“ಮಹಾತ್ಮರ ಚರಿತಾಮೃತ’ ಗ್ರಂಥ ಲೋಕಾರ್ಪಣೆ

ಯಾವುದೇ ಕಲ್ಪಕತೆ, ವೈಭವೀಕರಣ ಇಲ್ಲದ ನಿರ್ಲಿಪ್ತ ಭಾವವನ್ನು ಈ ಗ್ರಂಥ ಒಳಗೊಂಡಿದೆ.

Team Udayavani, Nov 8, 2021, 5:53 PM IST

“ಮಹಾತ್ಮರ ಚರಿತಾಮೃತ’ ಗ್ರಂಥ ಲೋಕಾರ್ಪಣೆ

ಧಾರವಾಡ: ಮಹಾತ್ಮರ ಚರಿತಾಮೃತ ಗ್ರಂಥದ ರಚನೆಗಾಗಿ ಮಾಡಿದ ಅಧ್ಯಯನ ವ್ಯಾಪ್ತಿ ದೊಡ್ಡದಾಗಿದ್ದು, ಈ ಗ್ರಂಥವು ಸಾರ್ಥಕತೆಯ ಬದುಕಿಗೆ ದಾರಿದೀಪವಾಗಿದೆ ಎಂದು ಹಿರಿಯ ಸಾಹಿತಿ ಡಾ| ಗುರುಲಿಂಗ ಕಾಪಸೆ ಹೇಳಿದರು. ಧಾರವಾಡ ನಾಗರಿಕ ವೇದಿಕೆ ವತಿಯಿಂದ
ಕವಿಸಂನಲ್ಲಿ ರವಿವಾರ ಹಮ್ಮಿಕೊಂಡಿದ್ದ ಅಥಣಿ ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಚಿಂತನೆ ಜತೆಗೆ ಕ್ರಿಯಾಶೀಲತೆ ಮುಖ್ಯವಾಗಿದ್ದು, ಚಿಂತನೆಯನ್ನು ಕಾರ್ಯರೂಪಕ್ಕೆ ತರಲು ಕ್ರಿಯಾಶೀಲತೆ ಬೇಕು. ಪ್ರತಿಯೊಬ್ಬ ಮನುಷ್ಯನಲ್ಲಿ ಒಳಧ್ವನಿ ಇರುತ್ತದೆ. ಯಾರು ಒಳಧ್ವನಿಗೆ ಕಿವಿಗೊಡುತ್ತಾರೆ ಅವರು ಜೀವನದ ಅರ್ಥ ಪಡೆಯುತ್ತಾರೆ. ಅಂತಹ ಕೆಲಸವನ್ನು ಅಥಣಿ ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮೀಜಿ “ಮಹಾತ್ಮರ ಚರಿತಾಮೃತ’ ಗ್ರಂಥ ರಚಿಸುವ ಮೂಲಕ ಮಾಡಿದ್ದಾರೆ. ಈ ಗ್ರಂಥ ರಚನೆಯಲ್ಲಿ ಸ್ವಾಮೀಜಿ ಅವರು ಮಾಡಿದ ಅಧ್ಯಯನ ವ್ಯಾಪ್ತಿ ದೊಡ್ಡದು. ಮಹಾತ್ಮರ ಚರಿತ್ರೆಯನ್ನು ನಮ್ಮ ಮುಂದೆ ಇಟ್ಟು ಸಾಮಾನ್ಯರೂ ಮಹಾತ್ಮರಾಗಬಹುದು ಎಂಬುದನ್ನು ಶ್ರೀಗಳು ಗ್ರಂಥದಲ್ಲಿ ಹೇಳಿದ್ದಾರೆ. ದೇಶದ ಬೇರೆ ಭಾಷೆಗಳಲ್ಲಿ ಇಂತಹ ಗ್ರಂಥ ಎಲ್ಲಿಯೂ ಇಲ್ಲ ಎಂದರು.

