ಚಿಣ್ಣರಿಗೆ ತೆರೆದುಕೊಳ್ಳುತ್ತಿದೆ ಅಂಗನವಾಡಿ

ಅರ್ಧ ತಾಸಿಗೊಮ್ಮೆ ಪುಟಾಣಿಗಳ ಕೈ ತೊಳೆಯುವುದು ಕಡ್ಡಾಯ ಸಂದರ್ಶಕರಿಗೆ ನಿರ್ಬಂಧ

Team Udayavani, Nov 2, 2021, 7:00 AM IST

ಚಿಣ್ಣರಿಗೆ ತೆರೆದುಕೊಳ್ಳುತ್ತಿದೆ ಅಂಗನವಾಡಿ

ಮಂಗಳೂರು: ಕೋವಿಡ್‌ ಆತಂಕ ಮರೆಯಾಗುತ್ತಿರುವಂತೆ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿದ್ದು, ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಚಿಣ್ಣರ ಆಗಮನಕ್ಕೆ ಅಂಗನವಾಡಿಗಳೂ ಸಜ್ಜಾಗಿವೆ.

ರಾಜ್ಯಾದ್ಯಂತ ನ. 8ರಿಂದ ಮುನ್ನೆಚ್ಚರಿಕ್ಕೆ ಕ್ರಮಗಳೊಂದಿಗೆ ಅಂಗನವಾಡಿಗಳನ್ನು ತೆರೆಯುವಂತೆ ಸರಕಾರ ಸೂಚಿಸಿದೆ. ವಿಶೇಷವೆಂದರೆ ಕೇಂದ್ರಕ್ಕೆ ಬರುವ ಎಲ್ಲರಿಗೂ ಕೈ ತೊಳೆಯಲು ಸೋಪು ವ್ಯವಸ್ಥೆ ಮಾಡಲಾಗುತ್ತಿದೆ. ಜತೆಗೆ ಎಲ್ಲ ಮಕ್ಕಳು ಪ್ರತೀ 30 ನಿಮಿಷಕ್ಕೊಮ್ಮೆ ಕೈ ತೊಳೆಯಬೇಕು.

ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯ. ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹಾಗೂ ಹಾಜರಾಗುವ ಮಕ್ಕಳ ಪೋಷಕರು ಕಡ್ಡಾಯವಾಗಿ ಎರಡು ಡೋಸ್‌ ಲಸಿಕೆ ಪಡೆದಿರಬೇಕು. ಸಂದರ್ಶಕರಿಗೆ ನಿರ್ಬಂಧವಿರಲಿದೆ.

ಅಂಗನವಾಡಿ ಕೇಂದ್ರಗಳನ್ನು ಮೊದಲ ಹಂತದಲ್ಲಿ ಬೆಳಗ್ಗೆ 10ರಿಂದ 12ರ ವರೆಗೆ ತೆರೆಯಬಹುದಾಗಿದೆ. ಜ್ವರ, ಕೆಮ್ಮು, ನೆಗಡಿ, ಗಂಟಲು ನೋವು, ಮೈಕೈ ನೋವು, ಉಸಿರಾಟದ ಸಮಸ್ಯೆ, ರುಚಿ ಹಾಗೂ ವಾಸನೆಯನ್ನು ಕಳೆದುಕೊಳ್ಳುವ ಲಕ್ಷಣಗಳಿದ್ದರೆ ಅಂತಹ ಮಗುವನ್ನು ಕರೆತರದಂತೆ ಸೂಚಿಸಬೇಕಿದೆ.

