ಕಾಡುಗೊಲ್ಲರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ


Team Udayavani, Oct 30, 2021, 3:17 PM IST

Untitled-1

ಹೊಳಲ್ಕೆರೆ: ಕಾಡುಗೊಲ್ಲರನ್ನು ಅಲೆಮಾರಿ ಸಮುದಾಯಕ್ಕೆ ಸೇರಿಸಲು ರಾಜ್ಯದಲ್ಲಿ ಕಾಡುಗೊಲ್ಲರ ಸಾಮಾಜಿಕ ಸ್ಥಿತಿಗತಿ, ಆಚಾರವಿಚಾರ, ಕಲೆ ಸಾಹಿತ್ಯ ಕುರಿತು ಅಧ್ಯಯನ ನಡೆಸಿ ಸರಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ ಹೇಳಿದರು.

ಅವರು ಹೊಳಲ್ಕೆರೆ ತಾಲೂಕಿನಲ್ಲಿರುವ ಗೊಲ್ಲರಹಟ್ಟಿಗಳಲ್ಲಿ ಗೊಲ್ಲರ ಸಮುದಾಯದ ಕುರಿತು ಮಾಹಿತಿ ಪಡೆದು ಮಾತನಾಡಿದರು. ರಾಜ್ಯದಲ್ಲಿರುವ ಕಾಡು ಗೊಲ್ಲರ ಸಾಮಾಜಿಕ, ಆರ್ಥಿಕ, ಸ್ಥಿತಿಗತಿ ಅಧ್ಯಯನ ಮಾಡಲು ತಾಲೂಕಿನ ವಿವಿಧ ಗೊಲ್ಲರಹಟ್ಟಿಗಳಿಗೆ ಭೇಟಿ ನೀಡಿ ಪರಿಶೀಲನೆನಡೆಸಿದೆ. ಇದು ಸಾಕಷ್ಟು ಶೋಷಿತ ಹಾಗೂ ಹಿಂದುಳಿದ ಸಮುದಾಯವಾಗಿದೆ. ರಾಜ್ಯದ12 ಜಿಲ್ಲೆಯಲ್ಲಿ ಅತಿಹೆಚ್ಚು ಕಾಣಿಸಿಕೊಳ್ಳುವಕಾಡುಗೊಲ್ಲರಿಗೆ ಸಾಮಾಜಿಕ ಸ್ಥಾನ ಮಾನ ಕಲ್ಪಿಸಲು ಸರಕಾರಕ್ಕೆ ಸೂಕ್ತ ವರದಿ ಸಲ್ಲಿಸಲು ಎಲ್ಲಾ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಾಗಿದೆ ಎಂದರು.

ಕಾಡುಗೊಲ್ಲರನ್ನು ಅಲೆಮಾರಿಗಳ ಪಟ್ಟಿಗೆ ಸೇರಿಸುವ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದ 12ಜಿಲ್ಲೆಗಳಲ್ಲಿ ಕಾಡುಗೊಲ್ಲರಿದ್ದಾರೆ. ಗೊಲ್ಲರ ಹಟ್ಟಿಗಳಲ್ಲಿ ಮೂಲ ಸೌಕರ್ಯಗಳಿಲ್ಲ. ಗೊಲ್ಲರು ಬಡತನದಿಂದಜೀವನ ನಡೆಸುತ್ತಿದ್ದು, ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮುಂದೆ ಬರಬೇಕಿದೆ. ಶಿಕ್ಷಣ ಪಡೆದರೆ ಮಾತ್ರ ಇವರಸ್ಥಿತಿ ಸುಧಾರಣೆ ಆಗಲಿದೆ. ಗೊಲ್ಲರ ಹಟ್ಟಿಗಳಲ್ಲಿ ಇನ್ನೂ ಮೌಢ್ಯಾಚರಣೆ ಜೀವಂತವಾಗಿದ್ದು, ಅವುಗಳಿಂದ ಹೊರ ಬರಬೇಕಿದೆ. ಗೊಲ್ಲರ ಹಟ್ಟಿಗಳನ್ನು ಕಂದಾಯ ಗ್ರಾಮ ಮಾಡಲು ಬೇಡಿಕೆ ಇದ್ದು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.

