ನಟ ಪುನೀತ್‌ರಿಂದ ಸಾರ್ಥಕ ಬದುಕು

ನೇತ್ರದಾನ ಮಾಡಿ ಅಂಧರ ಬಾಳಿಗೆ ಬೆಳಕು: ಶ್ರೀನಿವಾಸ್‌ „ ಜಿಲ್ಲಾದ್ಯಂತ ಅಪ್ಪುಗೆ ಶ್ರದ್ಧಾಂಜಲಿ

Team Udayavani, Oct 31, 2021, 2:55 PM IST

ನಟ ಪುನೀತ್‌ ಸಾರ್ಥಕ ಬದುಕು

ಮಂಡ್ಯ: ನಟ ಪುನೀತ್‌ ರಾಜಕುಮಾರ್‌ ಸಾವಿನ ಬಳಿಕವೂ ನೇತ್ರದಾನ ಮಾಡುವ ಮೂಲಕ ಇಬ್ಬರು ಅಂಧರ ಬಾಳಿಗೆ ಬೆಳಕಾಗಿ ಸಾರ್ಥಕತೆ ಮೆರೆದಿದ್ದಾರೆ ಎಂದು ಶಾಸಕ ಎಂ. ಶ್ರೀನಿವಾಸ್‌ ಹೇಳಿದರು. ತಾಲೂಕಿನ ಹನಕೆರೆ ವಿವೇಕ ವಿದ್ಯಾಸಂಸ್ಥೆ ವತಿಯಿಂದ ಶಾಲಾ ಆವರಣದಲ್ಲಿ ನಡೆದ ಅಗಲಿದ ನಟ ದಿ.ಪುನೀತ್‌ ರಾಜಕುಮಾರ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಅವರು, ಪುನೀತ್‌ ನಗುಮುಖ, ಸರಳ ವ್ಯಕ್ತಿತ್ವದಿಂದ ಎಲ್ಲರಿಗೂ ಇಷ್ಟವಾಗುತ್ತಿದ್ದ.

ತಂದೆ ರಾಜಕುಮಾರ್‌ ಅವರ ನಡೆಯನ್ನು ಅನುಸರಿಸಿ ಪುನೀತ್‌ ನೇತ್ರದಾನ ಮಾಡುವ ಮೂಲಕ ಕನ್ನಡಿಗರ ಮನಸ್ಸಿಗೆ ಮತ್ತಷ್ಟು ಹತ್ತಿರವಾಗಿದ್ದು, ತಂದೆಗೆ ತಕ್ಕ ಮಗ ಎಂದು ಬಣ್ಣಿಸಿದರು.

ಚಿತ್ರರಂಗ ಅನಾಥ: ಡಾ.ರಾಜಕುಮಾರ್‌ ಅವರ ಕಿರಿಯ ಮಗನಾದ ಲೋಹಿತ್‌ ಅವರು ಪುನೀತ್‌ ರಾಜಕುಮಾರ್‌ ಆಗುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಚಿತ್ರರಂಗದಲ್ಲಿ ಉನ್ನತ ಹೆಸರು ಗಳಿಸಿದ್ದರು. ಚಿಕ್ಕ ವಯಸ್ಸಿನಲ್ಲೇ ನಿಧನರಾಗುವ ಮೂಲಕ ಕನ್ನಡ ಚಿತ್ರರಂಗವನ್ನು ಅನಾಥ ಮಾಡಿದ್ದಾರೆ ಎಂದು ಕಂಬನಿ ಮಿಡಿದರು. ಪುನೀತ್‌ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅಭಿಮಾನಿಗಳು ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಕೋರಿದರು.

