ಮಹಿಳಾ ವಿವಿಯಿಂದ ಶಿಷ್ಟಾಚಾರ ಉಲ್ಲಂಘನೆ : ಹರಿಹಾಯ್ದ ಸಂಸದ ಜಿಗಜಿಣಗಿ


Team Udayavani, Nov 9, 2021, 4:51 PM IST

jigajinagi

ವಿಜಯಪುರ: ರಾಜ್ಯಪಾಲರು ಪಾಲ್ಗೊಂಡ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದ ಕುರಿತು ತಮಗೆ ಮಾಹಿತಿ ನೀಡದೇ ಅಧಿಕಾರಿಗಳು ಶಿಷ್ಠಾಚಾರ ಉಲ್ಲಂಘಿಸಿದ್ದಾರೆ, ಹೀಗಾಗಿ ಈ ಕುರಿತು ಸರ್ಕಾರ, ರಾಜ್ಯಪಾಲರು ಹಾಗೂ ಲೋಕಸಭೆ ಸ್ಪೀಕರ್‌ ಗೆ ದೂರು ನೀಡಲು ನಿರ್ಧರಿದ್ದೇನೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಮಂಗಳವಾರ ಹೇಳಿದ್ದಾರೆ.

ಹೇಳಿಕೆ ನೀಡಿರುವ ಸಂಸದ ಜಿಗಜಿಣಗಿ, ಸೋಮವಾರ ರಾಜ್ಯಪಾಲ ಥಾವರ್‌ಚಂದ ಗೆಹ್ಲೋಟ್ ಅವರು ವಿಜಯಪುರ ತಲುಪುತ್ತಿದ್ದಂತೆ ನನಗೆ ದೂರವಾಣಿ ಕರೆ ಮಾಡಿ, ನಾನು ನಿಮ್ಮೂರಲ್ಲಿ ಇದ್ದೇನೆ ಎಂದು ತಿಳಿಸಿದರು. ಆಗಲೇ ರಾಜ್ಯಪಾಲರ ವಿಜಯಪುರ ಕಾರ್ಯಕ್ರಮ, ಮಹಿಳಾ ವಿಶ್ವವಿದ್ಯಾಲಯ ಹಮ್ಮಿಕೊಂಡ ಘಟಿಕೋತ್ಸವ ಕುರಿತು ನನಗೆ ತಿಳಿಯಿತು. ವಿಶ್ವವಿದ್ಯಾಲಯ ರಾಜ್ಯಪಾಲರನ್ನು ಆಮಂತ್ರಿಸಿದ್ದರಿಂದ ನನ್ನನ್ನು ಆಮಂತ್ರಿಸುವುದು ಸರಕಾರದ ಶಿಷ್ಠಾಚಾರ. ಕುಲಪತಿಗಳು ಈ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ಹರಿಹಾಯ್ದಿದ್ದಾರೆ.

ಒಂದೊಮ್ಮೆ ತಡವಾಗಿದ್ದರೆ ದೂರವಾಣಿ ಕರೆ ಮಾಡಿಯಾದರೂ ರಾಜ್ಯಪಾಲರ ಪ್ರವಾಸದ ಕಾರ್ಯಕ್ರಮದ ಕುರಿತು ತಿಳಿಸಬಹುದಾಗಿತ್ತು. ಆದರೆ ರಾಜ್ಯಪಾಲರ ವಿಜಯಪುರ ಭೇಟಿಯ ಬಗ್ಗೆ ನನಗೆ ಯಾವ ಮಾಹಿತಿ ಇಲ್ಲದ ಕಾರಣ ನಾನು ದೆಹಲಿಗೆ ಬಂದಿದ್ದೇನೆ. ಇಲ್ಲಿರುವಾಗ ರಾಜ್ಯಪಾಲರು ಖುದ್ದು ನನ್ನನ್ನು ಸಂಪರ್ಕಿಸಿ ನಿಮ್ಮ ನಗರಕ್ಕೆ ಬಂದಿದ್ದೇನೆ ನೀವು ಎಲ್ಲಿ ಎಂದು ಪ್ರಶ್ನಿಸಿದಾಗಲೆ ನನಗೆ ಎಲ್ಲ ವಿಷಯ ತಿಳಿಯಿತು,ನನಗೆ ಮುಜುಗುರವಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮಹಿಳಾ ವಿಶ್ವವಿದ್ಯಾಲಯ ಶಿಷ್ಟಾಚಾರ ಉಲ್ಲಂಘನೆ ಗಂಭೀರ ಲೋಪವಾಗಿದ್ದು, ಈ ಕುರಿತು ಸರಕಾರ, ರಾಜ್ಯಪಾಲ ಮತ್ತು ಲೋಕಸಭಾ ಸ್ಪೀಕರ್ ಅವರಿಗೆ ಪತ್ರ ಬರೆದು ದೂರು ನೀಡುವುದಾಗಿ ತಿಳಿಸಿದ್ದಾರೆ.

