ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ
Team Udayavani, Oct 22, 2021, 4:03 PM IST
ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದೆ ಸುಶ್ಮಿತಾ ದೇವ್ ಅವರ ಮೇಲೆ ದಾಳಿಯಾಗಿದೆ. ಸುಶ್ಮಿತಾ ದೇವ್ ಅವರ ಕಾರನ್ನು ಧ್ವಂಸ ಮಾಡಿದ ಘಟನೆ ತ್ರಿಪುರದಲ್ಲಿ ಶುಕ್ರವಾರ ನಡೆದಿದೆ.
ಸುಶ್ಮಿತಾ ದೇವ್ ಅವರಿಗೆ ರಾಜಕೀಯ ಪ್ರಚಾರದಲ್ಲಿ ಸಹಾಯ ಮಾಡುತ್ತಿದ್ದ ಖಾಸಗಿ ಸಂಸ್ಥೆಯ ಉದ್ಯೋಗಿಗಳು ಕೂಡಾ ದಾಳಿಯಲ್ಲಿ ಗಾಯಗೊಂಡಿದ್ದಾರೆ. ತ್ರಿಪುರಾದಲ್ಲಿ ತೃಣಮೂಲ ಕಾಂಗ್ರೆಸ್ ಚಟುವಟಿಕೆಗಳ ಮೇಲ್ವಿಚಾರಣೆ ಮಾಡುತ್ತಿರುವ ಸುಶ್ಮಿತಾ ದೇವ್, ದಾಳಿಯ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿದರು.
ದಾಳಿ ನಡೆದಾಗ ಭಾರತೀಯ ರಾಜಕೀಯ ಕ್ರಿಯಾ ಸಮಿತಿ ಅಥವಾ ಐ-ಪಿಎಸಿ, ರಾಜಕೀಯ ಸಾರ್ವಜನಿಕ ಸಂಪರ್ಕ ಮತ್ತು ಸಲಹಾ ಸಂಸ್ಥೆಯ ಉದ್ಯೋಗಿಗಳೊಂದಿಗೆ ದೇವ್ ಇದ್ದರು.
ಇದನ್ನೂ ಓದಿ:ಚಾರ್ ಧಾಮ್ ಯಾತ್ರೆ : 2 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಭೇಟಿ
” ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಅಮತಾಲಿ ಬಜಾರ್ ನಲ್ಲಿ ಮಧ್ಯಾಹ್ನ 1:30 ರ ಸುಮಾರಿಗೆ ಸುಶ್ಮಿತಾ ದೇವ್ ಮತ್ತು ಟಿಎಂಸಿಯ 10 ಇತರ ಪಕ್ಷದ ಕಾರ್ಯಕರ್ತರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ದುಷ್ಕರ್ಮಿಗಳು ವಾಹನಗಳನ್ನು ಧ್ವಂಸ ಮಾಡಿದರು, ಟಿಎಂಸಿಯ ಕಾರ್ಯಕರ್ತರ ಮೇಲೆ ದೈಹಿಕ ಹಲ್ಲೆ ಮಾಡಿದರು” ಎಂದು ತೃಣಮೂಲ ಕಾಂಗ್ರೆಸ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದೆ.
ಈ ವೇಳೆ ಪಕ್ಷದ ಬೆಂಬಲಿಗರಿಗೆ ಸೇರಿದ ಮೊಬೈಲ್ ಫೋನ್ ಗಳು ಕಳ್ಳತನವಾಗಿದೆ. ಈ ವಿಷಯದ ಬಗ್ಗೆ ತುರ್ತಾಗಿ ವಿಚಾರಣೆಗೆ ಒಳಪಡಿಸಿ ಮತ್ತು ಅಪರಾಧಿಗಳನ್ನು ಬಂಧಿಸಬೇಕು” ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.