ಅಪ್ಪು ಅಮರಶ್ರೀ : ಪುನೀತ್‌ ‘ಪದ್ಮಶ್ರೀ’ ಬಗ್ಗೆ ಶಿವಣ್ಣ ಮಾತು


Team Udayavani, Nov 9, 2021, 8:43 AM IST

jhjkjhgfds

“ಅಮರಶ್ರೀಗೆ ಪದ್ಮಶ್ರೀನಾ? – ಶಿವರಾಜ್‌ಕುಮಾರ್‌ ಹೀಗೆ ಹೇಳಿ ಒಂದು ಕ್ಷಣ ಮೌನವಾದರು. ತಮ್ಮನ ಅಗಲಿಕೆಯ ನೋವು ಅವರ ಮುಖದಲ್ಲಿ ಎದ್ದು ಕಾಣುತ್ತಿತ್ತು. ಎಷ್ಟೇ ನೋವಿದ್ದರೂ ಅಣ್ಣನಾಗಿ ತಮ್ಮನ ಕಾರ್ಯಗಳನ್ನು ಮುಂದೆ ನಿಂತು ಮಾಡುವ ಅನಿವಾರ್ಯತೆ. ಇದೇ ಸಂದರ್ಭದಲ್ಲಿ ಅಭಿಮಾನಿಗಳಿಂದ ಕೇಳಿಬರುತ್ತಿರುವ ಒತ್ತಾಯವೆಂದರೆ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಪದ್ಮಶ್ರೀ ನೀಡಬೇಕೆಂಬುದು.

ಈ ಬಗ್ಗೆ ಮಾತನಾಡುವ ಶಿವರಾಜ್‌ಕುಮಾರ್‌, “ನನ್ನ ತಮ್ಮ ಅಮರಶ್ರೀ. ಎಲ್ಲರ ಹೃದಯದಲ್ಲಿ ಪ್ರೀತಿಯಿಂದ ಇರುತ್ತಾನೆ. ಅದೇ ದೊಡ್ಡ ಪ್ರಶಸ್ತಿ. ಅದೇ ಪದ್ಮಶ್ರೀಗಿಂತ ದೊಡ್ಡದು’ ಎನ್ನುವುದು ಶಿವರಾಜ್‌ ಕುಮಾರ್‌ ಮಾತು. ಪುನೀತ್‌ ರಾಜ್‌ ಕುಮಾರ್‌ ಅವರ 11ನೇ ದಿನದ ಕಾರ್ಯದ ಬಗ್ಗೆ ಮಾತನಾಡಿದ ಶಿವಣ್ಣ, “ನಾವು ಇದನ್ನೆಲ್ಲಾ ಪುನೀತ್‌ಗೆ ಮಾಡುತ್ತಿದ್ದೇವಾ ಎಂದು ಫೀಲ್‌ ಆಗುತ್ತದೆ. ಆದರೆ, ವಿಧಿ ವಿಧಾನ ಮಾಡಲೇಬೇಕು. ಪುನೀತ್‌ ಇಲ್ಲ ಎಂಬ ನೋವು ನನಗೆ ಸದಾ ಕಾಡುತ್ತಿರುತ್ತದೆ.

ತಮ್ಮ ಅನ್ನೋದಕ್ಕಿಂತ ಮಗನೇ ಹೋದಂತಹ ನೋವು ಆಗುತ್ತಿದೆ. ಆ ನೋವಿನಿಂದ ಹೊರಬರಲು ಸಾಧ್ಯವೇ ಇಲ್ಲ. ಚಿಕ್ಕ ವಯಸ್ಸಿನಿಂದಲೂ ನಾವು ಅವನನ್ನು ಆರಾಧಿಸಿದ್ದೇವೆ. ಅವನ ಬೆಳವಣಿಗೆ ನೋಡಿ ಖುಷಿಪಟ್ಟಿದ್ದೇವೆ. ನಮಗೆ ಇಷ್ಟೊಂದು ನೋವಾಗಿದೆ ಎಂದ ಮೇಲೆ ಅವನನ್ನು ಪ್ರೀತಿಸುವ ಅಭಿಮಾನಿಗಳಿಗೆ ಎಷ್ಟು ನೋವಾಗಬೇಡ ಹೇಳಿ. ಹಾಗಂತ ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬರಬಾರದು.

ಅವನು ಸಂತೋಷವಾಗಿ ಇರಬೇಕೆಂದರೆ ಅಭಿಮಾನಿ ಗಳು ಈ ರೀತಿ ನಡೆದುಕೊಳ್ಳಬಾರದು. ಅಪ್ಪು ಹೆಸರನ್ನು ಇನ್ನೂ ಅಮರವಾಗಿಸಲು ಪ್ರಯತ್ನಿಸಿ. ನಿಮ್ಮ ಕೈಲಾದಷ್ಟು ಸಹಾಯ ಮಾಡಿ. ಅಪ್ಪು ಮಾಡುತ್ತಿದ್ದ ಕಾರ್ಯಗಳನ್ನು ಮುಂದುವರಿಸಿ’ ಎಂದು ಅಭಿಮಾನಿಗಳಿಗೆ ಕಿವಿಮಾತು ಹೇಳಿದರು. ಇದೇ ವೇಳೆ ಮಾತನಾಡಿದ ಶಿವಣ್ಣ, ಪುನೀತ್‌ಗೆ ಜನ ತೋರಿಸುತ್ತಿರುವ ಪ್ರೀತಿಗೆ ಬೆಲೆ ಕಟ್ಟೋಕೆ ಆಗಲ್ಲ.

ಇದು ಅವನ ವ್ಯಕ್ತಿತ್ವವನ್ನು ಕಟ್ಟಿಕೊಡುತ್ತದೆ. ನಾವು ಮೂವರು ಸಹೋದರರು ಒಟ್ಟಿಗೆ ಸಿನಿಮಾ ಮಾಡುವ ಕನಸಿತ್ತು. ಇತ್ತೀಚೆಗೆ ನಡೆದ “ಸಲಗ’ ಇವೆಂಟ್‌ ನಲ್ಲೂ ಅಣ್ಣನ ಸಿನಿಮಾ ನಿರ್ದೇಶನ ಮಾಡಬೇಕೆಂಬ ಆಸೆ ತೋಡಿಕೊಂಡಿದ್ದ ಅಪ್ಪು. ಆದರೆ, ಅದು ಈಡೇರಲೇ ಇಲ್ಲ’ ಎಂದು ಭಾವುಕರಾದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.