ಅಪೂರ್ಣ ಕಾಮಗಾರಿ ಹಸ್ತಾಂತರ-ದೂರು


Team Udayavani, Nov 7, 2021, 10:35 AM IST

7transfer

ಚಿಂಚೋಳಿ: ನಗರೋತ್ಥಾನ ಯೋಜನೆಯಡಿ ಕೈಗೊಂಡಿರುವ ನೀರು ಸರಬರಾಜು ಯೋಜನೆ ಕಾಮಗಾರಿ ಅಪೂರ್ಣವಾಗಿದ್ದರೂ ಪುರಸಭೆಗೆ ಹಸ್ತಾಂತರಿಸಿಕೊಂಡಿದ್ದರ ಕುರಿತು ತನಿಖೆ ನಡೆಸಬೇಕು ಎಂದು ಪುರಸಭೆ ಉಪಾಧ್ಯಕ್ಷ ಸೈಯದ್‌ ಶಬ್ಬೀರ್‌ ಅಹಮೆದ್‌ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದ ವಿವಿಧ ವಾರ್ಡ್ ಗಳಿಗೆ ನಳಗಳ ಮೂಲಕ ನೀರು ಪೂರೈಸಲು ಪುರಸಭೆಯ ನಗರೋತ್ಥಾನ ಯೋಜನೆ ಅಡಿಯಲ್ಲಿ 5.50 ಕೋಟಿ ರೂ. ನೀಡಲಾಗಿದೆ. ಕೆಲವು ವಾರ್ಡುಗಳಲ್ಲಿ ಸ್ವಲ್ಪಮಟ್ಟಿಗೆ ಕೆಲಸ ಮಾಡಲಾಗಿದೆ. ಇನ್ನಿತರ ವಾರ್ಡುಗಳಲ್ಲಿ ಇನ್ನು ಕೆಲಸ ಬಾಕಿಯಿದೆ. ಈ ಯೋಜನೆಯಡಿ ಯಾರ ಮನೆಗೂ ಇನ್ನೂ ನೀರು ಬಂದಿಲ್ಲ ಎಂದು ಆಪಾದಿಸಿದರು.

ಪುರಸಭೆ ಅಧ್ಯಕ್ಷೆ ಜಗದೇವಿ ಗಡಂತಿ, ಮುಖ್ಯಾಧಿಕಾರಿ ಚಂದ್ರಕಾಂತ ಪಾಟೀಲ, ಇಂಜಿನಿಯರ್‌ ದೇವೇಂದ್ರಪ್ಪ ಕೋರವಾರ ಕಾಮಗಾರಿ ಪೂರ್ಣವಾಗಿದೆ ಎಂದು ಸುಳ್ಳೂ ವರದಿ ನೀಡಿ ಕಳದೆ ಸೆ. 23ರಂದು ಕಾಮಗಾರಿಯನ್ನು ಪುರಸಭೆಗೆ ಹಸ್ತಾಂತರ ಮಾಡಿಕೊಂಡಿದ್ದಾರೆ. ಈ ಕುರಿತು ಎಲ್ಲ ಸದಸ್ಯರ ಗಮನಕ್ಕೆ ತರಬೇಕೆಂದು ಇದಕ್ಕೂ ಮುನ್ನ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಆದರೆ ಎಲ್ಲ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ದೂರಿದರು.

ಪುರಸಭೆ ಸದಸ್ಯ ಸೈಯದ್‌ ಅನವರ ಖತೀಬ್‌ ಮಾತನಾಡಿ, ಪುರಸಭೆಯಲ್ಲಿ ಕಾಮಗಾರಿಗಳ ಬಗ್ಗೆ ಮೂರನೇ ತಂಡದಿಂದ ಪರಿಶೀಲನೆಯೂ ನಡೆಯುತ್ತಿಲ್ಲ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಹಾಗೂ ಯೋಜನಾಭಿವೃದ್ಧಿ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಹೇಳಿದರು.

ಪುರಸಭೆ ಸದಸ್ಯ ಆನಂದ ಟೈಗರ್‌ ಮಾತನಾಡಿ, ಪುರಸಭೆ ಇತಿಹಾಸದಲ್ಲಿಯೇ 5.50ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ಮೊದಲ ಕಾಮಗಾರಿ ಇದಾಗಿದೆ. ಸುಳ್ಳು ಮಾಹಿತಿ ನೀಡಿ ಜನರನ್ನು ವಂಚಿಸಲಾಗಿದೆ. ಚಂದಾಪುರ ಶುದ್ಧೀಕರಣ ಘಟಕ ದುರಸ್ತಿಗಾಗಿ 2.82 ಲಕ್ಷ ರೂ. ಬಿಲ್ಲು ತೋರಿಸಲಾಗಿದೆ. ಈ ಕುರಿತು ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದರು.

ಬಿಜೆಪಿ ಪುರಸಭೆ ಸದಸ್ಯ ಶಿವಕುಮಾರ ಪೋಚಾಲಿ, ಬಿಎಸ್ಪಿ ಸದಸ್ಯ ಸುಶೀಲಕುಮಾರ ಬೊಮ್ಮನಳ್ಳಿ, ಬಸವರಾಜ ಶಿರಸಿ, ಕಾಂಗ್ರೆಸ್‌ ಮುಖಂಡರಾದ ಗೋಪಾಲರಾವ್‌ ಕಟ್ಟಿಮನಿ, ಖಲೀಲ ಅಹಮೆದ್‌, ಮಹಮ್ಮದ ಹಾದಿ ಇನ್ನಿತರರಿದ್ದರು.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.