ಮೈಮೇಲೆ ದೇವ್ರು ಬಂದ್ರೂ ನಿಲ್ಲದ ಕೊರೊನಾ ಲಸಿಕೆ ನೀಡಿಕೆ!


Team Udayavani, Oct 24, 2021, 2:49 PM IST

16vaccine

ರಾಯಚೂರು: ಕೇಂದ್ರ ಸರ್ಕಾರ ದೇಶದಲ್ಲಿ 100 ಕೋಟಿಗೂ ಅಧಿಕ ಡೋಸ್‌ ಕೋವಿಡ್‌ ಲಸಿಕೆಯನ್ನು ನೀಡುವ ಮೂಲಕ ಸಾಧನೆ ಮಾಡಿದ್ದರೆ, ಜಿಲ್ಲೆಯಲ್ಲಿ ಜನ ಇಂದಿಗೂ ಲಸಿಕೆ ಹಾಕಿಸಿಕೊಳ್ಳಲು ಹೈಡ್ರಾಮಾ ನಡೆಸುತ್ತಿದ್ದಾರೆ.

ಮನೆ-ಮನೆಗೆ ಹೋಗಿ ಲಸಿಕೆ ಹಾಕಲು ಮುಂದಾದರೂ ಜನ ಮಾತ್ರ ನಾನಾ ರೀತಿಯಲ್ಲಿ ಪ್ರತಿರೋಧ ಒಡ್ಡುವ ಮೂಲಕ ಅಸಹಕಾರ ಮುಂದುವರಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕೋವ್ಯಾಕ್ಸಿನ್‌ ಹಾಗೂ ಕೋವಿಶೀಲ್ಡ್‌ ಲಸಿಕೆ ಹಾಕಲು ಮುಂದಾದಾಗ ಸಾಕಷ್ಟು ವಿದ್ಯಾವಂತರೇ ಹಿಂಜರಿದರು. ಆದರೆ, ಕ್ರಮೇಣ ಲಸಿಕೆ ಪ್ರಭಾವದ ಬಗ್ಗೆ ಎಲ್ಲೆಡೆ ಸುದ್ದಿಯಾಗುತ್ತಿದ್ದಂತೆ ಜನ ನಾ ಮುಂದು ತಾ ಮುಂದು ಎಂದು ಹಾಕಿಸಿಕೊಂಡರು. ಕೊರೊನಾ 2ನೇ ಅಲೆಯ ವೇಳೆ ಲಸಿಕೆ ಬೇಕು ಎಂದು ಸರತಿಯಲ್ಲಿ ನಿಂತರೂ ಸಿಗಲಿಲ್ಲ. ಈಗ ಸರ್ಕಾರ ಲಸಿಕೆ ಹಾಕಲು ಮನೆಗೆ ಬಂದರೂ ನಮಗೆ ಬೇಡವೇ ಬೇಡ ಎಂದು ಹಠ ಹಿಡಿಯುವ ಮೂಲಕ ಅಧಿಕಾರಿಗಳಿಗೆ ಕಿರಿಕಿರಿ ಮಾಡುತ್ತಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಮೊದಲ ಶೇ.73.5ರಷ್ಟು ಮೊದಲ ಡೋಸ್‌ ಲಸಿಕೆ ನೀಡಿದ್ದರೆ, ಶೇ.30ರಷ್ಟು ಜನರಿಗೆ 2ನೇ ಡೋಸ್‌ ಲಸಿಕೆ ನೀಡಲಾಗಿದೆ. ಫ್ರಂಟ್‌ ಲೈನ್‌ ವಾರಿಯರ್ಗಳಿಗೆ ಶೇ.100ರಷ್ಟು ಲಸಿಕೆ ನೀಡಲಾಗಿದೆ. ಈಗ ಸಾರ್ವಜನಿಕರ ಸರದಿ ಬಂದಿದ್ದು, ಎಲ್ಲರೂ ಲಸಿಕೆ ಹಾಕಿಸಿಕೊಳ್ಳುತ್ತಿಲ್ಲ. ಅದರಲ್ಲೂ ಗ್ರಾಮೀಣ ಭಾಗದ ಜನ ಲಸಿಕೆ ಬೇಡವೇ ಬೇಡ ಎಂದು ಚಿಕ್ಕ ಮಕ್ಕಳಂತೆ ಹಠ ಹಿಡಿಯುತ್ತಿದ್ದಾರೆ.

