಲ್ಲ ಎಂದು ಕ್ಯಾತೆ: ಡೇರಿ ಅವ್ಯವಹಾರ ಬೆಳಕಿಗೆ

Team Udayavani, Oct 16, 2021, 4:58 PM IST

ಹಾಲು ಗುಣಮಟ್ಟ ಸರಿಯಿಲ್ಲ ಎಂದು ಕ್ಯಾತೆ- ಡೇರಿ ಅವ್ಯವಹಾರ ಬೆಳಕಿಗೆ

ಮಾಗಡಿ: ಹಾಲು ಉತ್ಪಾದಕ ಮಹಿಳೆಯರು ಹಾಲಿನ ನಷ್ಟದ ಅನ್ಯಾಯದ ವಿರುದ್ಧ ಪ್ರತಿಭಟನಾ ಧರಣಿ ನಡೆಸಿದ್ದರಿಂದ ಡೇರಿಯ ಕಾರ್ಯದರ್ಶಿ ಅವರ ಅವ್ಯವಹಾರ ಬೆಳಕಿಗೆ ಬಂತು. ಕಾರ್ಯದರ್ಶಿ ವಿರುದ್ಧ ಆಡಳಿತ ಮಂಡಳಿ ಕ್ರಮ ಕೈಗೊಂಡರೆ ಮಾತ್ರ ಸಮಸ್ಯೆ ಬಗೆ ಹರಿಯುತ್ತದೆ ಎಂದು ಬಮೂಲ್‌ ಅಧ್ಯಕ್ಷ ನರಸಿಂಹಮೂರ್ತಿ ತಿಳಿಸಿದರು.

ತಾಲೂಕಿನ ಸೋಲೂರು ಬಳಿ ಇರುವ ಹಾಲು ಶಿಥಲೀಕೇಂದ್ರದ ಬಳಿ ಹಾಲು ಖರೀದಿಸದೆ ತಡೆಹಿಡಿದಿರುವುದರ ವಿರುದ್ಧ ಬಸವನಪಾಳ್ಯದ ಹಾಲು ಉತ್ಪಾದಕ ಮಹಿಳಾ ಸಂಘದ ಸದಸ್ಯರು ನಡೆಸುತ್ತಿದ್ದ ಪ್ರತಿಭಟನಾ ಧರಣಿ ಉದ್ದೇಶಿಸಿ ಮಾತನಾಡಿದ ಅವರು, ತಾಲೂಕಿನ ತಿಪ್ಪಸಂದ್ರ ಹೋಬಳಿ ಬಸವನಪಾಳ್ಯದಲ್ಲಿ 15 ವರ್ಷಗಳ ಹಿಂದೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಪ್ರಾರಂಭಿಸಿದ್ದು, ಅಲ್ಲಿಂದ ಇಲ್ಲಿಯವರೆಗೂ ಹಾಲು ಉತ್ಪಾದಕರಿಗೆ ಡೇರಿ ಆಡಳಿತ ಮಂಡಳಿ ಯಾವುದೇ ಸವಲತ್ತು ಕೊಟ್ಟಿಲ್ಲ.

ಕಾರ್ಯ ದರ್ಶಿ ಧನಲಕ್ಷ್ಮೀ ಮಾಹಿತಿ ಕೊಟ್ಟಿಲ್ಲ, ಸಂಸ್ಥೆಯಿಂದ ಪಡೆದ ಪೀಡ್ಸ್‌ನ ಸುಮಾರು 3.80ಲಕ್ಷ ರೂ.ಹಣ ಸಂದಾಯ ಮಾಡದೆ ಬಾಕಿ ಉಳಿಸಿಕೊಂಡು ದುರ್ಬಳಕೆ ಮಾಡಿಕೊಂಡಿದ್ದಾರೆ. ಡೇರಿಯಲ್ಲಿ ಕಾರ್ಯದರ್ಶಿ ಪತಿಯದ್ದೇ ದರ್ಬಾರ್‌. ಹತ್ತಾರು ವರ್ಷಗಳಿಂದ ಜಮಾ ಖರ್ಚು ಕೊಟ್ಟಿಲ್ಲ, ಭಾರಿ ಅವ್ಯವಹಾರ ನಡೆಸಿದ್ದಾರೆ ಎಂಬ ದೂರುಗಳು ಕೇಳಿ ಬಂದಿದೆ. ಡೇರಿಯಲ್ಲಿ ವ್ಯವಹಾರಿಕ ಲೆಕ್ಕ ದಾಖಲಿಸಿಲ್ಲ.

ಇದನ್ನೂ ಓದಿ:- ಬಾಳಗಾರಿನ  ಪಂಚವಟಿಯಲ್ಲಿ ಮಾಯಾಮೃಗ!