ಕುರಿ ಕಾಯುವುದು ಕಾಡುಗೊಲ್ಲರ ಮುಖ್ಯ ಕಸುಬು. ಅದಕ್ಕೂ ಅನೇಕ ಅಡೆತಡೆಗಳು ಎದುರಾಗುತ್ತಿವೆ. ಕುರಿ ಮೇಯಿಸುವ ಉದ್ದೇಶದಿಂದ ಅರಣ್ಯ ಪ್ರದೇಶದಲ್ಲಿ ಟೆಂಟ್‌ ಹಾಕಿಕೊಂಡರೆ ಅರಣ್ಯ ಇಲಾಖೆಯ ಅಧಿಕಾರಿಗಳು ಕಿರುಕುಳಕೊಡುತ್ತಿದ್ದಾರೆ ಎಂದು ದೂರುಗಳು ಬಂದಿವೆ. ಈ ಬಗ್ಗೆ ಡಿಸಿಎಫ್‌ ಜೊತೆ ಮಾತನಾಡಿದ್ದು, ವೃತ್ತಿಗೆ ಅಡ್ಡಿಪಡಿಸದಂತೆ ಸೂಚಿಸಿದ್ದೇನೆ. ಗೋಮಾಳಗಳಲ್ಲಿ ಬೇಲಿಹಾಕಿಕೊಂಡು ಕುರಿ ಸಾಕಲು ಅವಕಾಶ ಕೊಡಬೇಕು.ಅನುಗ್ರಹ ಯೋಜನೆ ಮುಂದುವರಿಸಲಾಗಿದ್ದು,ಆಕಸ್ಮಿಕವಾಗಿ ಸಾವನ್ನಪ್ಪುವ ಪ್ರತಿ ಕುರಿಗೆ 5 ಸಾವಿರರೂ. ಪರಿಹಾರ ವಿತರಿಸಲಾಗುವುದು ಎಂದು ಹೇಳಿದರು.

ತಾಲೂಕಿನ ನಂದನಹೊಸೂರು ಗೊಲ್ಲರಹಟ್ಟಿ, ಅವಳಿಹಟ್ಟಿ, ಕಂಬದೇವರಹಟ್ಟಿಗ್ರಾಮದಲ್ಲಿರುವ ಹಟ್ಟಿಗೊಲ್ಲ ಹಾಗೂ ಕಾಡುಗೊಲ್ಲಸಮುದಾಯದವರನ್ನು ಭೇಟಿ ಮಾಡಿ ಪರಿಶೀಲನೆ ನಡೆಸಿದರು.  ಹೊಳಲ್ಕೆರೆ ಪಟ್ಟಣದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯ ಭೇಟಿ ನೀಡಿವಿದ್ಯಾರ್ಥಿಗಳ ಜತೆ ಊಟ ಮಾಡಿದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷಕೆ.ಎಂ. ಹಾಲೇಶ್‌, ರಾಜ್ಯ ಹಿಂದುಳಿದ ವರ್ಗಗಳಆಯೋಗದ ಸದಸ್ಯ ಎಚ್‌.ಎಸ್‌. ಕಲ್ಯಾಣ್‌ಕುಮಾರ್‌, ರಾಜಶೇಖರ್‌, ಅರುಣ್‌ಕುಮಾರ್‌, ಕೆ.ಟಿ ಸುವರ್ಣ, ಜಿಲ್ಲಾ ಗೊಲ್ಲರ ಸಂಘದ ಅಧ್ಯಕ್ಷಮಹಾಲಿಂಗಪ್ಪ, ಜಿಪಂ ಮಾಜಿ ಸದಸ್ಯ ಡಿ.ಕೆ.ಶಿವಮೂರ್ತಿ, ರಾಜ್ಯ ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ಶಿವು ಯಾದವ್‌, ತಾಲೂಕು ಹಿಂದುಳಿದವರ್ಗಗಳ ಕಲ್ಯಾಣಾಧಿಕಾರಿ ಎಂ. ಪ್ರದೀಪ್‌ ಕುಮಾರ್‌, ಪತ್ರಕರ್ತ ಚಿತ್ತಪ್ಪ, ರಂಗಸ್ವಾಮಿ, ರೇವಣ್ಣ, ಹರ್ಷ ಯಾದವ್‌, ಉಮೇಶ್‌, ಇತರರು ಇದ್ದರು.

ಟಾಪ್ ನ್ಯೂಸ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Thekkatte: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ

Thekkatte: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.