ಇತಿಹಾಸದಿಂದ ಪಾಠ ಕಲಿಯೋಣ: ಡಾ| ರೆಡ್ಡಿ ವಿಷಾದ


Team Udayavani, Oct 28, 2021, 10:36 AM IST

6karnataka

ಬೀದರ: ಇತಿಹಾಸ ಕತ್ತಲೆಯಿಂದ ಬೆಳಕಿನ ಕಡೆ ಕೊಂಡೊಯ್ಯುವ ವಿಷಯವಾಗಿದೆ ಎಂದು ಕಲಬುರಗಿ ಪ್ರಾಧ್ಯಾಪಕ ಡಾ| ಶಶಿಶೇಖರ ರೆಡ್ಡಿ ತಿಳಿಸಿದರು.

ನಗರದ ಕರ್ನಾಟಕ ಕಾಲೇಜಿನಲ್ಲಿ ಇತಿಹಾಸ ವಿಭಾಗದಿಂದ ರಾಜ್ಯ ಪತ್ರಾಗಾರ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ “ಬಹಮನಿ ಮನೆತನದ ಸಾಂಸ್ಕೃತಿಕ ಕೊಡುಗೆಗಳು’ ಕುರಿತು ರಾಜ್ಯ ಮಟ್ಟದ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಬುದ್ಧಿವಂತಿಕೆ ಹಿತಾಸಕ್ತಿಗೆ ಬಲಿಕೊಟ್ಟು ಅಧ್ಯಯನ ಮಾಡುವಾಗ ಇತಿಹಾಸದ ಬಗ್ಗೆ ನಂಬಿಕೆ ವಿಶ್ವಾಸ ಇಲ್ಲದಂತಾಗುತ್ತದೆ. ಇತಿಹಾಸ ಪ್ರಜ್ಞಾವಂತರಾಗಿ ಸ್ವೀಕರಿಸಲು ಸಾಧ್ಯವಿಲ್ಲ. ಇತಿಹಾಸದ ಘಟನೆಗಳು ರಾಜಕೀಯಕರಣವಾಗುತ್ತಿರುವುದು ದುಃಖಕರ ಸಂಗತಿ ಎಂದರು.

ಇಲ್ಲಿನ ಬಿದರಿ ಕಲೆ ಉಳಿಸಿ-ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ. ಇತಿಹಾಸ ಮುಂದಿನ ಪೀಳಿಗೆಗೆ ಎಲ್ಲ ಪ್ರಬಂಧಗಳು ದಾರಿದೀಪವಾಗಬೇಕು. ಇತಿಹಾಸದಿಂದ ಪಾಠ ಕಲಿಸಬೇಕಾಗಿದೆ ವಿನಃ ಪುನರಾವರ್ತನೆ ಆಗೋದು ಬೇಡ. ಸಮಾನತೆ, ಮಾನವೀಯ ಮೌಲ್ಯ ಬಿತ್ತರಿಸುವ ಕೆಲಸ ಮಾಡಬೇಕು ಎಂದರು.

ಕಲಬುರಗಿ ಉಪನ್ಯಾಸಕ ಡಾ| ಶಂಭುಲಿಂಗ ವಾಣಿ ಆಶಯ ನುಡಿಯಾಡಿ, ಬಹಮನಿ ಸುಲ್ತಾನರು ಮೂಲತಃ ಈ ದೇಶದವರಲ್ಲ. ಇಲ್ಲಿನವರಿಗೆ ಅವರ ಚರಿತ್ರೆ ಬರೆಯಲು ಕೊಡಲಿಲ್ಲ. ಸಂಶೋಧನೆ ಕುರಿತು ಉಪನ್ಯಾಸಕರಲ್ಲಿ ಆಸಕ್ತಿ ಇರಬೇಕು. ಚರಿತ್ರೆಯಲ್ಲಿ ಕಥೆಗಳು ಬಂದರೆ ಇತಿಹಾಸ ತನ್ನ ಸತ್ವ ಕಳೆದುಕೊಳ್ಳುತ್ತದೆ. “ಇಣಕಿ ನೋಡಬೇಕೆ ವಿನಃ ಕೆಣಕಿ ನೋಡಬಾರದು’ ಇಲ್ಲಿಯವರೆಗೆ ನಾವು ಮೂಲ ಕೃತಿವರೆಗೆ ಹೋಗಿಲ್ಲ. ಬಹಮನಿ ಅರಸರ ಕುರಿತು ಮೂಲ ಕೃತಿ ಗೊತ್ತಿಲ್ಲ. ಯಝದಾನಿ, ಸೇರವಾನಿ ಬರೆದ ಕೃತಿಗಳು ಓದಿದ್ದೇವೆ ವಿನಃ ನಿಜವಾದ ಕೃತಿ ಸಿಕ್ಕಿಲ್ಲ ಎಂದರು.

