ಕನ್ನಡ ಭಾಷೆ ಉದ್ಯೋಗ ಮಾಧ್ಯಮವೂ ಆಗಲಿ
Team Udayavani, Nov 2, 2021, 12:19 PM IST
ಚನ್ನಗಿರಿ: ಇತ್ತೀಚಿನ ದಿನಗಳಲ್ಲಿ ಕನ್ನಡ ಭಾಷೆ ಕಣ್ಮರೆಯಾಗುತ್ತಿದೆ ಎಂಬ ಆತಂಕವಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಭಾಷೆಯಬೆಳವಣಿಗೆ ಆಶಾದಾಯಕವಾಗಿದೆ. ಇದರ ಜೊತೆಗೆ ಮುಚ್ಚುತ್ತಿರುವ ಸರ್ಕಾರಿ ಶಾಲೆಗಳರಕ್ಷಣೆ ಬಗ್ಗೆ ಸರ್ಕಾರ ಗಮನ ಹರಿಸಬೇಕು. ಶಿಕ್ಷಣದ ಜೊತೆಗೆ ಉದ್ಯೋಗದ ಮಾಧ್ಯಮವಾಗಿ ಕನ್ನಡವನ್ನು ರೂಪಿಸಬೇಕು ಎಂದು ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಹೇಳಿದರು.
ಕನದನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಬ್ರಾಹ್ಮಿ ಲಿಪಿಯಿಂದರೂಪುಗೊಂಡ ಕನ್ನಡ ಭಾಷೆ ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿದೆ. ಸ್ವತಂತ್ರ ಭಾರತದಲ್ಲಿ ಕನ್ನಡ ಭಾಷೆ ಸಾಹಿತ್ಯ ಚಳವಳಿಯಾಗಿ ರೂಪುಗೊಂಡಿತು. ಅದಕ್ಕೆ ಸಾಹಿತಿಗಳು ಹಾಗೂ ಕನ್ನಡ ಪುರೋಹಿತರ ಕೊಡುಗೆ ಸ್ಮರಣೀಯ ಎಂದರು.
ಕನ್ನಡ ಶಕ್ತಿಯುತ ಭಾಷೆಯಾಗಿದ್ದು, ಭಾಷೆ ಬೆಳೆಯಲು ಕನ್ನಡದಲ್ಲಿ ಹೊಸ ಚಿಂತನೆಗಳನ್ನು ಹುಟ್ಟು ಹಾಕಬೇಕಿದೆ. ತತ್ವಶಾಸ್ತ್ರ, ವಿಜ್ಞಾನ, ಭೌತಶಾಸ್ತ್ರ ಸೇರಿದಂತೆ ಯಾವುದೇ ವಿಚಾರವಾಗಿ ಹೊಸ ಚಿಂತನೆಗಳನ್ನು ಕನ್ನಡದಲ್ಲಿ ಹುಟ್ಟು ಹಾಕಿದರೆ ವಿಶ್ವ ನಮ್ಮ ಭಾಷೆ ಕಲಿಯಲು ಒಲವು ತೋರುತ್ತದೆ. ಈ ನಿಟ್ಟಿನಲ್ಲಿ ಸಾಹಿತಿಗಳು, ವಿಜ್ಞಾನಿಗಳು, ಲೇಖಕರು ಚಿಂತನೆ ನಡೆಸಬೇಕೆಂದು ಸಲಹೆ ನೀಡಿದರು.
ತಹಶೀಲ್ದಾರ್ ಪಟ್ಟರಾಜ ಗೌಡ ಮಾತನಾಡಿ,ದ್ರಾವಿಡ ಭಾಷೆಗಳಲ್ಲಿ ಕನ್ನಡ ಭಾಷೆ ಮಹತ್ವದ ಸ್ಥಾನಹೊಂದಿದೆ. ಅಲ್ಲದೆ ಜಗತ್ತಿನ ಅತ್ಯಂತ ಶ್ರೀಮಂತ ಭಾಷೆಯಾಗಿದೆ. ಜಗತ್ತಿನ ಯಾವ ಭಾಷೆಯಲ್ಲಿಯೂಇಷ್ಟೊಂದು ವಿಪುಲವಾದ ಸಾಹಿತ್ಯಿಕ ಕೃಷಿ ಆಗಿಲ್ಲ ಎಂದರು.
ಪುರಸಭೆ ಸದಸ್ಯ ಚಿಕ್ಕಣ್ಣ, ಮುಖ್ಯಾಧಿಕಾರಿ ಬಸವರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್, ತಾಪಂ ಇಒ ಎಂ.ಆರ್. ಪ್ರಕಾಶ್ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.