ಇದನ್ನೂ ಓದಿ:- ಮೀನು ಪದಾರ್ಥಕ್ಕಾಗಿ ಸ್ನೇಹಿತರ ಜಗಳ: ಕೊಲೆಯಲ್ಲಿ ಅಂತ್ಯ

ಸಮಾಜಕ್ಕೆ ಒಳ್ಳೆಯ ಸಂದೇಶ: ವಿವೇಕ ವಿದ್ಯಾಸಂಸ್ಥೆಯ ಶೈಕ್ಷಣಿಕ ಸಲಹೆಗಾರ ಜಯರಾಂ ಮಾತನಾಡಿ, ಪುನೀತ್‌ ರಾಜಕುಮಾರ್‌ ನಟನೆ ಜೊತೆಗೆ ಸಾಮಾಜಿಕ ಕೆಲಸ ಮಾಡಿದವರು. ಹಲವು ಜೀವಗಳಿಗೆ ಆಶ್ರಯಧಾತರಾಗಿದ್ದರು. ಬೆಂಗಳೂರಿನಲ್ಲಿ ಡಾ.ರಾಜ್‌ಕುಮಾರ್‌ ಅಕಾಡೆಮಿ ಸ್ಥಾಪಿಸಿ ಐಎಎಸ್‌ ವಿದ್ಯಾರ್ಥಿಗಳಿಗೆ ತರಬೇತಿ ಪಡೆಯಲು ಅನುಕೂಲ ಮಾಡಿಕೊಟ್ಟಿದ್ದರು ಎಂದು ಹೇಳಿದರು. ಅಪ್ಪನನ್ನು ಮೀರಿಸುವಷ್ಟು ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿ. ಅವರ ಚಲನಚಿತ್ರಗಳು ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ಸಾರುವಂತವಾಗಿವೆ ಎಂದರು.

ಉದ್ಯೋಗಾ ಧಿಕಾರಿ ವೇಣುಗೋಪಾಲ್‌, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಅಧಿ ಕಾರಿ ಶಿವಕುಮಾರ್‌, ವಿವೇಕ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಚ್‌.ಎಸ್‌.ಅಶ್ವತ್ಥ್, ಉಪಾಧ್ಯಕ್ಷ ಸಿ.ಮಾದಯ್ಯ, ಸಹ ಕಾರ್ಯದರ್ಶಿ ಶಿವರಾಂ ಇದ್ದರು.

 ಬೆಳಗೊಳದ ಹಿರಿಯರ ಜೊತೆ ಒಡನಾಟ

ಶ್ರೀ ರಂಗಪಟ್ಟಣ: ನಟ ಪುನೀತ್‌ ರಾಜ್‌ಕುಮಾರ್‌ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಹಿರಿಯರು ಎಂದರೆ ಅಪಾರ ಗೌರವ. ಈ ಗ್ರಾಮದ ಅಕ್ಕಪಕ್ಕ ಬಲಮುರಿ ಇತರೆ ಗ್ರಾಮಕ್ಕೆ ಶೂಟಿಂಗ್‌ಗೆ ಬಂದಾಗ ಬೆಳಗೊಳ ಗ್ರಾಮದ ಹಿರಿಯರ ಜೊತೆ ಸಾಕಷ್ಟು ಒಡನಾಡ ಇಟ್ಟುಕೊಂಡಿದ್ದರು ಎಂದು ಗ್ರಾಪಂ ಮಾಜಿ ಅಧ್ಯಕ್ಷ ಬಿ.ವಿ.ಲೋಕೇಶ್‌ ತಿಳಿಸಿದರು. ಅಲ್ಲದೇ ಇವರ ಮನೆಗಳಿಗೆ ಭೇಟಿಕೊಟ್ಟು ಕುಟುಂಬದವರ ಜೊತೆ ಒಡನಾಟ ಇಟ್ಟುಕೊಂಡಿದ್ದರು.

ಇದಕ್ಕೆ ಸಾಕ್ಷಿ ಎಂಬಂತೆ ಈ ಗ್ರಾಮದ ಚಿಕ್ಕಯಜಮಾನರಾಗಿದ್ದ ನಮ್ಮ ಚಿಕ್ಕಪ್ಪ ನಾಗರಾಜು ನಿಧನರಾಗಿ¨ªಾಗ ಅರ್ಧರಾತ್ರಿಯಲ್ಲಿ ಬಂದು ಅಂತಿಮ ದರ್ಶನ ಪಡೆದು ಹೋಗಿದ್ದರು. ಮನೆಯವರ ಜೊತೆ ಆತ್ಮೀಯ ಒಡನಾಟ ಇಟ್ಟುಕೊಂಡು ಮನೆಯ ಮಗನಂತೆ ಆಗಾಗ ಈ ಭಾಗಕ್ಕೆ ಶೂಟಿಂಗ್‌ ಬಂದ ವೇಳೆ ಅಡುಗೆ ಮಾಡಿಸಿ ಅವರಿದ್ದ ಸ್ಥಳಕ್ಕೆ ನಮ್ಮ ಚಿಕ್ಕಪ್ಪ ತೆಗೆದುಕೊಂಡು ಊಟ ಕೊಟ್ಟು ಉಣಬಡಿಸಿ ಬರುತ್ತಿದ್ದರು. ಅವರು ಕೂಡ ಸವಿದು ಹೋಗುತ್ತಿದ್ದ ನೆನಪಿನಿಂದ ಕುಟುಂಬ ಇದೀಗ ಅಪ್ಪು ನಿಧನಕ್ಕೆ ಕಂಬನಿ ಮಿಡಿಯುತ್ತಿದೆ ಎಂದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.