ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆ ಭರ್ತಿಗೆ ಗಮನ: ಆರಗ ಜ್ಞಾನೇಂದ್ರ
Team Udayavani, Oct 29, 2021, 3:47 PM IST
ಸಾಗರ: ರಾಜ್ಯದಲ್ಲಿ ಗೃಹ ಇಲಾಖೆಯನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಅಗತ್ಯಕ್ರಮ ಕೈಗೊಳ್ಳಲಾಗಿದೆ. ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಯನ್ನು ಭರ್ತಿಗೊಳಿಸುವ ನಿಟ್ಟಿನಲ್ಲಿ ಗಮನ ಹರಿಸಲಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಇಲ್ಲಿನ ಜೋಗ್ ಬಸ್ ನಿಲ್ದಾಣ ಸಮೀಪ ಶುಕ್ರವಾರ ನಗರ ಠಾಣೆಯನ್ನು ಸ್ಥಳಾಂತರಿಸುವ ಕುರಿತು ಪರಿಶೀಲನೆ ನಡೆಸಿ, ನಗರ ಠಾಣೆಯಲ್ಲಿ ಬೀಟ್ ಪುಸ್ತಕ ಪರಿಶೀಲನೆ ನಡೆಸಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಪೊಲೀಸ್ ವ್ಯವಸ್ಥೆಯಲ್ಲಿ ಬೀಟ್ ಅತ್ಯಂತ ಪ್ರಮುಖಪಾತ್ರ ವಹಿಸುತ್ತಿದ್ದು, ಇದನ್ನು ಇನ್ನಷ್ಟು ಗಟ್ಟಿಗೊಳಿಸುವ ಕೆಲಸ ಮಾಡುತ್ತೇವೆ ಎಂದರು.
ಹಿಂದೆ ವರ್ಷಕ್ಕೆ ನಾಲ್ಕೈದು ಠಾಣೆಗಳನ್ನು ನಿರ್ಮಿಸುತ್ತಿದ್ದರು. ಈ ಬಾರಿ ೨೦೦ ಕೋಟಿ ರೂ. ಇರಿಸಿಕೊಂಡು ರಾಜ್ಯದಾದ್ಯಂತ ೧೦೦ ಪೊಲೀಸ್ ಠಾಣೆ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ. ನಮ್ಮ ಪೊಲೀಸರು ಕೆಲಸ ಮಾಡುವ ಸ್ಥಳ ಅತ್ಯುತ್ತಮವಾಗಿರಬೇಕು. ಜೊತೆಗೆ ಅವರು ವಾಸ ಮಾಡುವ ಮನೆಗಳು ಚೆನ್ನಾಗಿರಬೇಕು.
ಇದನ್ನೂ ಓದಿ:- ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ಗೆ ಕಂಟಕ; ಆರಗ ಭವಿಷ್ಯ
ಹಿಂದೆ ಸಿಂಗಲ್ ರೂಮ್ ಬೆಡ್ ರೂಮ್ ಇರುತ್ತಿತ್ತು. ಈಗ ಡಬ್ಬಲ್ ಬೆಡ್ ರೂಮ್ ಮನೆ ನಿರ್ಮಿಸಿ ಕೊಡಲಾಗುತ್ತಿದೆ. ಈಗಾಗಲೆ ೧೧ ಸಾವಿರ ಮನೆ ನಿರ್ಮಿಸಲಾಗಿದ್ದು, ೨೦೨೫ರೊಳಗೆ ಮತ್ತೆ ೧೦ಸಾವಿರ ಮನೆ ನಿರ್ಮಿಸುವ ಗುರಿ ಹೊಂದಲಾಗಿದೆ. ಇದಕ್ಕೆ ಬೇಕಾದ ಎಲ್ಲ ಸೌಲಭ್ಯಗಳನ್ನು ಸರ್ಕಾರದ ಕಡೆಯಿಂದ ನಿರ್ವಹಿಸಲಾಗುತ್ತಿದೆ. ಪೊಲೀಸ್ ಇಲಾಖೆಗೆ ಇಷ್ಟೊಂದು ಹಣಕೊಟ್ಟ ಸರ್ಕಾರ ದೇಶದಲ್ಲಿಯೇ ನಮ್ಮ ರಾಜ್ಯ ಮೊದಲು ಎಂದರು.