ಇದನ್ನೂ ಓದಿ: ಗೋಲ್ಡನ್ ಸ್ಟಾರ್ ನಟನೆಯ ‘ಸಖತ್’ ಚಿತ್ರದ ಟೀಸರ್ ಬಿಡುಗಡೆ

ಮೈ ಮೇಲೆ ದೇವ್ರು ಬರುತ್ತೆ

ಹಿಂದಿನ ಡಿಸಿ ಡಾ| ಬಿ.ಸಿ.ಸತೀಶ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದು, ಆಶಾ, ಅಂಗನವಾಡಿ ನೌಕರರು, ಆರೋಗ್ಯ ಸಹಾಯಕರು ಹಳ್ಳಿಗಳಿಗೆ ಲಸಿಕೆ ಹಾಕಿಸುತ್ತಿದ್ದಾರೆ. ಆದರೆ, ಇವರಿಗೆ ಕೆಲವರು ಮಣಿಯದೆ ನಮಗೆ ಲಸಿಕೆ ಬೇಡ ಹೋಗಿ ಎಂದು ಕಳುಹಿಸುತ್ತಿದ್ದಾರೆ. ಅಂಥದ್ದಲ್ಲಿಯೇ ಖುದ್ದು ಎಸಿ, ತಹಶೀಲ್ದಾರ್‌ ಸೇರಿದಂತೆ ಎಲ್ಲ ಅಧಿಕಾರಿಗಳು ಹೋಗಿ ಲಸಿಕೆ ಪಡೆಯಲು ಮನವೊಲಿಸುತ್ತಿದ್ದಾರೆ. ಇಂಥ ವೇಳೆ ಕೆಲ ಮಹಿಳೆಯರು ಮೈ ಮೇಲೆ ದೇವ್ರು ಬಂದವರಂತೆ ಮಾಡುತ್ತಿದ್ದಾರೆ. “ಅದ್ಯಾವ ದೊಡ್ಡ ರೋಗ ನನ್ನ ಏನು ಮಾಡೊದಿಲ್ಲ. ದೇವರಿಗೆ ಸೂಜಿ ಮಾಡ್ತಿರಾ ಎಂದು ಧಮಕಿ ಹಾಕುತ್ತಿದ್ದಾರೆ’ ಪಕ್ಕದಲ್ಲಿ ಹೋದರೆ ಮತ್ತಷ್ಟು ಆವೇಶಭರಿತವಾಗುತ್ತಾರೆ. ದೇವದುರ್ಗ ತಾಲೂಕಿನ ಪಲಕನಮರಡಿಯಲ್ಲಿ ಶುಕ್ರವಾರ ಇದೇ ರೀತಿ ಘಟನೆ ನಡೆದಿದೆ.

ಇನ್ನೂ ಇದೇ ಊರಿನಲ್ಲಿ ಯುವಕನೊಬ್ಬ ಲಸಿಕೆ ಬೇಡ ಎಂದು ಟ್ರ್ಯಾಕ್ಟರ್‌ ಟಾಪ್‌ ಏರಿ ಕುಳಿತು ಬಿಟ್ಟಿದ್ದ. ಎಷ್ಟು ಹೇಳಿದರೂ ಕೆಳಗೆ ಇಳಿದು ಬರಲೇ ಇಲ್ಲಿ. ಆದರೂ ಆರೋಗ್ಯ ಇಲಾಖೆ ಸಿಬ್ಬಂದಿ ಪಟ್ಟು ಬಿಡದೆ ಲಸಿಕೆ ನೀಡಿದ್ದಾರೆ.

ಕಂಡ-ಕಂಡಲ್ಲಿ ಡೋಸ್‌!

