ಆ್ಯಶಸ್‌ ಎದುರಾಳಿಗಳ ನಡುವೆ ಟಿ20 ಕದನ

ಇಂಗ್ಲೆಂಡ್‌ ವಿರುದ್ಧ ಆಸ್ಟ್ರೇಲಿಯ ಮಹತ್ವದ ಹೋರಾಟ

Team Udayavani, Oct 30, 2021, 5:50 AM IST

ಆ್ಯಶಸ್‌ ಎದುರಾಳಿಗಳ ನಡುವೆ ಟಿ20 ಕದನ

ದುಬೈ: ಇನ್ನು ಕೆಲವೇ ದಿನಗಳಲ್ಲಿ ಪ್ರತಿಷ್ಠಿತ ಆ್ಯಶಸ್‌ ಟೆಸ್ಟ್‌ ಸರಣಿಯಲ್ಲಿ ಸೆಣೆಸಾಡಲಿರುವ ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್‌ ತಂಡಗಳು ಇದಕ್ಕೂ ಮುನ್ನ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಅದೃಷ್ಟಪರೀಕ್ಷೆಗೆ ಇಳಿಯಲಿವೆ.

ಶನಿವಾರ ದುಬೈಯಲ್ಲಿ ಫಿಂಚ್‌-ಮಾರ್ಗನ್‌ ಪಡೆಗಳು ಸೆಣೆಸಲಿವೆ.

ಗುಂಪು ಒಂದರಮುಖಾಮುಖಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನಾಡಿರುವ ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್‌ ಎರಡೂ ಪಂದ್ಯಗಳನ್ನು ಗೆದ್ದು ಪಾರಮ್ಯ ಸಾಧಿಸಿವೆ. +3.614ರಷ್ಟು ಉತ್ತಮ ರನ್‌ರೇಟ್‌ ಹೊಂದಿರುವ ಇಂಗ್ಲೆಂಡ್‌ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದೆ.

ಆಸ್ಟ್ರೇಲಿಯ +0.727 ರನ್‌ರೇಟ್‌ನೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಶನಿವಾರದ ಮುಖಾಮುಖಿಯಲ್ಲಿ ಗೆದ್ದವರಿಗೆ ನಾಕೌಟ್‌ ಟಿಕೆಟ್‌ ಖಾತ್ರಿಯಾಗಲಿದೆ ಎಂಬುದು ಈಗಿನ ಲೆಕ್ಕಾಚಾರ.

ಆಸ್ಟ್ರೇಲಿಯ ಉದ್ಘಾಟನಾ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 5 ವಿಕೆಟ್‌ಗಳಿಂದ ಮಣಿಸಿತ್ತು. ಬಳಿಕ ಗುರುವಾರ ಶ್ರೀಲಂಕಾವನ್ನು 7 ವಿಕೆಟ್‌ಗಳಿಂದ ಉರುಳಿಸಿತು.

ಇನ್ನೊಂದೆಡೆ ವೆಸ್ಟ್‌ ಇಂಡೀಸ್‌ ಮತ್ತು ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಇಂಗ್ಲೆಂಡ್‌ ಅಜೇಯವಾಗಿ ಉಳಿದಿದೆ.

50-50 ಪಂದ್ಯ: ಬಲಾಬಲದ ಲೆಕ್ಕಾಚಾರದಲ್ಲಿ ಇದೊಂದು 50-50 ಪಂದ್ಯ. ಎರಡೂ ತಂಡಗಳ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗ ಸದೃಢವಾಗಿದೆ. ಅದರಲ್ಲೂ ರನ್‌ ಬರಗಾಲದಲ್ಲಿದ್ದ ಎಡಗೈ ಆರಂಭಕಾರ ಡೇವಿಡ್‌ ವಾರ್ನರ್‌ ಲಂಕೆಯೆದುರು ಅರ್ಧಶತಕ ಬಾರಿಸಿ ಲಯಕ್ಕೆ ಮರಳಿರುವುದು ಕಾಂಗರೂ ಪಡೆಯ ಶಕ್ತಿಯನ್ನು ಹೆಚ್ಚಿಸಿದೆ. ನಾಯಕ ಫಿಂಚ್‌ ಕೂಡ ಲಯ ಕಂಡುಕೊಂಡಿದ್ದಾರೆ. ಮಾರ್ಷ್‌, ಮ್ಯಾಕ್ಸ್‌ವೆಲ್‌, ಸ್ಮಿತ್‌, ಸ್ಟಾಯಿನಿಸ್‌, ವೇಡ್‌ ಅವರಿಂದ ಆಸೀಸ್‌ ಬ್ಯಾಟಿಂಗ್‌ ಸರದಿ ಬೆಳೆಯಲಿದೆ.