ಸಾನ್ನಿಧ್ಯ ವಹಿಸಿದ್ದ ಡಂಬಳ ಗದಗ ತೋಂಟದಾರ್ಯ ಮಠದ ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ಜೀವಪರ ಕಾಳಜಿಯುಳ್ಳ ವ್ಯಕ್ತಿಗಳನ್ನು ಈ ಗ್ರಂಥದಲ್ಲಿ ತಿಳಿಸಿದ್ದಾರೆ. ಕೃತಿ ಓದಿದಾಗ ಉತ್ತಮ ಪ್ರೇರಣೆ ದೊರೆಯುತ್ತದೆ. ನಮ್ಮ ಬದುಕನ್ನು ಸಾರ್ಥಕಗೊಳಿಸಲು ಈ ಕೃತಿ ಓದಬೇಕು ಎಂದರು.

ಗ್ರಂಥ ಪರಿಚಯಿಸಿದ ಸಾಹಿತಿ ಡಾ| ವೀರಣ್ಣ ರಾಜೂರ, ಅರಿವಿಗೆ ಯಾವುದೇ ಜಾತಿ ಇಲ್ಲ ಎಂಬುದನ್ನು ನಾವು ಈ ಗ್ರಂಥದಲ್ಲಿ ಕಾಣಬಹುದು. ಯಾವುದೇ ಕಲ್ಪಕತೆ, ವೈಭವೀಕರಣ ಇಲ್ಲದ ನಿರ್ಲಿಪ್ತ ಭಾವವನ್ನು ಈ ಗ್ರಂಥ ಒಳಗೊಂಡಿದೆ. 216 ಮಹಾತ್ಮರಲ್ಲಿ 9 ಮಹಿಳೆಯರು, 107 ಮಹಾಪುರುಷರ ವಿಷಯಗಳು ಇಲ್ಲಿ ಅಡಕವಾಗಿವೆ. ಹೆಚ್ಚಾಗಿ ಈ ಕೃತಿ ಶಿವಯೋಗಿಗಳ ವಿಷಯವನ್ನೊಳಗೊಂಡಿದೆ. ಶರಣ ಸಾಹಿತ್ಯವನ್ನು ಬಹು ಅಧ್ಯಯನ ಮಾಡಿ ರೂಪುಗೊಂಡ ಅಮೂಲ್ಯವಾದ ಹೊತ್ತಿಗೆ ಇದಾಗಿದೆ ಎಂದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಪ್ರಭುಚನ್ನಬಸವ ಸ್ವಾಮೀಜಿ ಅವರ ಕಾರ್ಯ ಶ್ಲಾಘನೀಯ ಎಂದರು. ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿದರು. ಮಹಾತ್ಮರ ಚರಿತಾಮೃತ ದಾಸೋಹಿಗಳಾದ ಚಂದ್ರಕಾಂತ ಬೆಲ್ಲದ, ಬಿ.ಎಲ್‌. ಪಾಟೀಲ, ಶಂಕರ ಕೋಳಿವಾಡ ಅವರನ್ನು ಸನ್ಮಾನಿಸಲಾಯಿತು. ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮೀಜಿ, ಪ್ರಕಾಶ ಉಡಿಕೇರಿ, ಶಂಕರ ಕುಂಬಿ, ಶಂಕರ ಹಲಗತ್ತಿ, ಶಿವಣ್ಣ ಬೆಲ್ಲದ, ಸತೀಶ ತುರಮರಿ, ಶಿವಾನಂದ ಭಾವಿಕಟ್ಟಿ, ಸದಾನಂದ ಶಿವಳ್ಳಿ, ನಿಂಗಣ್ಣ ಕುಂಟಿ ಇದ್ದರು. ಇದಕ್ಕೂ ಮುನ್ನ ಕಡಪಾ ಮೈದಾನದಿಂದ ಕವಿಸಂವರೆಗೆ “ಮಹಾತ್ಮರ ಚರಿತಾಮೃತ’ ಗ್ರಂಥದ ಪಲ್ಲಕ್ಕಿ ಉತ್ಸವ ಮಾಡಲಾಯಿತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.