ಜಿಲ್ಲೆಯಲ್ಲಿ ಈವರೆಗೆ 14 ಲಕ್ಷ ಡೋಸ್‌ ಲಸಿಕೆ ನೀಡಲಾಗಿದೆ. 9.94 ಲಕ್ಷ ಜನರಿಗೆ ಮೊದಲ ಡೋಸ್‌ ಹಾಗೂ 4.06 ಜನರಿಗೆ ಎರಡನೇ ಡೋಸ್‌ ನೀಡಲಾಗಿದೆ. ಆದರೆ, ಗುರಿ ತಲುಪಲು ಇನ್ನೂ ಶೇ.25ರಷ್ಟು ಜನರಿಗೆ ಲಸಿಕೆ ನೀಡಬೇಕಿದೆ. ಸರ್ಕಾರ ಕೂಡ ಅಧಿಕಾರಿಗಳಿಗೆ ಗುರಿ ನೀಡುತ್ತಿರುವುದರಿಂದ ಇಲಾಖೆ ಅಧಿಕಾರಿಗಳು ಹಳ್ಳಿಗಳತ್ತ ಮುಖ ಮಾಡಿದ್ದಾರೆ. ಜನ ಕಂಡಲ್ಲಿಯೇ ಲಸಿಕೆ ನೀಡಲು ಮುಂದಾಗುತ್ತಿದ್ದಾರೆ. ಕೃಷಿ ಚಟುವಟಿಕೆ ನಡೆದಿರುವ ಕಾರಣ ಜನ ಮನೆಯಲ್ಲಿ ಸಿಗುತ್ತಿಲ್ಲ. ಇದರಿಂದ ಬೆಳ್ಳಂಬೆಳಗ್ಗೆಯೇ ಗ್ರಾಮಗಳಿಗೆ ಹೋಗುತ್ತಿದ್ದಾರೆ. ಮನೆಯಲ್ಲಿ ಇದ್ದರೂ ಇಲ್ಲ ಎಂದು ಹೇಳುವುದು, ಹಿತ್ತಲ ಬಾಗಿಲಿಂದ ತಪ್ಪಿಸಿಕೊಂಡು ಹೋಗುವ ಮೂಲಕ ಅಸಹಕಾರ ತೋರುತ್ತಿದ್ದಾರೆ. ಇನ್ನೂ ಮನೆಯಲ್ಲಿ ಸಿಗದಿದ್ದರೂ ಹೊಲಗಳಿಗೆ ಹೋಗಿ ಲಸಿಕೆ ಹಾಕುವ ಮೂಲಕ ಗುರಿಸಾಧನೆಯತ್ತ ಮುನ್ನುಗ್ಗುತ್ತಿದೆ.

ಲಸಿಕೆ ಗುರಿ ತಲುಪಲು ಸಾಕಷ್ಟು ಒತ್ತು ನೀಡುತ್ತಿದ್ದೇವೆ. ಜನ ಅಸಹಕಾರ ತೋರುತ್ತಿರುವುದು ನಿಜ. ಸಿಬ್ಬಂದಿ ಮನೆಗೆ ಹೋದಾಗ ಜನ ತಪ್ಪಿಸಿಕೊಂಡು ಹೋಗುತ್ತಾರೆ. ಆದರೂ ನಮ್ಮ ಸಿಬ್ಬಂದಿ ಪಟ್ಟು ಬಿಡದೆ ಲಸಿಕೆ ನೀಡುತ್ತಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರ ನೆರವಿನೊಂದಿಗೆ ಜನರ ಮನವೊಲಿಕೆಗೆ ಒತ್ತು ನೀಡಿದ್ದೇವೆ. ಲಸಿಕೆ ಹಾಕದವರ ವಿರುದ್ಧ ಯಾವುದೇ ಕಠಿಣ ಕ್ರಮಕ್ಕೆ ಮುಂದಾಗಿಲ್ಲ.

-ಡಾ| ನಾಗರಾಜ್‌ ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.