ತ್ರಿವಳಿ ವೇಗಿಗಳಾದ ಸ್ಟಾರ್ಕ್‌, ಕಮಿನ್ಸ್‌, ಹೇಝಲ್‌ವುಡ್‌; ಸ್ಪಿನ್ನರ್‌ ಝಂಪ ಆಸ್ಟ್ರೇಲಿಯದ ಬೌಲಿಂಗ್‌ ಶಕ್ತಿಯಾಗಿದ್ದಾರೆ. ಕಳೆದ ಪಂದ್ಯದ ಆರಂಭದಲ್ಲಿ ಶ್ರೀಲಂಕಾ ಸಿಡಿದು ನಿಂತಾಗ ಝಂಪ ಭರ್ಜರಿ ಬ್ರೇಕ್‌ ಹಾಕಿದ್ದರು. ಆದರೆ ಆಲ್‌ರೌಂಡರ್‌ಗಳಾದ ಮ್ಯಾಕ್ಸ್‌ವೆಲ್‌ ಮತ್ತು ಸ್ಟಾಯಿನಿಸ್‌ ಅವರ ಎಸೆತಗಳು ಪರಿಣಾಮಕಾರಿ ಆಗಿರಲಿಲ್ಲ. ಇವರಿಬ್ಬರ 4 ಓವರ್‌ಗಳಲ್ಲಿ 51 ರನ್‌ ಸೋರಿ ಹೋಗಿತ್ತು.

ಇಂಗ್ಲೆಂಡ್‌ ಬೌಲಿಂಗ್‌ ಬಲ: ವೆಸ್ಟ್‌ ಇಂಡೀಸನ್ನು 55ಕ್ಕೆ ಉರುಳಿಸಿದ ಜೋಶ್‌ನಲ್ಲಿದ್ದ ಇಂಗ್ಲೆಂಡ್‌, ಬಳಿಕ ಬಾಂಗ್ಲಾದೇಶಕ್ಕೆ ಬಿಟ್ಟುಕೊಟ್ಟದ್ದು 124 ರನ್‌ ಮಾತ್ರ. ಬಾಂಗ್ಲಾ ವಿರುದ್ಧ ಜೇಸನ್‌ ರಾಯ್‌ 61 ರನ್‌ ಬಾರಿಸಿ ಮೆರೆದಿದ್ದರು. ಇವರ ಜತೆಗಾರ ಬಟ್ಲರ್‌, ಮಾಲನ್‌, ಬೇರ್‌ಸ್ಟೊ, ಮಾರ್ಗನ್‌, ಲಿವಿಂಗ್‌ಸ್ಟೋನ್‌ ಅವರೆಲ್ಲ ಬ್ಯಾಟಿಂಗ್‌ ವಿಭಾಗದ ಆಧಾರಸ್ತಂಭವಾಗಿದ್ದಾರೆ.

ಆದರೆ ಇಂಗ್ಲೆಂಡಿನ ಸ್ಟಾರ್‌ ಕ್ರಿಕೆಟಿಗನಾಗಿ ಮೆರೆಯುತ್ತಿರುವವರು ಸ್ಪಿನ್‌ ಬೌಲಿಂಗ್‌ ಆಲ್‌ರೌಂಡರ್‌ ಮೊಯಿನ್‌ ಅಲಿ. ಎರಡೂ ಪಂದ್ಯಗಳಲ್ಲಿ ಬೌಲಿಂಗ್‌ ಆರಂಭಿಸಿರುವ ಅಲಿ 4 ವಿಕೆಟ್‌ ಉರುಳಿಸಿದ್ದಾರೆ. ಮತ್ತೋರ್ವ ಸ್ಪಿನ್ನರ್‌ ಆದಿಲ್‌ ರಶೀದ್‌ ಕೂಡ ಕಾಂಗರೂಗಳನ್ನು ಕಾಡಬಹುದು. ವೇಗಿ ಟೈಮಲ್‌ ಮಿಲ್ಸ್‌ ಡೆತ್‌ ಓವರ್‌ಗಳಲ್ಲಿ ಹೆಚ್ಚು ಘಾತಕವಾಗಿ ಪರಿಣಮಿಸುತ್ತಿದ್ದಾರೆ. ಒಟ್ಟಾರೆ, ಸಮಬಲದ ತಂಡಗಳ ನಡುವಿನ ಈ ಹೋರಾಟ ವಿಶ್ವಕಪ್‌ ಕೂಟದ ಬಿಗ್‌ ಮ್ಯಾಚ್‌ ಎನಿಸುವುದರಲ್ಲಿ ಅನುಮಾನವಿಲ್ಲ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.