ದಾಂಡೇಲಿ: ದೇವಸ್ಥಾನದ ಹುಂಡಿ ಕಳ್ಳತನಕ್ಕೆ ಯತ್ನ
Team Udayavani, Nov 7, 2021, 2:49 PM IST
ದಾಂಡೇಲಿ: ಶನಿವಾರ ಮುಂಜಾನೆ ನಗರದ ಕೆಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಗಣಪತಿ ದೇವಸ್ಥಾನದಲ್ಲಿನ ಹುಂಡಿಯನ್ನು ಕಳ್ಳತನ ಮಾಡಲು ಕಳ್ಳ ವಿಫಲ ಯತ್ನ ಘಟನೆ ನಡೆದಿದೆ.
ಮುಂಜಾನೆ ಎಂದಿನಂತೆ ದೇವಸ್ಥಾನದಲ್ಲಿ ಸ್ವಚ್ಚತೆ ಮಾಡುವಾಗ ಹುಂಡಿ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅತ್ತ ಇತ್ತ ಹುಡುಕಿ ನೋಡಿದಾಗ ದೇವಸ್ಥಾನದಲ್ಲಿನ ಕಾಣಿಕೆ ಹುಂಡಿಯು ದೇವಸ್ಥಾನದ ಹಿಂಬದಿಯ ಕಂಪೌಂಡ್ ಆಚೆಯ ಗಿಡಗಂಟಿಗಳಲ್ಲಿ ಮುಚ್ಚಿಟ್ಟಿರುವುದು ಕಂಡು ಬಂದಿದೆ. ಸ್ಥಳೀಯರು ದಾಂಡೇಲಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಚೆನ್ನೈನಲ್ಲಿ ಭಾರೀ ಮಳೆ, ಪ್ರವಾಹದ ಎಚ್ಚರಿಕೆ : ಜನಜೀವನ ಅಸ್ತವ್ಯಸ್ತ
ತನಿಖಾ ವಿಭಾಗದ ಪಿಎಸೈ ಕಿರಣ ಪಾಟೀಲ ಮತ್ತು ಪೊಲೀಸ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯ ಕುರಿತು ಸಿಸಿ ಟಿವಿಯ ಫೂಟೇಜ್ ಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪಿಎಸೈ ಕಿರಣ ಪಾಟೀಲ್ ಅವರು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.