ಕನ್ನಡ ನಾಡಿಗೆ ಅರಸು ಸಮುದಾಯದ ಕೊಡುಗೆ ಅಪಾರ


Team Udayavani, Nov 1, 2021, 4:04 PM IST

ಕನ್ನಡ ನಾಡಿಗೆ ಅರಸು ಸಮುದಾಯದ ಕೊಡುಗೆ ಅಪಾರ

ಚಿಕ್ಕಮಗಳೂರು: ಅರಸು ಸಮುದಾಯದ ಶ್ರೇಯೋಭಿವೃದ್ಧಿಗೆ ಕಂಕಣಬದ್ಧರಾಗುವುದಾಗಿ ಮೈಸೂರು ಮಹಾರಾಜ ಮನೆತನದ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದರು.

ಭಾನುವಾರ ನಗರದ ತೇಗೂರು ರಸ್ತೆಯಲ್ಲಿ 3 ಕೋಟಿ 70 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿನಿರ್ಮಿಸಿರುವ ಜಿಲ್ಲಾ ಅರಸು ಸಮುದಾಯ ಭವನ ಉದ್ಘಾಟಿಸಿ ಅವರು ಮಾತನಾಡಿದರು.ಅರಸು ಸಮುದಾಯ ಇಡೀ ನಾಡಿಗೆ ಅಪಾರಕೊಡುಗೆ ನೀಡಿದೆ. ಇಂತಹ ಭವ್ಯ ಇತಿಹಾಸಹೊಂದಿದ ಸಮುದಾಯದ ಅಭಿವೃದ್ಧಿಗೆ ಐಕ್ಯತೆ ಮತ್ತು ಒಗ್ಗಟ್ಟು ಪ್ರದರ್ಶಿಸಬೇ ಕಿದೆ ಎಂದು ಅಭಿಪ್ರಾಯಿಸಿದರು.

ಅರಸು ಸಂಘಕ್ಕೆ 100 ವರ್ಷ ತುಂಬುತ್ತಿರುವಮತ್ತು ಅರಸು ಮಹಾ ಸಮ್ಮೇಳನ ನಡೆಯದೆ40 ವರ್ಷ ಆದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಅರಸು ಮಹಾಸಮ್ಮೇಳನ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದರು.

ಶಾಸಕ ಸಿ.ಟಿ. ರವಿ ಮಾತನಾಡಿ, ಅರಸುಸಮುದಾಯದವರು ಧರ್ಮ ಮತ್ತು ಸಂಸ್ಕೃತಿಗೆಎಂದೂ ಬೆನ್ನು ತಿರುಗಿಸಿದವರಲ್ಲ, ಎದೆಕೊಟ್ಟುನಿಂತವರು. ಉತ್ತರ ಭಾರತದಲ್ಲಿ ನಮ್ಮ ಸಂಸ್ಕೃತಿಗೆಧಕ್ಕೆ ತರುವ ಅಪಚಾರ ನಡೆಯುತ್ತಿತ್ತೋ, ಅದುದಕ್ಷಿಣ ಭಾರತದಲ್ಲಿಯೂ ನಡೆಯತ್ತಿತ್ತು. ಅಂದು ವಿಜಯನಗರ ಸಾಮ್ರಾಜ್ಯಕ್ಕೆ ಸರ್ವಸ್ವವನ್ನುಸಮರ್ಪಿಸಿ ನಿಂತದ್ದು ಮೈಸೂರು ಸಂಸ್ಥಾನ ಎಂದರು.

ಅರಸು ಸಮುದಾಯದ ಅಭಿವೃದ್ಧಿಗೆ ಸಿಂಹಪಾಲು ಅನುದಾನವನ್ನು ತಾವು ಶಾಸಕರಾದಬಳಿಕ ನೀಡಿದ್ದೇನೆ. ಮುಂದಿನ ದಿನಗಳಲ್ಲಿಸಮುದಾಯದ ಅಭಿವೃದ್ದಿಗೆ ಇನ್ನಷ್ಟು ಅನುದಾನ ನೀಡುವುದಾಗಿ ಭರವಸೆ ನೀಡಿದರು.