ನಾಲ್ಕು ವರ್ಷದ ಹಿಂದೆ ರಾಜ್ಯದಲ್ಲಿ ೩೩ ಸಾವಿರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಖಾಲಿ ಇತ್ತು. ಈಗ ವರ್ಷಕ್ಕೆ ನಾಲ್ಕು ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಈಗ ಕೇವಲ ೧೨ ಸಾವಿರ ಹುದ್ದೆಗಳು ಮಾತ್ರ ಖಾಲಿ ಇದೆ. ಈ ವರ್ಷ ಎಲ್ಲ ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಕಾನ್ಸ್ಟೇಬಲ್ಗಳಿಗೆ ಕೆಲಸದ ಒತ್ತಡ ಜಾಸ್ತಿಯಾಗುತ್ತಿರುವುದರಿಂದ ಸಮನ್ಸ್ ಜಾರಿಯನ್ನು ಮೊಬೈಲ್ ಮೂಲಕ, ಪೋಸ್ಟ್ ಮೂಲಕ ತಲುಪಿಸುವುದು ಇಲ್ಲವೆ ಖಾಸಗಿ ಏಜೆನ್ಸಿಗೆ ಸಮನ್ಸ್ ಜಾರಿ ಮಾಡುವ ಹೊಣೆಗಾರಿಕೆ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಜನ ಬಂದು ಪೊಲೀಸ್ ಠಾಣೆಗೆ ದೂರು ನೀಡುವುದನ್ನು ತಪ್ಪಿಸಲು ೧೧೨ ವಾಹನ ಬಿಡಲಾಗಿದೆ. ೧೧೨ಗೆ ಫೋನ್ ಮಾಡಿದರೆ ತಕ್ಷಣ ಪೊಲೀಸರು ನಗರವ್ಯಾಪ್ತಿಯಲ್ಲಿ ೧೦ರಿಂದ ೧೫ ನಿಮಿಷದಲ್ಲಿ, ಹಳ್ಳಿಗಳಿಗೆ ೨೦ರಿಂದ ೩೦ ನಿಮಿಷದಲ್ಲಿ ತಲುಪುತ್ತಿದ್ದು, ಈ ಯೋಜನೆ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಇದರ ಜೊತೆಗೆ ಹೈವೆ ಪೆಟ್ರೋಲ್ ಸಹ ಸಂಚಾರ ನಿಯಂತ್ರಣದ ಬಗ್ಗೆ ಗಮನ ಹರಿಸುತ್ತಿದೆ.
ಜಿಲ್ಲೆಗೊಂದು ಮಹಿಳಾ ಠಾಣೆ ನಿರ್ಮಿಸಿದ್ದು, ತಾಲೂಕು ಕೇಂದ್ರದ ಠಾಣೆಯಲ್ಲೂ ಮಹಿಳೆಯರಿಂದ ದೂರು ಸ್ವೀಕರಿಸಲು ಮಹಿಳಾ ಸಿಬ್ಬಂದಿ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿರುವ ಸೈಬರ್ ಠಾಣೆಯನ್ನು ಆಧುನಿಕರಣಗೊಳಿಸುವ, ಠಾಣೆಯಲ್ಲಿರುವವರಿಗೆ ಗುಜರಾತ್ ಸರ್ಕಾರದ ಜೊತೆ ಜಂಟಿಯಾಗಿ ಸೂಕ್ತ ತರಬೇತಿ ಕೊಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು. ಶಾಸಕ, ಎಂಎಸ್ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ.ಮಹೇಶ್, ಸದಸ್ಯರಾದ ಟಿ.ಡಿ.ಮೇಘರಾಜ್, ಬಿ.ಎಚ್.ಲಿಂಗರಾಜ್, ಗಣೇಶಪ್ರಸಾದ್, ನಗರಠಾಣೆ ವೃತ್ತ ನಿರೀಕ್ಷಕ ಅಶೋಕಕುಮಾರ್ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Crime: ಪ್ರೇಯಸಿ ಜತೆ ಸುತ್ತಾಡಿದ್ದಕ್ಕೆ ಹತ್ಯೆಗೈದ ಪ್ರಿಯಕರ!
Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ
Arrested: ಐಪಿಎಸ್ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ
HIV vaccine; ಎಚ್ಐವಿ ತಡೆಗೆ 2 ಡೋಸ್ ಲಸಿಕೆ ಅಭಿವೃದ್ಧಿ: ಎಂಐಟಿ
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.