ಮಗುವಾಗಿ ಚಿತ್ರರಂಗಕ್ಕೆ ಕಾಲಿಟ್ಟ ”ಅಪ್ಪು” ಅರಸಾಗಿ ಮೆರೆದಿದ್ದರು!


ವಿಷ್ಣುದಾಸ್ ಪಾಟೀಲ್, Oct 29, 2021, 3:27 PM IST

1-fff

ಬೆಂಗಳೂರು : 46 ವರ್ಷ ಚಿತ್ರರಂಗದಲ್ಲಿ ಬೆಳಗಿದ ಅದ್ಭುತ ನಟನೊಬ್ಬನನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ನಿಜವಾಗಿಯೂ ಬಡವಾಗಿದೆ. ಜನ್ಮಜಾತ ಪ್ರತಿಭೆಯಿಂದ ಪಾತ್ರಗಳಿಗೆ ಜೀವ ತುಂಬಿದ್ದ ಪುನೀತ್ ರಾಜ್ ಕುಮಾರ್ ಅವರು ಮರೆಯಾಗಿರುವುದು ಯಾರಿಗೂ ನಂಬಲಸಾಧ್ಯವಾದ ಸುದ್ದಿ.

ಆಗ ‘ಲೋಹಿತ್’ ಎಂದು ಕರೆಯಲ್ಪಡುತ್ತಿದ್ದ ಪುನೀತ್ ಅವರು ಆರು ತಿಂಗಳ ಮಗುವಾಗಿದ್ದಾಗಲೇ ಕ್ಯಾಮರಾ ಮುಂದೆ ಕಾಣಿಸಿಕೊಂಡು ಬಣ್ಣದ ಬದುಕಿಗೆ ನಾಂದಿ ಹಾಡಿದ್ದರು. ಡಾ. ರಾಜ್ ಕುಮಾರ್ ನಟಿಸಿದ್ದ ನಿರ್ದೇಶಕ ವಿ. ಸೋಮಶೇಖರ್ ಅವರ ಥ್ರಿಲ್ಲರ್ ಚಿತ್ರ ‘ಪ್ರೇಮದ ಕಾಣಿಕೆ’ (1976) ಯಲ್ಲಿ ಮಗುವಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಇದರ ನಂತರ ಕೃಷ್ಣಮೂರ್ತಿ ಪುರಾಣಿಕ್ ಅವರ ಕಾದಂಬರಿಯನ್ನು ಆಧರಿಸಿದ ವಿಜಯ್ ಅವರ ‘ಸನಾದಿ ಅಪ್ಪಣ್ಣ’ (1977), ಒಂದು ವರ್ಷದ ಮಗುವಾಗಿದ್ದಾಗ ”ತಾಯಿಗೆ ತಕ್ಕ ಮಗ” (1978), ಎರಡು ವರ್ಷಗಳ ನಂತರ, ನಿರ್ದೇಶಕರು ದೊರೈ-ಭಗವಾನ್ ಅವರ ”ವಸಂತ ಗೀತ” (1980) ದಲ್ಲಿ ‘ಶ್ಯಾಮ್’ ಪಾತ್ರದಲ್ಲಿ ನಟಿಸಿದರು.

ಕೆ .ಎಸ್ . ಎಲ್ . ಸ್ವಾಮಿಯವರ ಪೌರಾಣಿಕ  ”ಭೂಮಿಗೆ ಬಂದ ಭಗವಂತ” ದಲ್ಲಿ ಭಗವಾನ್ ಕೃಷ್ಣನಾಗಿ ಕಾಣಿಸಿಕೊಂಡರು.

”ಭಾಗ್ಯವಂತ” (1982) ಚಿತ್ರಕ್ಕಾಗಿ ಪುನೀತ್ ತಮ್ಮ ಮೊದಲ ಜನಪ್ರಿಯ ಹಾಡು “ಬಾನ ದಾರಿಯಲ್ಲಿ ಸೂರ್ಯ ತೇಲಿ ಬಂದ.. ” ಧ್ವನಿಮುದ್ರಿಸಿದ್ದರು. ಕನ್ನಡ ಚಿತ್ರರಂಗದಲ್ಲಿ ಆ ಹಾಡು ಹೊಸ ದಾಖಲೆ ನಿರ್ಮಿಸಿತ್ತು.