ವಿಧಾನ ಪರಿಷತ್‌ ಉಪ ಸಭಾಪತಿ ಎಂ.ಕೆ. ಪ್ರಾಣೇಶ್‌ ಮಾತನಾಡಿ, ಶ್ರಮ, ಇಚ್ಛಾಶಕ್ತಿಹೊಂದಿದ್ದಾಗ ನಾವು ಕೈಗೊಳ್ಳುವ ಕಾರ್ಯಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲುಸಾಧ್ಯವಾಗುತ್ತದೆ. ಇದಕ್ಕೆ ಅರಸು ಸಮುದಾಯ ಭವನ ನಿರ್ಮಾಣವೇ ಸಾಕ್ಷಿ ಎಂದರು.

ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡ ಮಾತನಾಡಿ, ಮೈಸೂರು ರಾಜ ಮನೆತನಕ್ಕೆ ನೂರಾರು ವರ್ಷಗಳ ಇತಿಹಾಸವಿದೆ.ಪ್ರಜಾಪ್ರತಿನಿ ಧಿ ವ್ಯವಸ್ಥೆಯನ್ನು ಅಂದಿನಮಹಾರಾಜರಾದ ನಾಲ್ವಡಿ ಕೃಷ್ಣರಾಜ್‌ ಅರಸರು ಜಾರಿಗೆ ತಂದರು. ನಾಲ್ವಡಿ ಕೃಷ್ಣರಾಜ್‌ ಒಡೆಯರ್‌ಆಡಳಿತಾವ ಧಿ ಸುವರ್ಣ ಯುಗವಾಗಿತ್ತು ಎಂದರು.

ನಾಲ್ವಡಿ ಕೃಷ್ಣರಾಜ್‌ ಒಡೆಯರ್‌ ಶಿಕ್ಷಣ, ಆರೋಗ್ಯ, ಸ್ತ್ರೀಯರಿಗೆ ಕಡ್ಡಾಯ ಶಿಕ್ಷಣ,ಅಂಗವಿಕಲರ ವಿಶ್ವವಿದ್ಯಾಲಯ, ಮೈಸೂರು ವಿಶ್ವವಿದ್ಯಾಲಯ ಹೀಗೆ ಹಲವಾರು ಕ್ಷೇತ್ರಗಳಲ್ಲಿಕೊಡುಗೆ ನೀಡಿದರು. ರೈತರ ಕಲ್ಯಾಣಕ್ಕಾಗಿವಾಣಿವಿಲಾಸ ಸಾಗರ ನಿರ್ಮಿಸಿದರು. ಶಿವನಸಮುದ್ರದಿಂದ ಬೆಂಗಳೂರು ನಗರಕ್ಕೆ ಮೊದಲ ಬಾರಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿ ಬೆಳಕು ನೀಡಿದರು ಎಂದು ತಿಳಿಸಿದರು.

1918ರಲ್ಲಿ ಮಿಲ್ಲರ್‌ ಆಯೋಗ ರಚಿಸಿಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕ್ಕೆ ಶೇ.70ರಷ್ಟು ಮೀಸಲಾತಿ ನೀಡಿದರು.ಕೋ- ಆಪರೇಟಿವ್‌ ಸೊಸೈಟಿ, ಅಪೆಕ್ಸ್‌ ಬ್ಯಾಂಕ್‌,ಭೂ ಬ್ಯಾಂಕ್‌ ಕೊಡುಗೆಯನ್ನು ನೀಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಸನ್ಮಾನಿಸಿದರು. ಜಿಲ್ಲಾ ಅರಸು ಸಂಘದ ಜಿಲ್ಲಾಧ್ಯಕ್ಷ ಮಧುಕುಮಾರ್‌ ರಾಜ್‌ ಅರಸ್‌ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕ್ಷತ್ರಿಯ ಸಂಘದ ರಾಜಾಧ್ಯಕ್ಷ ಎಲ್‌.ಕೆ. ರಾಜು,ರಾಜ್ಯ ಅರಸು ಸಂಘದ ಸುಗಂಧರಾಜೇ ಅರಸ್‌,ತೇಗೂರು ಗ್ರಾಪಂ ಧ್ಯಕ್ಷ ಗಜೇಂದ್ರ ರಾಜ್‌ ಅರಸ್‌,ಕರ್ತಿಕೆರೆ ಗ್ರಾಪಂ ಉಪಾಧ್ಯಕ್ಷೆ ಹೇಮಾವತಿಕೃಷ್ಣರಾಜೇ ಅರಸ್‌, ವಕೀಲ ಬೀಮರಾಜು ಇತರರು ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.