ಅಸಂಘಟಿತ ಕಾರ್ಮಿಕರಿಗಾಗಿ ಇ-ಶ್ರಮ್ ಯೋಜನೆ

ಕೇಂದ್ರದ ಮಹತ್ವಾಕಾಂಕ್ಷೆ ಯೋಜನೆಗೆ ಡಿಸೆಂಬರ್‌ ಅಂತ್ಯದೊಳಗೆ ನೋಂದಣಿ ಮಾಡಿಸಿ: ಜಿಲ್ಲಾಧಿಕಾರಿ ಆರ್‌.ಲತಾ

Team Udayavani, Oct 29, 2021, 1:59 PM IST

ಕೇಂದ್ರದ ಮಹತ್ವಾಕಾಂಕ್ಷೆ ಯೋಜನೆಗೆ ಡಿಸೆಂಬರ್‌ ಅಂತ್ಯದೊಳಗೆ ನೋಂದಣಿ ಮಾಡಿಸಿ- ಜಿಲ್ಲಾಧಿಕಾರಿ ಆರ್‌.ಲತಾ

ಚಿಕ್ಕಬಳ್ಳಾಪುರ: ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಇ-ಶ್ರಮ ಯೋಜನೆಯು ಅತಿ ಪ್ರಮುಖವಾಗಿದೆ. ಇದರಡಿ ಜಿಲ್ಲೆಯಲ್ಲಿರುವ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಡಿಸೆಂಬರ್‌ ಅಂತ್ಯದೊಳಗೆ ನೋಂದಣಿ ಮಾಡಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್‌. ಲತಾ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಇ-ಶ್ರಮ್‌ ಯೋಜನೆಯ ಜಾರಿ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಯೋಜನೆಯ ನೋಂದಣಿಯು ಆ.26ರಿಂದ ಆರಂಭಗೊಂಡಿದ್ದು, ಜಿಲ್ಲೆಯಲ್ಲಿ ಈ ವರೆಗೆ 6450 ಅಸಂಘಟಿತ ಕಾರ್ಮಿಕರು ನೋಂದಣಿ ಮಾಡಿಸಿಕೊಂಡಿದ್ದಾರೆ. ಇನ್ನೂ ಜಿಲ್ಲೆಯಲ್ಲಿರುವ 5 ಲಕ್ಷ ಅಸಂಘಟಿತ ಕಾರ್ಮಿಕರನ್ನು ಮಾಡಿಸಬೇಕು ಎಂದು ವಿವರಿಸಿದರು.

ಅನುಕೂಲಗಳೇನು: ಇ-ಶ್ರಮ್‌ ಯೋಜನೆ ಅಡಿಯಲ್ಲಿ ನೋಂದಣಿ ಮಾಡಿಸಿಕೊಂಡರೆ ಕಾರ್ಮಿಕರು ಒಂದು ವರ್ಷಕ್ಕೆ ಪ್ರಧಾನ ಮಂತ್ರಿ ಸುರûಾ ಭೀಮಾ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಆಕಸ್ಮಿಕ ಸಾವು ಅಥವಾ ಪೂರ್ಣ ಅಂಗವೈಕಲ್ಯತೆಗೆ 2 ಲಕ್ಷ ರೂ. ಮತ್ತು ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂ. ಪರಿಹಾರ ಪಡೆಯಬಹುದಾಗಿದೆ. ಜೊತೆಗೆ ವಿವಿಧ ಸಾಮಾಜಿಕ ಭದ್ರತಾ ಯೋಜನೆ, ಕಲ್ಯಾಣ ಕಾರ್ಯಕ್ರಮಗಳ ಪ್ರಯೋಜನ ಪಡೆದುಕೊಳ್ಳಬಹುದು. ವಲಸೆ ಕಾರ್ಮಿಕರ ಉದ್ಯೋಗಾವಕಾಶಕ್ಕೂ ಸಹಾಯಕವಾಗಲಿದೆ ಎಂದು ಹೇಳಿದರು.

