![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 8, 2021, 12:24 PM IST
ಮುಂಬೈ: ಐಸಿಸಿ ಟಿ20 ವಿಶ್ವಕಪ್ 2021ರಲ್ಲಿ ಭಾರತದ ಅಭಿಯಾನ ಅಂತ್ಯವಾಗಿದೆ. ಇಂದು ನಮೀಬಿಯಾ ವಿರುದ್ಧ ಪಂದ್ಯವಿದ್ದರೂ ಅದು ಔಪಚಾರಿಕವಷ್ಟೇ. ಕೂಟದ ಮೊದಲೆರಡು ಪಂದ್ಯಗಳಲ್ಲೇ ಸೋಲುಂಡ ಭಾರತ ನಂತರದ ಪಂದ್ಯಗಳನ್ನು ಗೆದ್ದರೂ ಸೆಮಿ ಫೈನಲ್ ರೇಸ್ ನಿಂದ ಹೊರಬಿದ್ದಿದೆ.
ಭಾರತದ ತಂಡದ ಟಿ20 ವಿಶ್ವಕಪ್ ಸೋಲಿನ ಬಗ್ಗೆ ಮಾಜಿ ನಾಯಕ ಕಪಿಲ್ ದೇವ್ ಮಾತನಾಡಿದ್ದಾರೆ. ಕೆಲವು ಆಟಗಾರರು ರಾಷ್ಟ್ರೀಯ ತಂಡದಲ್ಲಿ ಆಡುವುದಕ್ಕಿಂತ ಇಂಡಿಯನ್ ಪ್ರೀಮಿಯರ್ ಲೀಗ್ ಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ ಎಂದು ಹೇಳಿದರು. ಅದಲ್ಲದೆ ಅವರು ಭಾರತೀಯ ಕ್ರಿಕೆಟ್ನ ವೇಳಾಪಟ್ಟಿಯನ್ನು ಉತ್ತಮವಾಗಿ ಯೋಜಿಸುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯನ್ನು (ಬಿಸಿಸಿಐ) ಒತ್ತಾಯಿಸಿದರು.
ಐಪಿಎಲ್ 2021 ರ ಎರಡನೇ ಹಂತದ ನಂತರ ಟಿ20 ವಿಶ್ವಕಪ್ಗೆ ತೆರಳುವ ಮೊದಲು ಭಾರತದ ಆಟಗಾರರು ವಿಶ್ರಾಂತಿ ಪಡೆಯಬೇಕಿತ್ತು ಎಂದು ಕಪಿಲ್ ದೇವ್ ಹೇಳಿದರು.
ಇದನ್ನೂ ಓದಿ:ಕ್ರಿಸ್ ಗೇಲ್ ರ ಆರು ವರ್ಷಗಳ ಹಿಂದಿನ ದಾಖಲೆ ಮುರಿದ ಮೊಹಮ್ಮದ್ ರಿಜ್ವಾನ್
“ಆಟಗಾರರು ದೇಶಕ್ಕಾಗಿ ಆಡುವುದಕ್ಕಿಂತ ಐಪಿಎಲ್ಗೆ ಆದ್ಯತೆ ನೀಡಿದರೆ ನಾವು ಏನು ಹೇಳಬಲ್ಲೆವು. ಆಟಗಾರರು ತಮ್ಮ ರಾಷ್ಟ್ರಕ್ಕಾಗಿ ಆಡುವುದರಲ್ಲಿ ಹೆಮ್ಮೆ ಪಡಬೇಕು. ಅವರ ಆರ್ಥಿಕ ಪರಿಸ್ಥಿತಿಗಳು ನನಗೆ ತಿಳಿದಿಲ್ಲ, ಆದ್ದರಿಂದ ಹೆಚ್ಚು ಹೇಳಲು ಸಾಧ್ಯವಿಲ್ಲ” ಎಂದು ಕಪಿಲ್ ದೇವ್ ಎಬಿಪಿ ನ್ಯೂಸ್ಗೆ ತಿಳಿಸಿದರು.
“ಆದರೆ ಮೊದಲ ಆದ್ಯತೆಯಾಗಿ ದೇಶದ ತಂಡ, ನಂತರ ಫ್ರಾಂಚೈಸಿಗಳು ಇರಬೇಕು ಎಂದು ನಾನು ಭಾವಿಸುತ್ತೇನೆ. ಅಲ್ಲಿ (ಐಪಿಎಲ್) ಕ್ರಿಕೆಟ್ ಆಡಬೇಡಿ ಎಂದು ನಾನು ಹೇಳುತ್ತಿಲ್ಲ, ಆದರೆ ಅದರ ಕ್ರಿಕೆಟ್ ಅನ್ನು ಉತ್ತಮವಾಗಿ ಯೋಜಿಸುವ ಜವಾಬ್ದಾರಿ ಈಗ ಬಿಸಿಸಿಐ ಮೇಲಿದೆ. ಈ ಪಂದ್ಯಾವಳಿಯಲ್ಲಿ ಮಾಡಿದ ತಪ್ಪುಗಳನ್ನು ಪುನರಾವರ್ತಿಸದಿರಲು ನಾವು ಬದ್ಧತೆ ಪ್ರದರ್ಶಿಸಬೇಕಿದೆ” ಎಂದು ಅವರು ಹೇಳಿದರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.