ಜಾನಪದ ದೇಶದ ಸಂಸ್ಕೃತಿ ಪ್ರತಿಬಿಂಬ: ಗೋಕುಲ

ಸಂಸ್ಕೃತಿ ಗ್ರಾಮೀಣ ಬದುಕಿನ ಕೊಡುಗೆಯಾಗಿ ಜಾನಪದದ ಮುಖೇನ ಹೊರಹೊಮ್ಮಿದೆ.

Team Udayavani, Oct 26, 2021, 3:10 PM IST

ಜಾನಪದ ದೇಶದ ಸಂಸ್ಕೃತಿ ಪ್ರತಿಬಿಂಬ: ಗೋಕುಲ

ಕಲಘಟಗಿ: ಜಾನಪದವು ನಮ್ಮ ದೇಶದ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು, ಗ್ರಾಮೀಣ ಜನತೆ ಬಾಳಿ ಬೆಳಗಿದ ಬದುಕನ್ನೇ ನಾಡಿನುದ್ದಕ್ಕೂ ಸಾರುತ್ತಲಿದೆ ಎಂದು ಅಖೀಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಐ.ಸಿ. ಗೋಕುಲ ಹೇಳಿದರು.

ಮಿಶ್ರಿಕೋಟಿಯ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ತಾಲೂಕಿನ ಭೋಗೆನಾಗರಕೊಪ್ಪದ ಕರ್ನಾಟಕ ಗ್ರಾಮೀಣ ಜಾನಪದ ಕಲಾ ಅಭಿವೃದ್ಧಿ ಸಂಘ ಹಾಗೂ ಕನ್ನಡ-ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಜರುಗಿದ ಜಾನಪದ ಸಂಭ್ರಮ-2021 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ನಮ್ಮ ದೇಶದ ಸಂಸ್ಕಾರ ಹಾಗೂ ಸಂಸ್ಕೃತಿ ಗ್ರಾಮೀಣ ಬದುಕಿನ ಕೊಡುಗೆಯಾಗಿ ಜಾನಪದದ ಮುಖೇನ ಹೊರಹೊಮ್ಮಿದೆ.

ಆದರೆ ಇತ್ತೀಚಿನ ದಿನಗಳಲ್ಲಿ ನಗರ ಹಾಗೂ ಗ್ರಾಮೀಣ ಭಾಗದಾದ್ಯಂತ ವಿದೇಶಿ ಸಂಸ್ಕೃತಿಯ ವ್ಯಾಮೋಹದಿಂದಾಗಿ ನಮ್ಮ ಜನಪದ ಕಲೆಗಳು ನಶಿಸುತ್ತ ಸಾಗಿವೆ. ಅವುಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು. ಜಾನಪದ ಕಲಾವಿದ ನಿಂಗಪ್ಪ ದೊಡ್ಡಪೂಜಾರ ಮಾತನಾಡಿ, ಕರ್ನಾಟಕ ಗ್ರಾಮೀಣ ಜಾನಪದ ಕಲಾ ಅಭಿವೃದ್ಧಿ ಸಂಘವು ನಾಡಿನಾದ್ಯಂತ ಜಾನಪದದ ಸದಭಿರುಚಿಯನ್ನು ಜನತೆಗೆ ಉಣಬಡಿಸಿ, ಇಂದಿನ ಯುವ ಪೀಳಿಗೆಗೆ ಜಾನಪದದತ್ತ ಒಲವು ಮೂಡುವಂತೆ ನಿರಂತರವಾಗಿ ಶ್ರಮಿಸುತ್ತಲಿದೆ.

ಕಲೆಗಳನ್ನು ಜೀವಂತವಾಗಿರಿಸಲು ಪ್ರತಿಯೊಬ್ಬರೂ ಶ್ರಮಿಸಿ ಕೈ ಜೋಡಿಸಬೇಕು ಎಂದು ಹೇಳಿದರು. ಜಾನಪದ ಕಲಾವಿದ ಇಮಾಮಸಾಬ ವಲ್ಲೆಪ್ಪನವರ, ಕರವೇ ಜಿಲ್ಲಾಧ್ಯಕ್ಷ ರುದ್ರೇಶ ಹವಳದ, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಮಾರುತಿ ಭಜಂತ್ರಿ, ಶಿಕ್ಷಕ ಪ್ರಕಾಶ ಹೂಗಾರ ಮಾತನಾಡಿದರು. ನವಲಗುಂದ ಭಾವೈಕ್ಯ ಜಾನಪದ ಕಲಾತಂಡ, ಗೊಬ್ಬರಗುಂಪಿಯ ದ್ಯಾಮಣ್ಣ ಪೂಜಾರ ಕಲಾತಂಡ, ಧಾರವಾಡದ
ಜಾನಪದ ಸಂಗೀತ ಕಲಾತಂಡದವರು ವಿವಿಧ ಜಾನಪದ ಗೀತೆಗಳನ್ನು ಹಾಡುವುದರೊಂದಿಗೆ ಜನಮನಸೂರೆಗೊಂಡರು. ಹುಬ್ಬಳ್ಳಿಯ ಶ್ರೀ ಆತ್ಮಾನಂದ ನಾಟಕ ಮಂಡಳಿಯವರಿಂದ ಶ್ರೀ ಸಂತ ಶಿಶುನಾಳ ಷರೀಫ ಸಾಹೇಬರು ಎಂಬ ಪೌರಾಣಿಕ ನಾಟಕ ಪ್ರದರ್ಶನಗೊಂಡಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಪುರಸ್ಕರಿಸಲಾಯಿತು. ಐ.ವಿ. ಜವಳಿ ನಿರೂಪಿಸಿದರು. ಪ್ರಕಾಶ ತುಕ್ಕಪ್ಪನವರ ಸ್ವಾಗತಿಸಿದರು. ಮಂಜುನಾಥ ವಾವಲ ವಂದಿಸಿದರು.

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.