ಮಕ್ಕಳಿಗೆ ಶೈಕ್ಷಣಿಕ ಸಾಲ: ಅಸಂಘಟಿತ ಕಾರ್ಮಿಕರು ನೋಂದಣಿ ಆಗಿದ್ದರೆ ಸರ್ಕಾರದ ಎಲ್ಲಾ ಕಾರ್ಮಿಕ ಕಲ್ಯಾಣ ಕಾರ್ಯಕ್ರಮಗಳ ಸೌಲಭ್ಯಗಳನ್ನು ಡಿಬಿಟಿ ಮೂಲಕ ಪಡೆಯಬಹುದು, ಮುಂದಿನ ದಿನಗಳಲ್ಲಿ ಅರ್ಜಿ ಸಲ್ಲಿಸದೆ ಕಾರ್ಮಿಕ ಕಲ್ಯಾಣ ಕಾರ್ಯಕ್ರಮಗಳ ವಿವಿಧ ಪ್ರಯೋಜನಗಳನ್ನು ಪಡೆಯಬಹುದು. ಉಚಿತ ಆರೋಗ್ಯ ಸೇವೆ, ಕಾರ್ಮಿಕ ಕಲ್ಯಾಣ ನಿಧಿಯಿಂದ ಹಣಕಾಸಿನ ನೆರವು, ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಾಲ ಸೌಲಭ್ಯ, ವಿವಾಹ ಸಹಾಯಧನ, ಪಿಂಚಣಿ ಸೌಲಭ್ಯ ಸಹ ಪಡೆಯಬಹುದಾಗಿದೆ ಎಂದು ತಿಳಿಸಿದರು. ಜಿಪಂ ಉಪ ಕಾರ್ಯದರ್ಶಿ ಶಿವಕುಮಾರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್‌.ಕಬಾಡೆ, ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ, ಕೈಗಾರಿಕೆ ಇಲಾಖೆಯ ಅತೀಖ್‌ ಉಲ್ಲಾ ಶರೀಫ್‌ ಉಪಸ್ಥಿತರಿದ್ದರು.

ಡಿಸೆಂಬರ್‌ ಅಂತ್ಯಕ್ಕೆ ನೋಂದಣಿ ಮುಗಿಸಿ-

ಜಿಲ್ಲೆಯಲ್ಲಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಸಣ್ಣ ಮತ್ತು ಅತಿ ಸಣ್ಣ ರೈತರು, ಮೀನುಗಾರರು, ಪಶು ಸಂಗೋಪನಾಕಾರರು, ನೇಕಾರರು, ಬಡಗಿ ಕೆಲಸಗಾರರು, ಆಶಾ ಕಾರ್ಯಕರ್ತರು, ಫೋಟೋಗ್ರಾಫರ್‌, ನೌಕರರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಮನೆ ಕೆಲಸಗಾರರು, ಪತ್ರಿಕೆ ಮಾರಾಟಗಾರರು, ಚಾಲಕರು, ಕೂಲಿ ಕಾರ್ಮಿಕರು (ನರೆಗಾ), ಬೀದಿ ವ್ಯಾಪಾರಿಗಳು, ಅಂಗಡಿ ವ್ಯಾಪಾರಸ್ಥರು, ಚರ್ಮ ಕೈಗಾರಿಕಾ ಕಾರ್ಮಿಕರು, ಆನ್‌ಲೈನ್‌ ಸೇವಾ ಕಾರ್ಮಿಕರು, ಟೈಲರ್‌ಗಳು, ಹೊಟೇಲ್‌ ಕಾರ್ಮಿಕರು, ಬೇಕರಿ ವ್ಯಾಪಾರಸ್ಥರು, ವಲಸೆ ಕಾರ್ಮಿಕರು, ಮೆಕಾನಿಕ್‌, ಇನ್ನಿತರ ಅಸಂಘಟಿತ ಕಾರ್ಮಿಕರನ್ನು ನೋಂದಣಿ ಮಾಡಿಸುವ ಕೆಲಸವನ್ನು ಜಿಲ್ಲಾಧಿಕಾರಿ ಆರ್‌.ಲತಾ ಇಲಾಖಾವಾರು ಕಾರ್ಯ ಹಂಚಿಕೆ ಮಾಡಿದರು.

