“ಕನ್ನಡಕ್ಕಾಗಿ ನಾವು’ ಗೀತೆ ಗಾಯನದಲ್ಲಿ 18 ಲಕ್ಷ ಮಂದಿ ಭಾಗಿ
Team Udayavani, Oct 29, 2021, 6:17 AM IST
ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಮೆಟ್ಟಿಲು, ಗ್ರಾಮಪಂಚಾಯತ್, ಶಾಲೆ, ಕಾಲೇಜು, ವಿಶ್ವವಿದ್ಯಾನಿಲಯ ಸಹಿತ ವಾಗಿ ನಾಡಿನಾದ್ಯಂತ ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು, ಕುಲಪತಿಗಳು, ವಿದ್ಯಾರ್ಥಿಗಳು, ಕಲಾವಿದರು ಹಾಗೂ ಸಾಮಾನ್ಯ ಜನರ ಕಂಠದಿಂದ ಕನ್ನಡ ಗೀತೆಗಳು ಮಾರ್ದನಿಸಿದೆ. ಇದರಲ್ಲಿ 18 ಲಕ್ಷಕ್ಕೂ ಅಧಿಕ ಮಂದಿ ಭಾಗಿಯಾಗಿದ್ದಾರೆ.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಬಣ್ಣಬಣ್ಣದ ಉಡುಗೆ ತೊಟ್ಟು 2 ಸಾವಿರಕ್ಕೂ ಅಧಿಕ ಅಧಿಕಾರಿ, ಸಿಬಂದಿ ವರ್ಗ, ಆರಕ್ಷಕ ಅಧಿಕಾರಿ ಗಳು, ಸಿಬಂದಿ ಜತೆಯಾಗಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ವಿ. ಸುನಿಲ್ ಕುಮಾರ್ “ಕನ್ನಡಕ್ಕಾಗಿ ನಾವು’ ಅಭಿಯಾನದ ಭಾಗವಾಗಿ ಲಕ್ಷಕಂಠ ಗಾಯನದಲ್ಲಿ ಪಾಲ್ಗೊಂಡಿದ್ದರು.
ವಿಶ್ವವಿಖ್ಯಾತ ಗೋಲ್ ಗುಂಬಜ್ ಮುಂಭಾಗದಲ್ಲಿ 50 ಕಲಾತಂಡಗÙ 250 ಕಲಾವಿದರು, ಮಂಡ್ಯದ ಸರ್ಎಂವಿ ಕ್ರೀಡಾಂಗಣದಲ್ಲಿ 3 ಸಾವಿರಕ್ಕೂ ಅಧಿಕ ಮಂದಿ, ಹಂಪಿಯ ಸ್ಮಾರಕಗಳ ಮುಂದೆ ಗಾಯನ ನಡೆದಿದೆ.
ಬೆಂಗಳೂರು ವಿಭಾಗದ 125 ಸ್ಥಳಗಳಲ್ಲಿ 1,61,232 ಮಂದಿ ಕನ್ನಡ ಗೀತೆಗಳಿಗೆ ದನಿಗೂಡಿಸಿದ್ದರು. ಮೈಸೂರು ವಿಭಾಗದ 96 ಸ್ಥಳಗಳಲ್ಲಿ 5,41,365 ಜನ ಸಾಮೂಹಿಕ ಗೀತೆ ಗಾಯನದಲ್ಲಿ ಪಾಲ್ಗೊಂಡಿದ್ದರು. ಬೆಳಗಾವಿ ವಿಭಾಗದ 105 ಸ್ಥಳಗಳಲ್ಲಿ 10,74,418 ಮಂದಿ ಕನ್ನಡ ಗೀತೆಗೆ ಧ್ವನಿಯಾಗಿದ್ದರು. ಕಲಬುರಗಿ ವಿಭಾಗದ 60 ಸ್ಥಳಗಳಲ್ಲಿ 77,125 ಮಂದಿ, ದಿಲ್ಲಿ, ಮುಂಬಯಿ, ಕಾಸರ ಗೋಡು ಮತ್ತು ಪುಣೆ ಸಹಿತವಾಗಿ ಹೊರರಾಜ್ಯಗಳ 31 ಸ್ಥಳಗಳಲ್ಲಿ 350 ಮಂದಿ ಗೀತಾ ಗಾಯನದ ಸಂಭ್ರಮದಲ್ಲಿ ಜತೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.