ಎಡ್ಮಲೆ: 4 ದಶಕ ಕಳೆದರೂ ಸಿಗದ ಹಕ್ಕುಪತ್ರ


Team Udayavani, Nov 5, 2021, 3:30 AM IST

ಎಡ್ಮಲೆ: 4 ದಶಕ ಕಳೆದರೂ ಸಿಗದ ಹಕ್ಕುಪತ್ರ

ಗೋಳಿಯಂಗಡಿ: ಮಡಾಮಕ್ಕಿ ಗ್ರಾ.ಪಂ. ವ್ಯಾಪ್ತಿಯ ಒಂದನೇ ವಾರ್ಡ್‌ನ ಎಡ್ಮಲೆ ಭಾಗದಲ್ಲಿ ಕಳೆದ ಹಲವು ವರ್ಷಗಳಿಂದ ನೆಲೆಸಿರುವ 16 ಕುಟುಂಬಗಳಿಗೆ 4 ದಶಕಗಳಿಂದ ಅಲೆದಾಟ ನಡೆ ಸುತ್ತಿದ್ದರೂ, ಇನ್ನೂ ಜಾಗದ ಹಕ್ಕುಪತ್ರ ಮಾತ್ರ ಸಿಕ್ಕಿಲ್ಲ.

ಈ ಕುಟುಂಬಗಳು ನೆಲೆಸಿರುವ ಪ್ರದೇಶ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರದಿದ್ದರೂ, ಹಕ್ಕುಪತ್ರದ ವಿಚಾರಕ್ಕೆ ಬಂದಾಗ ಮಾತ್ರ ಮೀಸಲು ಅರಣ್ಯ ಪ್ರದೇಶ ಎನ್ನುವ ಕಾರಣ ನೀಡಿ ವಿಳಂಬ ನೀತಿ ಅನುಸರಿಸುತ್ತಾರೆ ಎನ್ನುವುದು ಊರವರ ಆರೋಪ.

ಜಂಟಿ ಸರ್ವೇಗೆ ಆಗ್ರಹ:

ಇದು ಅರಣ್ಯ ಪ್ರದೇಶದಲ್ಲಿ ಬರುತ್ತದೆಯೋ ಅಥವಾ ಇಲ್ಲವೋ ಎನ್ನುವುದು ಖಚಿತವಾಗಿ ತಿಳಿಯಬೇಕಾದರೆ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿ ಜಂಟಿ ಸರ್ವೇ ನಡೆಸಿದರೆ ತಿಳಿಯಬಹುದು. ಜಂಟಿ ಸರ್ವೇಗೆ ಇಲ್ಲಿನ ನಿವಾಸಿಗರು ಅನೇಕ ಬಾರಿ ಒತ್ತಾಯಿಸಿದರೂ, ಇದಕ್ಕೆ ಮಾತ್ರ ಮುಂದಾಗುತ್ತಿಲ್ಲ. ಈ ಹಿಂದೆ 10 ವರ್ಷಗಳ ಹಿಂದೊಮ್ಮೆ ಸರ್ವೇ ಮಾಡಿದ್ದರೂ, ಅದರ ವರದಿಯೂ ಏನಾಗಿದೆ ಎಂಬುದು ಯಾರಿಗೂ ತಿಳಿದಿಲ್ಲ.

ನಾವು ಪಂಚಾಯತ್‌ನಿಂದ ಅನೇಕ ಬಾರಿ ಸಂಬಂಧಪಟ್ಟ ಶಾಸಕರು, ಜಿಲ್ಲಾಧಿಕಾರಿ, ತಹಶೀಲ್ದಾರ್‌ ಸಹಿತ ಎಲ್ಲರಿಗೂ ಮನವಿ ಕೊಟ್ಟಿದ್ದೇವೆ. ಎಲ್ಲರಿಗೂ ಮನವಿ ಸಲ್ಲಿಸಿದಾಗ, ಸುದ್ದಿಯಾದಾಗ ಒಮ್ಮೆ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನಹರಿಸುತ್ತಾರೆ. ಮಾಡಿಕೊಡುವ ಭರವಸೆ ಕೊಡುತ್ತಾರೆ. ಆದರೆ ಬಳಿಕ ಅಷ್ಟೆ ಬೇಗ ಮರೆತುಬಿಡುತ್ತಾರೆ ಎನ್ನುತ್ತಾರೆ ಮಡಾಮಕ್ಕಿ ಗ್ರಾ.ಪಂ.ನ ಸ್ಥಳೀಯ ಸದಸ್ಯ ಪ್ರತಾಪ್‌ ಶೆಟ್ಟಿ.