ಇದನ್ನೂ ಓದಿ:ಬೈಕ್‌ ಬೋಟ್‌ ಹಗರಣ ತನಿಖೆ ಕೈಗೆತ್ತಿಕೊಂಡ ಸಿಬಿಐ

ಮಕ್ಕಳನ್ನು 1 ಮೀಟರ್‌ ಅಂತರದಲ್ಲಿ ಕೂರಿಸಬೇಕು. ಮಕ್ಕಳ ಸಂಖ್ಯೆ ಹೆಚ್ಚು ಇದ್ದಲ್ಲಿ 2 ಅಥವಾ 3 ದಿನಕ್ಕೊಮ್ಮೆ ಬರುವಂತೆ ಸೂಚಿಸಬೇಕು. ಒಂದು ವೇಳೆ ಮಕ್ಕಳ ಸಂಖ್ಯೆ ಕಡಿಮೆ ಇದ್ದಲ್ಲಿ ಎಲ್ಲ ಮಕ್ಕಳನ್ನು ಪ್ರತೀ ದಿನ ಬರುವಂತೆ ತಿಳಿಸಬೇಕು. ವಲಸೆ ಬಂದವರ ಮಕ್ಕಳು ಊರಲ್ಲಿದ್ದರೆ ಅಂತಹ ಮಕ್ಕಳನ್ನು ಅಂಗನವಾಡಿಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಂಡು ಪೌಷ್ಟಿಕ ಆಹಾರದೊಂದಿಗೆ ಎಲ್ಲ ಸೇವೆಗಳನ್ನು ಒದಗಿಸಬೇಕು. ಯಾವುದೇ ದಾಖಲಾತಿ ಇಲ್ಲದಿದ್ದರೂ ನೋಂದಣಿ ನಿರಾಕರಿಸಬಾರದು.

ಸ್ಯಾನಿಟೈಸರ್‌ ಎಚ್ಚರಿಕೆ ಇರಲಿ!
ಸ್ಯಾನಿಟೈಸರ್‌/ಸೋಂಕು ನಿವಾರಕ ಪುಟಾಣಿಗಳ ಕೈಗೆ ಸಿಗದಂತೆ ಸುರಕ್ಷಿತ ಸ್ಥಳದಲ್ಲಿ ಇಡಬೇಕು ಎಂದು ಸೂಚಿಸಲಾಗಿದೆ.

ಪೌಷ್ಟಿಕ ಆಹಾರ ಮನೆಗೆ
ಪ್ರಸ್ತುತ ಅಂಗನವಾಡಿ ಕೇಂದ್ರವನ್ನು ಪೂರ್ಣಪ್ರಮಾಣದಲ್ಲಿ ತೆರೆಯದೇ ಇರುವುದರಿಂದ ಮುಂದಿನ ಸೂಚನೆಯವರೆಗೆ ಪೂರಕ ಪೌಷ್ಟಿಕಾಂಶ ಯುಕ್ತ ಆಹಾರ/ಆಹಾರ ಪದಾರ್ಥಗಳನ್ನು ಮನೆಗೆ ನೀಡಲಾಗುತ್ತದೆ. ಅಂಗನವಾಡಿ ಆರಂಭವಾಗಿ 15 ದಿನಗಳ ವರೆಗೂ ಇದೇ ಕ್ರಮ ಜಾರಿಯಲ್ಲಿರಲಿದೆ. ಅನಂತರ ಪರಿಸ್ಥಿತಿಯನ್ನು ಅವಲೋಕಿಸಿ ಅಂಗನವಾಡಿಯಲ್ಲಿಯೇ ನೀಡುವ ಬಗ್ಗೆ ತೀರ್ಮಾನಿಸಲಾಗುತ್ತದೆ. ಕೇಂದ್ರ ಕಚೇರಿಯ ಸೂಚನೆಯ ಬಳಿಕ ಅಂಗನವಾಡಿ ಕೇಂದ್ರಗಳ ಫಲಾನುಭವಿಗಳಿಗೆ ಪೂರಕ ಪೌಷ್ಟಿಕ ಆಹಾರ, ಬಿಸಿಯೂಟ, ಬಿಸಿಹಾಲು, ಬೇಯಿಸಿದ ಮೊಟ್ಟೆ ನೀಡಲಾಗುವುದು.

ಅಂಗನವಾಡಿ ಕೇಂದ್ರ ಗಳನ್ನು ನ. 8ರಿಂದ ಪುನರಾರಂಭಿಸುವಂತೆ ಸರಕಾರ ಸೂಚನೆ ನೀಡಿದೆ. ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪಾಲಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.
– ಪಾಪಾ ಬೋವಿ ಹಾಗೂ ಶೇಷಪ್ಪ ಆರ್‌.
ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ.ಕ. ಹಾಗೂ ಉಡುಪಿ

-ದಿನೇಶ್‌ ಇರಾ

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.