ಎರಡು ತಿಂಗಳಿಂದ ಕಗ್ಗತ್ತಲ್ಲಲ್ಲಿಯೇ ಜೀವನ


Team Udayavani, Oct 30, 2021, 3:29 PM IST

19current

ಮುದಗಲ್ಲ: ಪಟ್ಟಣ ಸಮೀಪದ ತಲೇಖಾನ ಗ್ರಾಪಂ ವ್ಯಾಪ್ತಿಯ ಸುಮಾರು 200 ಕುಟುಂಬಗಳಿಗೆ ಎನ್‌ಜಿಒ ವಿದ್ಯುತ್‌ ಸಂಪರ್ಕವಿಲ್ಲದೇ ಕತ್ತಲಲ್ಲಿಯೇ ಜೀವನ ಸಾಗಿಸುವಂತಾಗಿದೆ.

ಹೌದು. ಆಗಸ್ಟ್‌ ತಿಂಗಳಿಂದ ಜೆಸ್ಕಾಂ ಇಲಾಖೆ ರೈತರ ಪಂಪ್‌ಸೆಟ್‌ ಲೈನ್‌ ಮತ್ತು ನಿರಂತರ ಜ್ಯೋತಿ ಲೈನ್‌ ಬೇರ್ಪಡಿಸಿದ್ದರಿಂದ ಇಲ್ಲಿನ ರೂಪಚೇಂದ್ರಪ್ಪನ ತೋಟದಲ್ಲಿನ 20 ಮನೆಗಳು, ಗೋಲ್ಲರಹಟ್ಟಿಯ 32 ಮನೆಗಳು, ಯರದೊಡ್ಡಿ ಕ್ರಾಸ್‌ದಲ್ಲಿನ 18 ಮನೆಗಳು, ಒಡ್ಡರಹಟ್ಟಿಯಲ್ಲಿನ 10 ಮನೆಗಳು ಸೇರಿದಂತೆ 200ಕ್ಕೂ ಹೆಚ್ಚು ಕುಟುಂಬಗಳು ಅಕ್ಷರ ಸಹ ನರಕ ಅನುಭವಿಸುತ್ತಿವೆ.

ರಾತ್ರಿ ಸಮಯದಲ್ಲಿ ಕತ್ತಲಲ್ಲಿಯೇ ಅಡುಗೆ ತಯಾರಿಸಿ ಊಟ ಮಾಡಬೇಕು. ವಿಷಜಂತು, ಕಾಡು ಪ್ರಾಣಿಗಳ ಭಯದಿಂದ ಸಂಜೆ 7ಗಂಟೆ ನಂತರ ಮಹಿಳೆಯರು, ಮಕ್ಕಳು ಬಾಗಿಲು ಹಾಕುವ ಸ್ಥಿತಿ ಇದೆ.

ರಾತ್ರಿ ಸಮಯದಲ್ಲಿ ಜನರು ಬರ್ಹಿದೆಸೆಗೆ ತೆರಳಲು ಸಹ ಭಯಪಡುವಂತಾಗಿದೆ. ಮೊಬೈಲ್‌ ಚಾರ್ಜಿಗೂ ಸಹ ವಿದ್ಯುತ್‌ ಸಂಪರ್ಕ ಇರುವ ಸಮೀಪದ ಗ್ರಾಮ, ತಾಂಡಾಗಳನ್ನು ಅವಲಂಬಿಸಬೇಕಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗಿದೆ. ವಿದ್ಯುತ್‌ ಸಂಪರ್ಕ ಕಲ್ಪಿಸುವಂತೆ ಇಲ್ಲಿನ ಚುನಾಯಿತ ಪ್ರತಿನಿಧಿಗಳಿಗೆ, ಜೆಸ್ಕಾಂ ಕಾರ್ಯಪಾಲನಾ ಅಭಿಯಂತರರ ಗಮನಕ್ಕೆ ತರಲಾಗಿದೆ.

ಸಿಂಧನೂರಿನ ಜೆಸ್ಕಾಂ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಹೋಗಿ ಒಂದೂವರೆ ತಿಂಗಳು ಗತಿಸಿದೆ ಎಂದು ಗ್ರಾಪಂ ಸದಸ್ಯರಾದ ದುರುಗಪ್ಪ ಕಟ್ಟಿಮನಿ, ಪಾಂಡುರಂಗ ನಾಯ್ಕ, ಮಾಜಿ ಸದಸ್ಯ ಗ್ಯಾನಪ್ಪ ರಾಠೊಡ, ಹನುಮಂತಪ್ಪ ಗೋಲರಹಟ್ಟಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾ ಆಯ್ತು ಈಗ ಪಾಕ್ ನ ಸಿಂಧ್ ನಲ್ಲಿರುವ ಹಿಂದೂ ದೇವಾಲಯಕ್ಕೆ ನುಗ್ಗಿ ಚಿನ್ನಾಭರಣ ಕಳವು

ತೋಟದ ಮನೆ ಯೋಜನೆಯಡಿ ಕ್ಷೇತ್ರದ ಪ್ರತಿ ಮನೆಗೂ ವಿದ್ಯುತ್‌ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು ಕಾರ್ಯ ವಿಳಂಬವಾಗುತ್ತಿದೆ. -ಆರ್‌.ಬಸನಗೌಡ ತುರುವಿಹಾಳ, ಶಾಸಕ

ನಿರಂತರ ಜ್ಯೋತಿ ಯೋಜನೆ ಕಾಮಗಾರಿ ನಡೆಸಿದಾಗಲೇ ಕೈ ಬಿಟ್ಟ ಮನೆಗಳನ್ನು ಸರ್ವೇ ಮಾಡಿ ಆಂದಾಜು ಪತ್ರಿಕೆ ತಯಾರಿಸಿ ವಿದ್ಯುತ್‌ ಸಂಪರ್ಕ ನೀಡಬೇಕಿತ್ತು. 1 ಅಥವಾ 2 ಲಕ್ಷ ರೂ. ಅಂದಾಜು ಪತ್ರಿಕೆ ಕಾಮಗಾರಿಗಳು ಎಇಇ ಹಂತದಲ್ಲಿವೆ. ಅನುದಾನ ಮಂಜೂರು ಮಾಡಿದ್ದೇನೆ. -ರಾಜಶೇಖರ, ಇಇ ಜೆಸ್ಕಾಂ ಸಿಂಧನೂರು ವಿಭಾಗ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.