ಗಮನ ಸೆಳೆದ ಸ್ತ್ರೀಶಕ್ತಿ ಸಂಘಗಳ ಆಹಾರ ಮೇಳ
Team Udayavani, Oct 30, 2021, 3:25 PM IST
ಚಿತ್ರದುರ್ಗ: ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಹಾಗೂಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ತ್ರೀಶಕ್ತಿಸ್ವ-ಸಹಾಯ ಗುಂಪುಗಳ ಆಹಾರ ಮೇಳ ಆಯೋಜಿಸಲಾಗಿತ್ತು.
ಜಿಲ್ಲಾ ವ್ಯಾಪ್ತಿಯ ಏಳು ಶಿಶು ಅಭಿವೃದ್ಧಿ ಯೋಜನೆ ಅಡಿಯಲ್ಲಿ ಬರುವ ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳು ಮನೆಯಲ್ಲಿಯೇ ತಯಾರಿಸಿದ ಆಹಾರ ಪದಾರ್ಥಗಳು ಆಹಾರ ಮಳಿಗೆಗಳಲ್ಲಿ ಕಂಡುಬಂದವು.
ಹಪ್ಪಳ, ಸಂಡಿಗೆ, ಚಕ್ಕುಲಿ, ಕೋಡುಬಳೆ, ರಾಗಿ ರೊಟ್ಟಿ, ಚಟ್ನಿ, ದ್ವಿದಳ ಧಾನ್ಯಗಳು, ಜೋಳದ ರೊಟ್ಟಿ, ಸಜ್ಜೆ ರೊಟ್ಟಿ, ಮೊಟ್ಟೆ ತರಕಾರಿ, ಎಲ್ಲಾ ತರಹದ ಹಣ್ಣುಗಳು, ತಂಪುಪಾನೀಯಗಳು, ಸಿಹಿ ತಿನಿಸು, ದೇಸಿಯಕೊಬ್ಬರಿ ಎಣ್ಣೆ, ಸಾಬೂನು, ವಿಧ ವಿಧವಾದ ಮೊಳಕೆ ಕಾಳುಗಳಿಂದ ತಯಾರಿಸಿದಪಲ್ಯ, ಕೋಸಂಬರಿ, ಅಗಸಿ ಚಟ್ನಿ ಮತ್ತಿತರೆತಿನಿಸುಗಳು ಕೈ ಬೀಸಿ ಕರೆಯುತ್ತಿದ್ದವು.
ಆಹಾರ ಮೇಳ ಉದ್ಘಾಟಿಸಿದ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಮಾತನಾಡಿ, ಆರೋಗ್ಯವನ್ನು ಸದೃಢವಾಗಿ ಕಾಯ್ದುಕೊಳ್ಳುವ ಮೂಲಕ ಆರೋಗ್ಯವಂತಸಮಾಜ ನಿರ್ಮಾಣ ಮಾಡಬೇಕು ಎಂದರು. ಆಹಾರ ಮೇಳದಲ್ಲಿ ಯಾವ ರೀತಿಯಾಗಿಆಹಾರ ಸೇವನೆ ಮಾಡಬೇಕು ಎಂದುವಿಭಿನ್ನವಾಗಿ ತೋರಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾತನಾಡಿ, ಆಹಾರ ಮೇಳದಲ್ಲಿ ಮನೆಯಲ್ಲಿಯೇ ಸಿಗುವಂತಹ ಆಹಾರ ಧಾನ್ಯಗಳು ಮತ್ತು ತರಕಾರಿಗಳನ್ನು ಬಳಸಿಕೊಂಡು ರುಚಿ ರುಚಿಯಾಗಿತಿನಿಸುಗಳನ್ನು ಸಿದ್ಧಪಡಿಸಿರುವುದು ವಿಶೇಷ ಎಂದರು.
ತಾಯಂದಿರು ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ಹೇಗೆ ತಯಾರಿಸಿ ನೀಡಬೇಕುಎಂಬುದನ್ನು ಹಲವಾರು ಸ್ತ್ರೀಶಕ್ತಿ ಸಂಘಗಳು ಮೇಳದಲ್ಲಿ ಪ್ರದರ್ಶನ ನೀಡಿವೆ. ಇಲ್ಲಿ ಸಿಗುವ ಸಿದ್ಧವಾದ ಆಹಾರ ಯಾವ ಕಾರ್ಪೋರೇಟ್ ವಾಣಿಜ್ಯ ಸಂಸ್ಥೆಯಲ್ಲಿಯು ಸಿಗುವುದಿಲ್ಲ ಎಂದು ತಿಳಿಸಿದರು.
ಜಿಲ್ಲಾ ವಾರ್ತಾಧಿಕಾರಿ ಬಿ.ಧನಂಜಯ ಮಾತನಾಡಿದರು. ಸ್ತ್ರೀಶಕ್ತಿ ಸ್ವ-ಸಹಾಯ ಗುಂಪುಗಳ ಆಹಾರಮೇಳ ಕಾರ್ಯಕ್ರಮದಲ್ಲಿ ಜಿಲ್ಲೆಯ 30 ಸ್ವ-ಸಹಾಯ ಗುಂಪುಗಳು ಭಾಗವಹಿಸಿದ್ದವು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ರಾಜಾನಾಯ್ಕ,
ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಜಿಪಂ ಉಪಕಾರ್ಯದರ್ಶಿ ರಂಗಸ್ವಾಮಿ, ಮಕ್ಕಳ ರಕ್ಷಣಾಧಿಕಾರಿ ಲೋಕೇಶಪ್ಪ, ಜಿಲ್ಲಾಅಂಗವಿಕಲರ ಕಲ್ಯಾಣಾ ಧಿಕಾರಿ ಜೆ.ವೈಶಾಲಿ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ
ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್ ಸಿಸಿ ಕೊಠಡಿಯೂ ಶಿಥಿಲ
Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು
Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ
Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.