ಎಫ್‌ಐಆರ್‌ ದಾಖಲಿಸದ್ದಕ್ಕೆ ಇಲಾಖೆ ತನಿಖೆ ನಡೆಸಿ


Team Udayavani, Oct 18, 2021, 11:27 AM IST

7

ಕಲಬುರಗಿ: ಸೇಡಂ ತಾಲೂಕಿನಲ್ಲಿ ತನ್ನ ಮೇಲೆ ಹಲ್ಲೆ ಯತ್ನ ನಡೆದಿದೆ ಎಂದು ಯುವಕ ದೂರು ನೀಡಿದರೂ ಎಫ್‌ಐಆರ್‌ ದಾಖಲಿಸದೇ ಮುಧೋಳ ಪೊಲೀಸ್‌ ಇನ್ಸ್‌ಪೆಕ್ಟರ್‌ ನಿರ್ಲಕ್ಷ್ಯಯವಹಿಸಿರುವ ಬಗ್ಗೆ ಇಲಾಖಾ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ಡಾ| ಶರಣಪ್ರಕಾಶ ಪಾಟೀಲ ಆಗ್ರಹಿಸಿದರು.

ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ್‌ ಇನ್ಸ್‌ಪೆಕ್ಟರ್‌ ನಿರ್ಲಕ್ಷ್ಯದಿಂದಲೇ ರಾಘವೇಂದ್ರ ಎನ್ನುವ ಯುವಕ ಹಲ್ಲೆಗೊಳಗಾಗಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ. ಈ ಯುವಕ ತನ್ನ ಮೇಲೆ ಹಲ್ಲೆ ನಡೆಯುವ ಭಯದಿಂದ ಪೊಲೀಸ್‌ ಠಾಣೆಗೆ ಹೋದರೂ ದೂರು ದಾಖಲಿಸಿಕೊಳ್ಳದೇ ಪೊಲೀಸರು ಯುವಕನನ್ನೇ ಬೆದರಿಸಿ ಕಳುಹಿಸಿದ್ದಾರೆ. ನಂತರ ಯುವಕ ಬಸ್‌ ನಿಲ್ದಾಣದ ಕಡೆ ತೆರಳುತ್ತಿದ್ದಾಗ ಗ್ರಾಮದ ಸಂದಪ್ಪ ಮತ್ತು ಆತನ ಸಹಚರರು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಯುವಕ ಠಾಣೆಗೆ ಬಂದಾಗಲೇ ಎಫ್‌ಐಆರ್‌ ದಾಖಲಿಸಿಕೊಂಡು ಆರೋಪಿಗಳನ್ನು ಕರೆಸಿ, ವಿಚಾರಣೆ ನಡೆದಿದ್ದರೆ ಈ ಹಲ್ಲೆ ಘಟನೆ ನಡೆಯುತ್ತಿರಲಿಲ್ಲ ಎಂದರು.

ಪೊಲೀಸರ ಅಲಕ್ಷ್ಯದಿಂದಲೇ ಅಮಾಯಕನೊಬ್ಬ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರುವಂತೆ ಆಗಿದೆ. ಅಲ್ಲದೇ, ಈ ಯುವಕನಿಗೆ ಬ್ರೇನ್‌ ಸರ್ಜರಿ ಸಹ ಆಗಿದೆ. ಈ ಘಟನೆ ಬಗ್ಗೆ ನಾನು ಡಿಎಸ್‌ಪಿ, ಐಜಿಪಿ ಅವರ ಗಮನ ಸೆಳೆದಾಗ ಪೊಲೀಸ್‌ ಇನ್ಸ್‌ಪೆಕ್ಟರ್‌ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಅಮಾನತು ಮಾಡಲಾಗಿದೆ. ಅಲ್ಲದೇ, ಸುಮಾರು ಎಂಟು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಈ ಮೊದಲೇ ಎಫ್‌ಐಆರ್‌ ದಾಖಲಿಸಿಕೊಳ್ಳದಿರುವ ಬಗ್ಗೆ ಪೊಲೀಸ್‌ ಇನ್ಸ್‌ಪೆಕ್ಟರ್‌ಇಲಾಖೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಯುವಕನ ಮೇಲೆ ಹಲ್ಲೆ ಘಟನೆ, ಕರ್ತವ್ಯ ನಿರ್ಲಲಕ್ಷ್ಯದಡಿ ಅಮಾನತಾದ ಪೊಲೀಸ್‌ ಇನ್ಸ್‌ಪೆಕ್ಟರ್‌ ಪರವಾಗಿ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ್‌ ಏಳು ಗಂಟೆ ರಸ್ತೆ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿರುವುದು ನಾಚಿಕೆಗೇಡು ಸಂಗತಿ ಎಂದು ಶರಣಪ್ರಕಾಶ ಕಿಡಿಕಾರಿದರು.