ಇದನ್ನೂ ಓದಿ: 37 ಭಿಕ್ಷುಕರು ನಿರಾಶ್ರಿತರ ಕೇಂದ್ರಕ್ಕೆ ರವಾನೆ

ಬಹಮನಿ ಸುಲ್ತಾನರ ಈ ಭಾಗಕ್ಕೆ ಅಪಾರ ಕೊಡುಗೆ ಇದೆ. ಈ ಭಾಗ ವಾಸ್ತುಶಿಲ್ಪಯಿಂದ ಸಂಪದ್ಭರಿತವಾಗಿದೆ ಎಂದು ತೋರಿಸಿಕೊಟ್ಟವರೇ ಬಹಮನಿ ಸುಲ್ತಾನರು. ಹೀಗಾಗಿ ಸಾಂಸ್ಕೃತಿಕ ಕೊಡುಗೆ ಇದೆ. ವಿದೇಶಿಗರು ದೇವಾಲಯ ನೋಡಲು ಬರುವುದಿಲ್ಲ, ಹಳೇ ಪ್ರವಾಸಿ ತಾಣ ನೋಡಲು ಬರುತ್ತಾರೆ. ಮೂಲ ದಾಖಲೆಗಳು ಮೂಲ ಪ್ರದೇಶಕ್ಕೆ ಸೇರಿಸಬೇಕು. ಇದನ್ನು ಸರ್ಕಾರ ಹಾಗೂ ಪತ್ರಾಗಾರ ಇಲಾಖೆ ಮಾಡಬೇಕು ಎಂದರು.

ಪ್ರಾಚಾರ್ಯ ಡಾ| ಎಂ.ಎಸ್‌. ಚೆಲುವಾ ಸ್ವಾಗತಿಸಿದರು. ವಿಭಾಗದ ಮುಖ್ಯಸ್ಥ ಲಕ್ಷ್ಮೀ ಕುಂಬಾರ ಪ್ರಾಸ್ತಾವಿಕ ಮಾತನಾಡಿದರು. ಡೀನ್‌ ಎಸ್‌. ಅಂಡಗಿ, ಡಾ| ಸಂಜುಕುಮಾರ ತಾಂದಳೆ, ಪ್ರಾಚಾರ್ಯ ಡಾ| ಬಸವರಾಜ ಬಲ್ಲೂರ, ಡಾ| ಚಂದ್ರಶೇಖರ ಬಿರಾದಾರ, ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಂತರ ಬಿದರಿ ಕಲೆ ಮತ್ತು ಅದರ ವೈಶಿಷ್ಟತೆ, ಬಹಮನಿ ಮನೆತನದ ಸಾಂಸ್ಕೃತಿಕ ಕೊಡುಗೆಗಳು ಹಾಗೂ ಪ್ರಬಂಧಗಳ ಮಂಡನೆ ಕುರಿತು 3 ಗೋಷ್ಠಿಗಳು ನಡೆದವು.

ಟಾಪ್ ನ್ಯೂಸ್

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

1-wqwewewq

T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ

renukaacharya

Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

1-rasht-aa

Puri ಜಗದ್ವಿಖ್ಯಾತ ಜಗನ್ನಾಥ ರಥಯಾತ್ರೆ ಆರಂಭ; ಸಾಕ್ಷಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ

Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ

6-kalburgi

Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

4-chincholi

Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

1-wqwewewq

T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ

renukaacharya

Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.