ಕೃಷಿ ಪರಿಹಾರ, ಸಾಲಕ್ಕೆ ತೊಂದರೆ :

ಜಾಗದ ಆರ್‌ಟಿಸಿ ಸಿಗದ ಹಿನ್ನೆಲೆಯಲ್ಲಿ ಗದ್ದೆ, ತೆಂಗು, ಅಡಿಕೆ ತೋಟ, ಇನ್ನಿತರ ಕೃಷಿ ಮಾಡಿದ್ದರೂ ಬೆಳೆ ಸಾಲ ಸಹಿತ ಯಾವುದೇ ರೀತಿಯ ಸಾಲ ದೊರಕುತ್ತಿಲ್ಲ. ಗ್ರಾಮ ಪಂಚಾಯತ್‌ನಿಂದ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ಸಕಾಲ ಯೋಜನೆಯಡಿ ಸಿಗುವ ಸವಲತ್ತುಗಳು ಸಹ ಸಿಕ್ಕಿಲ್ಲ. ಕೃಷಿ ಇಲಾಖೆ ಸೌಲಭ್ಯ ಪಡೆಯುವುದೂ ಕಷ್ಟವಾಗಿದೆ. ಪ್ರಾಕೃತಿಕ ವಿಕೋಪದಡಿ ನಷ್ಟ ಉಂಟಾದರೆ ಪರಿಹಾರಕ್ಕೆ ಅರ್ಜಿ ಸಲ್ಲಿಸುವುದಕ್ಕೂ ಸಾಧ್ಯವಾಗುತ್ತಿಲ್ಲ. ಪಶ್ಚಿಮ ಘಟ್ಟದ ತಪ್ಪಲಿನಲ್ಲೇ ಇರುವುದರಿಂದ ಕಾಡು ಪ್ರಾಣಿ ಹಾವಳಿ ಇದ್ದು, ಕೃಷಿ ನಾಶವಾದರೆ ಹಕ್ಕುಪತ್ರವಿಲ್ಲದೆ ಪರಿಹಾರಕ್ಕೂ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಹೊಸ ಮನೆ ಕಟ್ಟುವುದಾದರೆ ಬ್ಯಾಂಕ್‌ ಸಾಲಕ್ಕೂ ಅರ್ಜಿ ಸಲ್ಲಿಸಲು ಆಗದ ಸ್ಥಿತಿ ಈ ಕುಟುಂಬಗಳದ್ದಾಗಿದೆ.

ಸಮಸ್ಯೆಯೇನು?:

ಮನೆ, ಕೃಷಿ ಇದ್ದರೂ ಆ ಜಾಗದ ಆರ್‌ಟಿಸಿಗಾಗಿ ಇಲ್ಲಿರುವ 16 ಕುಟುಂಬಗಳಿದ್ದು, 80-90 ಮಂದಿ ನೆಲೆಸಿದ್ದಾರೆ. ಇವರು ಕಳೆದ 30-40 ವರ್ಷಗಳಿಂದಲೂ ಪ್ರಯತ್ನಿಸುತ್ತಿದ್ದರೂ, ಅನೇಕ ಬಾರಿ ಅರ್ಜಿ ಹಾಕಿದರೂ ಹಕ್ಕುಪತ್ರ ಮಾತ್ರ ಸಿಗದೇ ಅಸಹಾಯಕವಾಗಿವೆ. ಆರ್‌ಟಿಸಿಗೆ ಅರ್ಜಿ ಸಲ್ಲಿಸಿದಾಗ ಕಂದಾಯ ಇಲಾಖೆಯವರು ಅರಣ್ಯ ಇಲಾಖೆಯಿಂದ ನಿರಾಕ್ಷೇ ಪಣ ಪತ್ರ ತನ್ನಿ ಎನ್ನುತ್ತಾರೆ. ಅಲ್ಲಿಗೆ ಹೋದರೆ, ಅವರ ಪ್ರಕಾರ ಇವರಿರುವ ಜಾಗ ಸುರಕ್ಷಿತ ಕಾಡು – ರಕ್ಷಿತಾರಣ್ಯದಲ್ಲಿದೆ ಎನ್ನುತ್ತಾರೆ. ಆದರೆ ಇವರ ಮನೆಗಳಿರುವ ಪ್ರದೇಶ ಅರಣ್ಯ ಪ್ರದೇಶವಲ್ಲ, ಮಧ್ಯೆ- ಮಧ್ಯೆ ಕೃಷಿ ಇರುವ ಕೆಲವು ಪ್ರದೇಶ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುತ್ತದೆ ಎನ್ನುತ್ತಾರೆ ಇಲ್ಲಿನ ನಿವಾಸಿಗರು.