ಇದನ್ನೂ ಓದಿ: ನಿಖೀಲ್‌ ಕುಮಾರ್ ‘ರೈಡರ್‌’ ರಿಲೀಸ್‌ ದಿನಾಂಕ ಫಿಕ್ಸ್

ಹಲ್ಲೆ ಆರೋಪಿಗಳನ್ನು ರಕ್ಷಣೆ ಮಾಡಲು ಶಾಸಕರು ಯತ್ನಿಸುತ್ತಿದ್ದಾರೆ. ಆದರೆ, ಬಿಜೆಪಿ ಗೂಂಡಾಗಿರಿ ನಡೆಯಲ್ಲ. ಇನ್ಸ್‌ಪೆಕ್ಟರ್‌ರನ್ನು ಅಮಾನತು ಮಾಡಿದ್ದು ನಾವಲ್ಲ. ಪೊಲೀಸ್‌ ಇಲಾಖೆಯೇ ಘಟನೆಗೆ ಕಾರಣರಾದವರ ಸತ್ಯಾಸತ್ಯತೆ ಅರಿತು ಕರ್ತವ್ಯ ನಿರ್ಲಕ್ಷ್ಯದ ಬಗ್ಗೆ ತಿಳಿದು ಅಮಾನತು ಮಾಡಿದೆ. ಇದರ ಪರಿಜ್ಞಾನವೂ ಇಲ್ಲದೇ ಸ್ವತಃ ಶಾಸಕರೇ ಪ್ರತಿಭಟನೆ ಮಾಡಿದ್ದು ಯಾರ ವಿರುದ್ಧ ಎನ್ನುವುದನ್ನಾದರೂ ಹೇಳಬೇಕು. ರಸ್ತೆ ಸಂಚಾರ ಬಂದ್‌ ಮಾಡಿ, ಸಾರ್ವಜನಿಕರಿಗೆ ತೊಂದರೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮುಖಂಡರಾದ ಸುಭಾಷ ರಾಠೊಡ, ಇಮ್ರಾನ್‌ ಖಾನ್‌ ಇದ್ದರು.

ಸರ್ವೇ ಮಾಡಿ-ಸೌಲಭ್ಯ ಒದಗಿಸಿ ಡಾ| ಶರಣಪ್ರಕಾಶ

ಚಿಂಚೋಳಿ ಮತ್ತು ಕಾಳಗಿ ತಾಲೂಕಿನಲ್ಲಿ ನಿರಂತರವಾಗಿ ನಡೆಯುತ್ತಿರುವ ಭೂಕಂಪದ ಬಗ್ಗೆ ಸರಿಯಾದ ಸರ್ವೇ ಮಾಡಬೇಕು. ಗಡಿಕೇಶ್ವಾರ ಗ್ರಾಮದ ಸುತ್ತಲಿನ 10 ಕಿ.ಮೀ ವ್ಯಾಪ್ತಿಯ ಸುಮಾರು 40 ಹಳ್ಳಿಗಳನ್ನು ಸರ್ವೇ ಮಾಡಿ ಸೌಲಭ್ಯ ಒದಗಿಸಬೇಕೆಂದು ಡಾ| ಶರಣಪ್ರಕಾಶ ಪಾಟೀಲ ಒತ್ತಾಯಿಸಿದರು. ರಾಜ್ಯ ಸರ್ಕಾರ, ಜಿಲ್ಲಾಡಳಿತದ ಮೇಲೆ ಜನತೆ ವಿಶ್ವಾಸ ಕಳೆದುಕೊಂಡಿದ್ದಾರೆ. ಈಗಾಗಲೇ ಗಡಿಕೇಶ್ವಾರ ಗ್ರಾಮದ ಶೇ.70ರಷ್ಟು ಜನರು ಗ್ರಾಮ ತೊರೆದಿದ್ದಾರೆ. ಇನ್ನೂ ಕೆಲವರು ಗ್ರಾಮ ಬಿಟ್ಟು ಗುಳೆ ಹೋಗಿದ್ದಾರೆ. ಭೂಕಂಪನ ಆಗುತ್ತಿದ್ದಂತೆ ಜನರಿಗೆ ಧೈರ್ಯ ತುಂಬಿ ಸೌಲಭ್ಯ ಒದಗಿಸಿದ್ದರೆ ಜನರು ಗ್ರಾಮ ತೊರೆಯುತ್ತಿರಲಿಲ್ಲ ಎಂದು ಹೇಳಿದರು. ಈಗ ಜಿಲ್ಲಾಡಳಿತ ಕೇವಲ ಗಡಿಕೇಶ್ವಾರ, ಹೊಸಳ್ಳಿ, ಕೊರವಿ ಸೇರಿದಂತೆ ಕೆಲ ಗ್ರಾಮಗಳಲ್ಲಿ ಮಾತ್ರ ಟಿನ್‌ ಶೆಡ್‌ಗಳನ್ನು ಹಾಕಿ ಊಟದ ವ್ಯವಸ್ಥೆ ಮಾಡಿದೆ. ಆದರೆ, ಗಡಿಕೇಶ್ವಾರ ಗ್ರಾಮದ ಸುತ್ತ-ಮುತ್ತಲಿನ 10 ಕಿ.ಮೀ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಸರ್ವೇ ಕಾರ್ಯ ನಡೆಸಬೇಕು ಎಂದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.