ಯುವಕರಲ್ಲಿ ಕುತೂಹಲ ಹೆಚ್ಚಿಸಿದ ಸುಲಭ ಕೃಷಿ

ನಾಲ್ಕು ದಿನಗಳ ಕೃಷಿ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರೇ ಭೇಟಿ

Team Udayavani, Nov 13, 2021, 9:33 AM IST

ಯುವಕರಲ್ಲಿ ಕುತೂಹಲ ಹೆಚ್ಚಿಸಿದ ಸುಲಭ ಕೃಷಿ

ಬೆಂಗಳೂರು: ಕೊರೊನಾ ನಂತರದ ಕಾಲಘಟ್ಟದಲ್ಲಿ ನಗರ ಜೀವನಕ್ಕೆ ಗುಡ್‌ ಬೈ ಹೇಳಿ ಹಳ್ಳಿಗಳತ್ತ ಸಾಗಿರುವ ಯುವಕರು, ಕೃಷಿಯತ್ತ ಒಲವು ತೋರಿದ್ದಾರೆ. ಸುಲಭವಾಗಿ ಕೃಷಿ ಮಾಡಲು ಸಿಗಬಹುದಾದ ಯಂತ್ರೋ ಪಕರಣ ಗಳಿಗೆ ಹುಡುಕಾಟದಲ್ಲಿ ನಿರತರಾಗಿದ್ದರು. ಜಿಕೆವಿಕೆಯಲ್ಲಿ ನಡೆಯುತ್ತಿರುವ ನಾಲ್ಕು ದಿನಗಳ ಕೃಷಿ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರೇ ಭೇಟಿ ನೀಡುತ್ತಿದ್ದು, ಆಧುನಿಕ ಕೃಷಿ ಯಂತ್ರೋಪಕರಣ ಗಳು, ನೂತನ ಕೃಷಿ ಪದ್ಧತಿ, ಉತ್ತಮ ಇಳುವರಿ ನೀಡ ಬಹುದಾದ ಬೆಳೆಗಳು, ವಾಣಿಜ್ಯ ಬೆಳೆಗಳು ಮತ್ತು ಸಣ್ಣ ರೈತರಾಗಿ ಒಂದೆರಡು ಎಕರೆ ಪ್ರದೇಶಗಳಲ್ಲಿ ಬೆಳೆಯ ಬಹುದಾದ ಮತ್ತು ಉತ್ತಮ ಆದಾಯ ಬರುವಂತಹ ಬೆಳೆಗಳತ್ತ ಯುವಕರು ನೋಟ ಹರಿಸಿದ್ದರು.

ಇತ್ತೀಚಿನ ದಿನಗಳಲ್ಲಿ ಕೃಷಿ ಕಾರ್ಮಿಕರ ಸಂಖ್ಯೆ ಇಳಿಮುಖವಾಗು¤ತಿದೆ. ಅದರ ಜೊತೆಗೆ ಕೃಷಿ ಕಾರ್ಮಿಕರ ಕೂಲಿ ಕೂಡ ಹೆಚ್ಚಳವಾಗುತ್ತಿದೆ. ಇದರಿಂದ ಸಣ್ಣ ರೈತರು, ವ್ಯವಸಾಯಕ್ಕೆ ಹೂಡಿರುವ ಹಣದ ಜೊತೆಗೆ ಲಾಭ ಕಡಿಮೆಯಾಗುತ್ತಿದೆ. ಹೀಗಾಗಿ, ಕೃಷಿ ಯಂತ್ರೋಪಕರಣಗಳನ್ನು ಬಳಸಿ ಸುಲಭವಾಗಿ ಕೃಷಿ ಮಾಡಬಹುದಾದ ಯಂತ್ರಗಳ ಮಾಹಿತಿಯನ್ನು ಯುವಕರು ಕೇಳಿ ಪಡೆಯುತ್ತಿದ್ದರು.