ಇದನ್ನೂ ಓದಿ:- ಶಾಲಾ ಕಾಲೇಜುಗಳಲ್ಲಿ ಮೇಳೈಸಿದ ಕನ್ನಡ ಕಂಪು

ನೋಂದಣಿ ಸಂಪೂರ್ಣ ಉಚಿತ

ಗ್ರಾಪಂ ಮಟ್ಟದಿಂದ ಜಿಲ್ಲಾ ಕೇಂದ್ರದವರೆಗೆ ಜಿಲ್ಲಾದ್ಯಂತ 170 ಸಾಮಾನ್ಯ ಸೇವಾ ಕೇಂದ್ರಗಳಿವೆ, ಸಾರ್ವಜನಿಕರು ತಮ್ಮ ಸಮೀಪದ ಕೇಂದ್ರಗಳಿಗೆ ತೆರಳಿ ನೋಂದಾಯಿಸಿಕೊಳ್ಳಬಹುದು. ಅರ್ಜಿ ನೋಂದಣಿ ಮಾಡಲು, ಪ್ರತಿ ಪಡೆಯಲು ಪ್ರತಿ ನೋಂದಣಿಗೆ 20 ರೂ. ಅನ್ನು ಸಂಬಂಧಿತ ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ)ಗಳಿಗೆ ಕೇಂದ್ರ ಸರ್ಕಾರವೇ ಭರಿಸುತ್ತದೆ. ನೋಂದಣಿ ಅಥವಾ ನೋಂದಣಿ ಪ್ರತಿ ಪಡೆಯುವುದು ಸಂಪೂರ್ಣ ಉಚಿತ. ನೋಂದಣಿ ಮಾಡಲು ಹಣದ ಬೇಡಿಕೆ ಇಡುವ ಸಾಮಾನ್ಯ ಸೇವಾ ಕೇಂದ್ರಗಳನ್ನು ಕೂಡಲೇ ಅಮಾನತು ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲೆಯಲ್ಲಿರುವ ಸಾಮಾನ್ಯ ಸೇವಾ ಕೇಂದ್ರಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಆರ್‌. ಲತಾ ಸೂಚನೆ ನೀಡಿದರು.

ಕಾರ್ಮಿಕರ ನೋಂದಣಿ ಮಾಡಿಸುವುದು ಹೇಗೆ?

16ರಿಂದ 59 ವರ್ಷದೊಳಗಿನ ವಯೋಮಾನದ ಅಸಂಘಟಿತ ಕಾರ್ಮಿಕರು ಆಧಾರ್‌ ಕಾರ್ಡ್‌, ಸಕ್ರಿಯ ಬ್ಯಾಂಕ್‌ ಖಾತೆ ಪಾಸ್‌ಬುಕ್‌ ಮತ್ತು ಸಕ್ರಿಯ ದೂರವಾಣಿ ಸಂಖ್ಯೆಯ ವಿವರಗಳನ್ನು ಇ-ಶ್ರಮ್‌ ಪೋರ್ಟಲ್‌ನಲ್ಲಿ (ಈ-ಶ್ರಮ್‌) ನಮೂದಿಸುವ ಮೂಲಕ ನೇರವಾಗಿ ತಮ್ಮ ಸ್ಮಾರ್ಟ್‌ ಫೋನ್‌ನಲ್ಲಿಯೇ ನೋಂದಣಿ ಮಾಡಿಕೊಳ್ಳಬಹುದು. ಇಲ್ಲವೆ, ತಮಗೆ ಸಮೀಪವಿರುವ ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ)ಗೆ ಅಗತ್ಯ ದಾಖಲೆಗಳೊಂದಿಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಸಿಕೊಳ್ಳಬಹುದು. ನೋಂದಣಿಗೆ ಯಾವುದೇ ರೀತಿಯ ತೊಡಕು ಉಂಟಾದಲ್ಲಿ ಜಿಲ್ಲಾ, ತಾಲೂಕು ಮಟ್ಟದ ಕಾರ್ಮಿಕ ಇಲಾಖೆಯ ಕಚೇರಿಗಳನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಮತ್ತು ಸಹಾಯ ಪಡೆದು ನೋಂದಣಿ ಮಾಡಿಕೊಳ್ಳಬಹುದು ಎಂದರು.

ಟಾಪ್ ನ್ಯೂಸ್

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Police

Government Order: ಪೊಲೀಸರಿಗೆ ಅರ್ಧ ಕೋಟಿ ರೂ. ಜೀವವಿಮೆ! ವಿಮಾ ಮೊತ್ತ ಇಲಾಖೆಯಿಂದಲೇ ಪಾವತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.