“ಹಲಾಲ್‌’ ಹಣ ದೇಶ ವಿರೋಧಿ ಕೃತ್ಯಗಳಿಗೆ ಬಳಕೆ

ಹಿಂದೂ ರಾಷ್ಟ್ರ ನಿರ್ಮಾಣ ಒಕ್ಕೂಟದ ಹೆಸರಿನಲ್ಲಿ ಹೋರಾಟ ಕೈಗೊಂಡಿದ್ದೇವೆ ಎಂದರು.

Team Udayavani, Nov 11, 2021, 6:06 PM IST

“ಹಲಾಲ್‌’ ಹಣ ದೇಶ ವಿರೋಧಿ ಕೃತ್ಯಗಳಿಗೆ ಬಳಕೆ

ಗೋಕಾಕ: ದೇಶದಲ್ಲಿ ಮತ್ತು ವಿದೇಶಕ್ಕೆ ರಫ್ತು ಮಾಡುವ ಸಿದ್ಧ ಆಹಾರಕ್ಕೆ ಹಲಾಲ್‌ ಹೆಸರಿನ ಪ್ರಮಾಣಪತ್ರ ಪಡೆಯಲು ಕೆಲವು ಮುಸ್ಲಿಂ ಸಂಘಟನೆಗಳಿಗೆ ಹಣ ಕೊಡಬೇಕಿದೆ. ಆ ಹಣವು ದೇಶ ವಿರೋಧಿ  ಕೃತ್ಯಗಳಿಗೆ ಬಳಕೆಯಾಗುತ್ತಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ಆರೋಪಿಸಿದರು.

ಅವರು, ಬುಧವಾರ ನಗರದ ಸಮುದಾಯ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಲಾಲ್‌ ಹೆಸರಿನ ಪ್ರಮಾಣಪತ್ರ ಪಡೆಯಲು ಸಂಗ್ರಹವಾಗುವ ಸಾವಿರಾರು ಕೋಟಿ ಹಣ ಭಯೋತ್ಪಾದಕರಿಗೆ, ಗೋ ಹಂತಕರಿಗೆ, ದೇಶ ವಿರೋಧಿಗಳಿಗೆ ಹೋಗುತ್ತಿದೆ. ಅದರ ವಿರುದ್ಧ ಹಿಂದೂ ರಾಷ್ಟ್ರ ನಿರ್ಮಾಣ ಒಕ್ಕೂಟದ ಹೆಸರಿನಲ್ಲಿ ಹೋರಾಟ ಕೈಗೊಂಡಿದ್ದೇವೆ ಎಂದರು.

ದೇಶದ ಸಂವಿಧಾನ ಚರ್ಚ್‌ ಕಟ್ಟಿ ಅಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಕೊಟ್ಟಿದೆ ಹೊರತು ಮತಾಂತರಕ್ಕೆ ಅಲ್ಲ. ಮತಾಂತರ ಮಾಡುವವರನ್ನು ಹದ್ದುಬಸ್ತಿನಲ್ಲಿಡಲು ರಾಜ್ಯದಲ್ಲಿ ತಕ್ಷಣ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಒತ್ತಾಯಿಸಲು ನ. 12ರಂದು 100ಕ್ಕೂ ಹೆಚ್ಚು ಮಠಾಧೀಶರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲಾಗುವುದು ಎಂದರು.

ದೇಶದಲ್ಲಿರುವ ಶೇ 99ರಷ್ಟು ಕ್ರೈಸ್ತರು ಮತಾಂತರ ಆಗಿರುವ ಹಿಂದೂಗಳೇ ಆಗಿದ್ದಾರೆ. ಅವರು ಲಂಡನ್‌, ಇಟಲಿಯಿಂದ ಬಂದವರು ಅಲ್ಲ. ಒತ್ತಾಯವೋ, ಆಸೆಯೋ-ಆಮಿಷವೋ ಗೊತ್ತಿಲ್ಲ. ಮತಾಂತರ ಆಗಿದ್ದಾರೆ. ಮತಾಂತರ ಮಾಡುವವರ ಸೇವೆ ಎಲ್ಲವೂ ಬೂಟಾಟಿಕೆ. ಅವೆಲ್ಲವೂ ಕೊನೆಯಾಗುವುದು ಮತಾಂತರದಲ್ಲಿ. ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲ ದೇವಸ್ಥಾನಗಳಲ್ಲಿ ಗೋ ಪೂಜೆ ನಡೆಸಿದ್ದು ಸ್ವಾಗತಾರ್ಹ. ದೀಪಾವಳಿ ಹಬ್ಬದಲ್ಲಿ ಗೋ ಪೂಜೆ
ನಡೆಸುವ ಮೂಲಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವದಕ್ಕಾಗಿ ಗೋವುಗಳ ಮಹತ್ವ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಮೂಢಿಸಲು ಸರಕಾರ ಮುಂದಾಗಿದ್ದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದರು.

ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ರವಿಕುಮಾರ ಕೋಕಿತಕರ, ರಾಜ್ಯ ಪ್ರಮುಖ ಜಯದೀಪ ದೇಸಾಯಿ, ಗೋಕಾಕ ತಾಲೂಕಾಧ್ಯಕ್ಷ ರವಿ ಪೂಜಾರಿ, ಶಿವರಾಜ ನಾಯ್ಕ, ವಿವೇಕ ಪುರಾಣಿಕ, ಶಿವು ಹಿರೇಮಠ, ಶಿವು ಬಂತೆ, ಸಿದ್ದು ಘೋರ್ಪಡೆ, ದಶರಥ ಸುಭಂಜಿ, ರಾಮು ತೋಳಿ, ರಮೇಶ
ಸಂಕಪಾಳ, ಮಂಜು ತೇಲಿ ಇದ್ದರು.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.