ಕೇಳಿದರೆ ಅವ್ಯಾಚವಾಗಿ ನಿಂಧಿಸುತ್ತಾರೆ. ಜಮಾ ಖರ್ಚು ದಾಖಲಿಸದಿದ್ದರೆ ಅಧಿಕಾರಿಗಳಿಗೂ ಸಂಬಳ ನಿಲ್ಲಿಸುವಂತೆ ಸಂಸ್ಥೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದ ಲೆಕ್ಕ ಕೇಳಲು ಹೋದ ಅಧಿಕಾರಿಗಳ ವಿರುದ್ಧ ಕಾರ್ಯದರ್ಶಿ ಪತಿ ಇತರರು ತಿರುಗಿಬಿದ್ದು, ಮೊಬೈಲ್‌ ಕಸಿದು ಹಲ್ಲೆ ನಡೆಸಿದ್ದಾರೆ. ಹಾಲು ಖರೀದಿಸದಂತೆ ತಡೆಹಿಡಿದಿದ್ದಾರೆ. ಡೇರಿ ಕಾರ್ಯದರ್ಶಿ ಧನಲಕ್ಷ್ಮೀ ಅವರಿಂದ ಹಾಲು ಪೂರೈಕೆ ಮಾಡುವ ಡೇರಿ, ರೈತ ಮಹಿಳೆಯರಿಗೆ, ಸಂಸ್ಥೆಗೆ ಅನ್ಯಾಯವಾಗಿದೆ ಎಂದು ಬಮೂಲ್‌ ಅಧ್ಯಕ್ಷ ನರಸಿಂಹಮೂರ್ತಿ ಪ್ರತಿ ಭಟನಾಕಾರರಿಗೆ ಮನವರಿಕೆ ಮಾಡಿದರು.

ಹಲವು ಭಾರಿ ನ್ಯಾಯ ಪಂಚಾಯ್ತಿ ನಡೆಸಿದರೂ ಕಾರ್ಯದರ್ಶಿ ಪತಿ ತಿದ್ದುಕೊಂಡಿಲ್ಲ ಎಂದರು. ಸೋಲೂರು ಪ್ರತಿಭಟನಾ ಸ್ಥಳಕ್ಕೆ ಶಾಸಕ ಎ.ಮಂಜುನಾಥ್‌ ಭೇಟಿ ನೀಡಿ ಅಧಿಕಾರಿಗಳು, ಬಮೂಲ್‌ ಅಧ್ಯಕ್ಷ ನರಸಿಂಹಮೂರ್ತಿ ಹಾಗೂ ರೈತ ಮಹಿಳೆಯರೊಂದಿಗೆ ಡೇರಿ ಸಮಸ್ಯೆ ಕುರಿತು ಚರ್ಚಿಸಿದರು.ಸಮಸ್ಯೆ ಬಗೆಹರಿಸಿ ಡೇರಿಯಲ್ಲಿ ಹಾಲು ಶೇಖರಣೆಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಸಕ ಎ.ಮಂಜುನಾಥ್‌ ಅವರಿಗೆ ಡೇರಿಯ ಅವ್ಯವಹಾರದ ಬಗ್ಗೆ ಶಿಥಲೀಕೇಂದ್ರದ ಉಪ ವ್ಯವಸ್ಥಾಪಕ ಜವರಯ್ಯ ಮಾಹಿತಿ ನೀಡಿದರು.

ರಾಜಕೀಯ ತಿರುವು: ಬಸನಪಾಳ್ಯದ ಡೇರಿ ವಿಚಾರ ರಾಜಕೀಯ ತಿರುವು ಪಡೆದುಕೊಂಡು ಪ್ರತಿಭಟನಾ ಧರಣಿ ತಾರಕ್ಕೇರಿತ್ತು. ಸುಮಾರು ಮೂರು ಗಂಟೆಗೂ ಹೆಚ್ಚು ಕಾಲ ಪ್ರತಿಭಟನಾ ಧರಣಿ ನಡೆಯಿತು.

ಆರೋಪ: ರೈತ ಮುಖಂಡ ಗಂಗೋನಹಳ್ಳಿ ಲಿಂಗೇಗೌಡ ಮಾತನಾಡಿ, ಡೇರಿಯಲ್ಲಿ ಆಗಿರುವ ಅವ್ಯವಹಾರ ಬಮೂಲ್‌ ಅಧ್ಯಕ್ಷ ಮತ್ತು ಅಧಿಕಾರಿಗಳ ಗಮನಕ್ಕೆ ಬಂದರೂ ಏಕೆ ರೈತ ಮುಖಂಡರಿಗೆ ತಿಳಿಸಲಿಲ್ಲ, ಕಾರ್ಯದರ್ಶಿ ಧನಲಕ್ಷ್ಮೀ ಅವರ ವಂಚನೆ ಬಗ್ಗೆ ರೈತರ ಗಮನಕ್ಕೆ ತಂದಿಲ್ಲ. ಹಾಲಿನ ಗುಣಮಟ್ಟ ಸರಿಯಿಲ್ಲ ಎಂದು ವಾಪಸ್ಸು ಕಳಿಸಿದ್ದಾರೆ ಎಂದು ಆರೋಪಿಸಿದರು. ಬಮೂಲ್‌ ನಿರ್ದೇಶಕ ಕೆ.ಬಿ.ರಾಜಣ್ಣ, ಕೆಡಿಪಿ ಸದಸ್ಯ ನಾಗರಾಜು, ಸಾಗರ್‌, ನೂರಾರು ರೈತ ಮುಖಂಡರು, ರೈತ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.