ಸುಮಾರು 35 ವರ್ಷಗಳಿಂದ ನಾವು ಮಡಾಮಕ್ಕಿ ಗ್ರಾಮದ ಎಡ್ಮಲೆ ಪ್ರದೇಶದಲ್ಲಿ ವಾಸವಾಗಿದ್ದು, ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದೇವೆ. ಆದರೆ ಹಲವು ಬಾರಿ ಅರ್ಜಿ ಸಲ್ಲಿಸಿದರೂ ಯಾವುದೇ ರೀತಿಯ ಭೂ ದಾಖಲೆ ಸಿಕ್ಕಿಲ್ಲ. ಕೃಷಿ ಪರಿಹಾರ, ಪಂಚಾಯತ್‌ ಸೌಲಭ್ಯಕ್ಕೂ ಹಕ್ಕುಪತ್ರ ಬೇಕು. ಸರಕಾರದಿಂದ ದೊರೆಯುವ ಸಾಲ ಸೌಲಭ್ಯ, ಸಬ್ಸಿಡಿ, ಕೃಷಿಗೆ ಸಿಗುವ ಪ್ರೋತ್ಸಾಹ ಧನ ಎಲ್ಲದರಿಂದಲೂ ನಮ್ಮ ಪ್ರದೇಶ ವಂಚಿತವಾಗಿದೆ. ಇದರಿಂದ ಜನರು ದಿನಗೂಲಿಯನ್ನು ನಂಬಿಕೊಂಡು ಬದುಕುವ ಪರಿಸ್ಥಿತಿ ಎದುರಾಗಿದೆ.ನವೀನ್‌ ಶೆಟ್ಟಿ, ದೇವರಾಜ್‌  ಶೆಟ್ಟಿಗಾರ್‌ ಎಡ್ಮಲೆ, ಗ್ರಾಮಸ್ಥರು 

ಮಡಾಮಕ್ಕಿ ಗ್ರಾಮದ ಎಡ್ಮಲೆ ಗ್ರಾಮಸ್ಥರಿಗೆ ಹಕ್ಕುಪತ್ರ ಸಿಗದಿರುವ ಬಗ್ಗೆ ಅವರು ಈ ಬಗ್ಗೆ ಕೂಡಲೇ ಲಿಖೀತ ಮನವಿಯನ್ನು ನೀಡಲಿ. ಶೀಘ್ರ ಈ ಬಗ್ಗೆ ಪರಿಶೀಲನೆ ನಡೆಸಿ, ಕ್ರಮಕೈಗೊಳ್ಳಲಾಗುವುದು. ಜಂಟಿ ಸರ್ವೇ ಬಗ್ಗೆಯೂ ಗಮನಹರಿಸಲಾಗುವುದು. ಕೆ. ಪುರಂದರ, ಹೆಬ್ರಿ ತಹಶೀಲ್ದಾರ್‌ 

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Chikkaballapura: Walk in Chikkaballapura on World Peace Day

Chikkaballapura: ವಿಶ್ವ ಶಾಂತಿ ದಿನದ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ನಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.