ಕರಾವಳಿಯಾದ್ಯಂತ ಭಕ್ತಿ ಸಂಭ್ರಮದ ಗೋಪೂಜೆ

ಉಡುಪಿ: ವಿವಿಧೆಡೆ ಗೋಪೂಜೆ ಸಂಪನ್ನ

Team Udayavani, Nov 7, 2021, 4:15 AM IST

ಕರಾವಳಿಯಾದ್ಯಂತ ಭಕ್ತಿ ಸಂಭ್ರಮದ ಗೋಪೂಜೆ

ಉಡುಪಿ/ ಮಂಗಳೂರು: ಶ್ರೀಕೃಷ್ಣಮಠ ಸಹಿತ ವಿವಿಧ ಮಠಗಳು, ಧಾರ್ಮಿಕ ದತ್ತಿ ಇಲಾಖೆಯ ಅಧೀನದ ನೂರಾರು ದೇವಸ್ಥಾನಗಳು ಮತ್ತು ಖಾಸಗಿ ಆಡಳಿತದ ದೇವಸ್ಥಾನಗಳಲ್ಲಿ ಶುಕ್ರವಾರ ಗೋಪೂಜೆಯನ್ನು ನಡೆಸಲಾಯಿತು.

ಶ್ರೀಕೃಷ್ಣಮಠದ ಕನಕನ ಕಿಂಡಿ ಎದುರು ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಉಭಯ ಶ್ರೀಗಳು, ಪೇಜಾವರ ಶ್ರೀಗಳು ಗೋಪೂಜೆ ನಡೆಸಿದರು.

ಕೊಲ್ಲೂರು, ಮಂದಾರ್ತಿ ಸಹಿತ ಜಿಲ್ಲೆಯ ಎ ಶ್ರೇಣಿಯ 23 ದೇವಸ್ಥಾನಗಳು, ಬಿ ಶ್ರೇಣಿಯ 19 ಮತ್ತು 866 ಸಿ ಶ್ರೇಣಿಯ ದೇವಸ್ಥಾನ ಗಳಲ್ಲಿ ಗೋಪೂಜೆ ನಡೆಸಬೇಕೆಂದು ಜಿಲ್ಲಾಡಳಿತ ನೀಡಿದ ಸೂಚನೆ ಮೇರೆಗೆ ವಿವಿಧ ದೇವಸ್ಥಾನಗಳಲ್ಲಿ ಗೋಪೂಜೆ ನಡೆಯಿತು. ಅಧಿಸೂ ಚಿತ ವಲ್ಲದ ಖಾಸಗಿ ಆಡಳಿತದ ಆನೆಗುಡ್ಡೆ, ಸಾಲಿಗ್ರಾಮ, ವಿವಿಧೆಡೆ ಗಳಲ್ಲಿರುವ ವೆಂಕಟರಮಣ ದೇವಸ್ಥಾನ ಗಳಲ್ಲಿಯೂ ಗೋಪೂಜೆ ಸಂಪನ್ನ ಗೊಂಡಿತು. ಮನೆಗಳಲ್ಲಿಯೂ ಗೋಪೂಜೆ ನಡೆಯಿತು.

ಗುರುವಾರ ರಾತ್ರಿ ವಿವಿಧೆಡೆ ಬಲೀಂದ್ರ ಪೂಜೆ ನಡೆಯಿತು. ಕೃಷಿಕರು ಗದ್ದೆಗಳಲ್ಲಿ ದೀಪಗಳನ್ನಿರಿಸಿ ಬಲೀಂದ್ರನನ್ನು ಗ್ರಾಮೀಣ ಶೈಲಿಯಲ್ಲಿ ಕರೆದು ಪೂಜೆ ಸಲ್ಲಿಸಿದರು.

ತುಳಸೀ ಸಂಕೀರ್ತನೆ
ಶ್ರೀಕೃಷ್ಣಮಠದಲ್ಲಿ ಉತ್ಥಾನ ದ್ವಾದಶಿಯವರೆಗೆ (ನ. 16) ನಡೆಯುವ ತುಳಸೀ ಪೂಜೆ, ಸಂಕೀರ್ತನೆ ಶುಕ್ರವಾರ ಆರಂಭ ಗೊಂಡಿತು. ಪ್ರತಿನಿತ್ಯ ರಾತ್ರಿ ಪೂಜೆ ಬಳಿಕ ವಾದಿರಾಜಸ್ವಾಮಿಗಳ ಸಂಕೀರ್ತನೆಗಳನ್ನು ಹಾಡಿ ತುಳಸೀ ಪೂಜೆಯನ್ನು ನಡೆಸಲಾಗುತ್ತದೆ.