‘ಚಲಿಸುವ ಮೊಡಗಳು’ ಮತ್ತು ‘ಹೊಸಬೆಳಕು’ ಚಿತ್ರಗಳಲ್ಲಿ ತಂದೆಯೊಂದಿಗೆ ಅಮೋಘವಾಗಿ ನಟಿಸಿದ ಅಪ್ಪು ‘ಚಲಿಸುವ ಮೊಡಗಳು’ ಚಿತ್ರಕ್ಕಾಗಿ ಮೊದಲ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ‘ಅತ್ಯುತ್ತಮ ಬಾಲ ನಟ’ ಬಾಚಿಕೊಂಡಿದ್ದರು.

ಪ್ರಹ್ಲಾದನಾಗಿ ನಟಸಾರ್ವಭೌಮನ ಕೀರ್ತಿ ಬೆಳಗಿದ್ದ ದೊಡ್ಮನೆ ಹುಡುಗ

1983 ರಲ್ಲಿ ಪುನೀತ್ ಅವರು ಎರಡು ಪೌರಾಣಿಕ ಚಲನಚಿತ್ರಗಳಲ್ಲಿ ಕಾಣಿಸಿಕೊಂಡರು: ”ಭಕ್ತ ಪ್ರಹ್ಲಾದ” ಚಿತ್ರದಲ್ಲಿ , ಪ್ರಹ್ಲಾದನ ಪಾತ್ರ ನಿರ್ವಹಿಸಿ ತಂದೆಯ ಹಿರಣ್ಯ ಕಶ್ಯಪು ಪಾತ್ರಕ್ಕೆ ತನ್ನ ಸಮಬಲದ ಅಭಿನಯ ತೋರಿದ್ದರು. ಎರಡು ನಕ್ಷತ್ರಗಳು ಚಿತ್ರಕ್ಕಾಗಿ ಎರಡನೇ ಬಾರಿ ಅತ್ಯುತ್ತಮ ಬಾಲ ನಟ ಪ್ರಶಸ್ತಿಯನ್ನು ಪಡೆದಿದ್ದರು.

1984 ರಲ್ಲಿ ರಾಜ್‌ಕುಮಾರ್ ಅವರೊಂದಿಗೆ ಥ್ರಿಲ್ಲರ್ ಚಿತ್ರ ”ಯಾರಿವನು” ನಟಿಸಿದರು, ಚಿತ್ರದಲ್ಲಿ ರಾಜನ್-ನಾಗೇಂದ್ರ ಬರೆದ “ಕಣ್ಣಿಗೆ ಕಾಣುವ ದೇವರು…” ಹಾಡನ್ನು ಹಾಡಿ ಇನ್ನಷ್ಟು ಅಭಿಮಾನಿಗಳನ್ನು ಸಂಪಾದಿಸಿಕೊಂಡರು.

ಬಾಲನಟನಾಗಿ 1985 ರಲ್ಲಿ ‘ಬೆಟ್ಟದ ಹೂವು’ ಚಿತ್ರದ ಮುಗ್ಧ ರಾಮು ಪಾತ್ರಕ್ಕಾಗಿ ಪುನೀತ್ ಅವರು 33 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ‘ಅತ್ಯುತ್ತಮ ಬಾಲ ಕಲಾವಿದ’ ಪ್ರಶಸ್ತಿಯನ್ನು ಪಡೆದು ತಾನೊಬ್ಬ ಭವಿಷ್ಯದ ದೊಡ್ಡ ಪ್ರತಿಭೆ ಎನ್ನುವುದನ್ನು ತೋರಿದ್ದರು.

ಹದಿಹರೆಯದಲ್ಲಿ ಶಿವ ಮೆಚ್ಚಿದ ಕಣ್ಣಪ್ಪ (1988) ದ ಲ್ಲಿ ತನ್ನ ಹಿರಿಯ ಸಹೋದರ ಶಿವರಾಜ್ ಕುಮಾರ್ ಅವರೊಂದಿಗೆ ಯುವ ಕಣ್ಣಪ್ಪನಾಗಿ ಕಾಣಿಸಿಕೊಂಡರು. ಪುನೀತ್ ಅವರು ಬಾಲನಟನಾಗಿ ಕೊನೆಯದಾಗಿ ”ಪರಶುರಾಮ್” (1989)ಚಿತ್ರದಲ್ಲಿ ತಂದೆಯೊಂದಿಗೆ ನಟಿಸಿದ್ದರು.

ಬಾಲನಟನಾಗಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಪುನೀತ್ ಅವರು 2002ರಲ್ಲಿ ”ಅಪ್ಪು” ಚಿತ್ರದ ಮೂಲಕ ನಾಯಕನಾಗಿ ಭರ್ಜರಿ ಪುನರಾಗಮನ ಮಾಡಿದ್ದರು. ಚಿತ್ರ ದಲ್ಲಿ ರಕ್ಷಿತಾ ಅವರು ನಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದರು.

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.