ಓರ್ವ ಸಂಸದನಾಗಿ ನನಗೆ ಅನೇಕ ಜವಾಬ್ದಾರಿಗಳಿವೆ. ಶಿಷ್ಠಾಚಾರ ಪ್ರಕಾರ ನನಗೆ ಆಮಂತ್ರಿಸುವುದು ವಿಶ್ವವಿದ್ಯಾಲಯ ಕರ್ತವ್ಯ. ವಿಶ್ವವಿದ್ಯಾಲಯದ ಅಧಿಕಾರಿಗಳು ಶಿಷ್ಟಾಚಾರ ಪಾಲನೆ ಮರೆತಿರುವುದು ಖಂಡನೀಯ ಎಂದು ಸಂಸದರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Bus-problem

Service Variation: ಸರಕಾರಿ ಬಸ್‌ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ

Kite-Festival

Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ

UV-Deepavali

Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್‌

MNG-tulasi-gowda

Environmental Activist: ತುಳಸಿ ಗೌಡರ ಮಂಗಳೂರು ಒಡನಾಟ

Shipyard-Met

Malpe: ಉಡುಪಿ ಕೊಚ್ಚಿನ್‌ ಶಿಪ್‌ಯಾರ್ಡ್‌ನಿಂದ ಕಾರ್ಗೋ ಶಿಪ್‌ ನಾರ್ವೆಗೆ ಹಸ್ತಾಂತರ

1-chagan

Maharashtra; ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ: ಭುಜಬಲ್‌ ಅಸಮಾಧಾನ

1-qeq-wewqe

Constitution; ರಾಜ್ಯಸಭೆಯಲ್ಲಿ ಖರ್ಗೆ-ನಿರ್ಮಲಾ ಜಟಾಪಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: 384 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ಮರು ಪರೀಕ್ಷೆ: ತಡೆ ತೆರವು

High Court: 384 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ಮರು ಪರೀಕ್ಷೆ: ತಡೆ ತೆರವು

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

ಇದು 0 ಪರ್ಸೆಂಟ್‌ ಅಭಿವೃದ್ಧಿ,100 ಪರ್ಸೆಂಟ್‌ ಭ್ರಷ್ಟಾಚಾರದ ಸರಕಾರ: ಸುನಿಲ್‌

ಇದು 0 ಪರ್ಸೆಂಟ್‌ ಅಭಿವೃದ್ಧಿ,100 ಪರ್ಸೆಂಟ್‌ ಭ್ರಷ್ಟಾಚಾರದ ಸರಕಾರ: ಸುನಿಲ್‌

ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ

ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ

Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್‌ ಆಸ್ಪತ್ರೆ: ಶರಣಪ್ರಕಾಶ್‌ ಪಾಟೀಲ್‌

Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್‌ ಆಸ್ಪತ್ರೆ: ಶರಣಪ್ರಕಾಶ್‌ ಪಾಟೀಲ್‌

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Bus-problem

Service Variation: ಸರಕಾರಿ ಬಸ್‌ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ

Kite-Festival

Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ

Thief

Kundapura: ಸರಕಾರಿ ಕಾಲೇಜಿನ ಎನ್‌ವಿಆರ್‌ ಕೆಮರಾ ಕಳವು

UV-Deepavali

Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್‌

Suside-Boy

Belthangady: ಕಾರು-ದ್ವಿಚಕ್ರ ವಾಹನ ಅಪಘಾತ: ಗಾಯಾಳಾಗಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.