ಇದನ್ನೂ ಓದಿ:2026ರಲ್ಲಿ ಚಂದ್ರನಲ್ಲಿ ರೋವರ್‌; ಆಸ್ಟ್ರೇಲಿಯಾ ಬಾಹ್ಯಾಕಾಶ ಸಂಸ್ಥೆ, ನಾಸಾದಿಂದ ಹೊಸ ಯೋಜನೆ

ಪಟಾಕಿ: ಕಣ್ಣಿಗೆ ಗಾಯ
ಉಡುಪಿ: ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಆಚರಣೆ ವೇಳೆ ಪಟಾಕಿ ಸಿಡಿದು ಮೂವರು ಮಕ್ಕಳು ಸೇರಿದಂತೆ ಐದು ಮಂದಿಯ ಕಣ್ಣಿಗೆ ಗಾಯವಾಗಿರುವ ಬಗ್ಗೆ ವರದಿಯಾಗಿದೆ.

3 ಸೆಂಟ್ಸ್‌ನಲ್ಲಿ 60 ದೇಸೀ ಗೋವು
ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕೆ.ರಘುಪತಿ ಭಟ್‌ ಅವರು ದೊಡ್ಡಣಗುಡ್ಡೆಯ ಕಮಲಮ್ಮನವರು ಕೇವಲ 3 ಸೆಂಟ್ಸ್‌ ಜಾಗದಲ್ಲಿ ಸಾಕುತ್ತಿರುವ 60 ದನಗಳ ದೇಸೀ ಗೋಶಾಲೆಯಲ್ಲಿ ಪೂಜೆ ಸಲ್ಲಿಸಿದರು.

ಮಂಗಳೂರು: ದೀಪಾವಳಿ ಹಬ್ಬದ ಮೂರನೇ ದಿನವಾದ ಶುಕ್ರವಾರ ಕರಾವಳಿಯಾದ್ಯಂತ ಗೋಪೂಜೆಯನ್ನು ಭಕ್ತಿ ಸಂಭ್ರಮದಿಂದ ನೆರವೇರಿಸಲಾಯಿತು.

ಮುಜರಾಯಿ ಇಲಾಖೆಯ ಎಲ್ಲ ದೇವಾಲಯಗಳಲ್ಲಿ ಈ ಬಾರಿ ಗೋಪೂಜೆ ನಡೆಸುವಂತೆ ರಾಜ್ಯ ಸರಕಾರ ಸೂಚನೆ ಹೊರಡಿಸಿದ್ದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿರುವ ಪ್ರಮುಖ ದೇವಾಲಯಗಳು ಸೇರಿದಂತೆ ಎಲ್ಲ ಮುಜರಾಯಿ ದೇವಸ್ಥಾನಗಳು ಹಾಗೂ ಇತರ ಪ್ರಮುಖ ಕ್ಷೇತ್ರಗಳಲ್ಲಿ ಗೋಪೂಜೆ ನೆರವೇರಿತು. ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸಚಿವ ಎಸ್‌. ಅಂಗಾರ ಅವರು ಗೋಪೂಜೆ ನೆರವೇರಿಸಿದರು.

ಜಿಲ್ಲೆಯಲ್ಲಿರುವ ಗೋಶಾಲೆಗಳಲ್ಲಿ ಗೋಪೂಜೆಯು ಭಕ್ತಿ ಸಡಗರದಿಂದ ನಡೆಯಿತು. ವಿವಿಧ ಸಂಘಟನೆಗಳಿಂದಲೂ ಜಿಲ್ಲೆಯ ವಿವಿಧೆಡೆ ಸಾರ್ವಜನಿಕ ಗೋಪೂಜೆ ನೆರವೆೇರಿತು. ಮನೆಗಳಲ್ಲಿ ಗೋವುಗಳಿಗೆ ಸ್ನಾನ ಮಾಡಿಸಿ ಶೃಂಗರಿಸಿ ಹೂವಿನ ಹಾರಹಾಕಿ ಆರತಿ ಬೆಳಗಿ ನಮಿಸಿದರು.

ಶುಕ್ರವಾರ ಬಲಿಪಾಡ್ಯ ಆಚರಣೆ ಜರಗಿತು. ಕೆಲವು ಕಡೆಗಳಲ್ಲಿ ಲಕ್ಷ್ಮಿ ಪೂಜೆ ನಡೆಯಿತು. ದೀಪಾವಳಿ ಸಂದರ್ಭದಲ್ಲೂ ವಾಹನ ಪೂಜೆ ಮಾಡುವ ಸಂಪ್ರದಾಯ ಅನುಸರಿಸಿಕೊಂಡು ಬರುತ್ತಿರುವವರು ವಾಹನಗಳಿಗೆ ಪೂಜೆ ಮಾಡಿಸಿದರು.

ಈ ಬಾರಿ ಕೊರೊನಾ ನಿರ್ಬಂಧಗಳು ಬಹುತೇಕ ಸಡಿಲಗೊಂಡಿರುವ ಹಿನ್ನಲೆಯಲ್ಲಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಂಭ್ರಮ ಜೋರಾಗಿತ್ತು. ಮನೆಮಂದಿ ಮಕ್ಕಳ ಜತೆಗೆ. ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.