ಯಾವ ಬೆಳೆಗಳಿಗೆ ಆದ್ಯತೆ?: ತೋಟಗಾರಿಕಾ ಬೆಳೆಗಳಾದ ಟೊಮ್ಯಾಟೋ, ದಪ್ಪ ಮೆಣಸಿನಕಾಯಿ, ಹಸಿರು ಮೆಣಸಿನಕಾಯಿ, ಹುರುಳಿಕಾಯಿ, ಬದನೆಕಾಯಿ, ಕ್ಯಾರೇಟ್‌, ಆಹಾರ ಬೆಳೆಗಳಾದ ರಾಗಿ, ಭತ್ತ, ಕಡಿಮೆ ನೀರಿನಲ್ಲಿ ಮತ್ತು ಖುಷ್ಕಿ ಜಮೀನುಗಳಲ್ಲಿ ಬೆಳೆಯ ಬಹುದಾದ ಸಿರಿಧಾನ್ಯಗಳಾದ ಸಾಮೆ, ಆರ್ಕ, ನವಣೆ, ಬರಗು, ಎಣ್ಣೆಕಾಳುಗಳು ಮತ್ತು ಫಾಸ್ಟ್‌ ಫ‌ುಡ್‌ ಗಳಿಗೆ ಬಳಸಬಹುದಾದ ವಿದೇಶಿ ತರಕಾರಿಗಳನ್ನು ಬೆಳೆಯಲು ಯುವ ರೈತರು ಆಸಕ್ತಿ ತೋರುತ್ತಿದ್ದಾರೆ.

ಇದಕ್ಕಾಗಿ ಕಳೆ ತೆಗೆಯುವುದು, ಬದು ನಿರ್ಮಾಣ, ಗುಳಿ ತೋಡುವುದು, ಉಳುಮೆ ಮಾಡುವುದು, ಕೀಟನಾಶಕ ಸಿಂಪಡಣೆ ಮತ್ತು ಕೊಯ್ಲು ಕೆಲಸವನ್ನು ಸುಲಭಗೊಳಿಸುವ ಯಂತ್ರಗಳಿಗೆ ಹೆಚ್ಚಿನ ಜನರು ಆಸಕ್ತಿಯಿಂದ ನೋಡುತ್ತಿದ್ದರು. ಈ ಕುರಿತು ಮಾತನಾಡಿದ ಮೈಸೂರಿನ ರೈತ ಮಹದೇವಪ್ಪ, ಇಸ್ರೇಲ್‌ ಮಾದರಿ ಕೃಷಿಯಿಂದ ನೀರಿನ ಬಳಕೆ ಮತ್ತು ಕೃಷಿ ಕಾರ್ಮಿಕರ ಬಳಕೆ ಎರಡೂ ಕೂಡ ಕಡಿಮೆಯಾಗುತ್ತದೆ.

ಯಂತ್ರೋಪಕರಣಗಳನ್ನು ಬಳಸಿಕೊಳ್ಳುವ ಜೊತೆಗೆ ಆಧುನಿಕ ತಂತ್ರಜ್ಞಾನ ಗಳನ್ನು ಅಳವಡಿಸಿಕೊಂಡರೆ, ಹೆಚ್ಚಿನ ಪ್ರಮಾಣದಲ್ಲಿ ಇಳುವರಿ ತೆಗೆಯಲು ಸಾಧ್ಯವಾಗುತ್ತದೆ. ಅದಕ್ಕಾಗಿ ಬೇಕಾಗುವ ಸಲಕರಣೆಗಳನ್ನು ನೋಡುತ್ತಿದ್ದೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಾಮಾನ್ಯವಾಗಿ ಮಂಡ್ಯ, ಮೈಸೂರು, ಚಾಮರಾಜನಗರದಲ್ಲಿ ದೇಸಿ ಬೆಳೆಗಳಾದ ಕಬ್ಬು, ಭತ್ತ, ರಾಗಿಯನ್ನೇ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಿದ್ದಾರೆ.

ಇದನ್ನೂ ಓದಿ:- ಪ್ರಧಾನಿ ಮೋದಿ 4 ಗಂಟೆಯ ಕಾರ್ಯಕ್ರಮಕ್ಕೆ 23 ಕೋಟಿ ರೂ ಖರ್ಚು ಮಾಡುತ್ತಿದೆ ಮ.ಪ್ರದೇಶ ಸರ್ಕಾರ!

ಇದರ ಬದಲಾಗಿ ರೈತರಿಗೆ ಆದಾಯವನ್ನು ತರುವಂತಹ ಬೆಳೆಗಳನ್ನು ಬೆಳೆಯಲು ಆಸಕ್ತನಾಗಿದ್ದೇನೆ. ಹೀಗಾಗಿ, ಕೃಷಿ ಮೇಳದಲ್ಲಿ ಏನಾದರೂ ಅನುಕೂಲವಾಗಬಹುದು ಎಂಬ ಉದ್ದೇಶದಿಂದ ಬಂದಿದ್ದೇನೆ ಎಂದು ತಿಳಿಸಿದರು. ಕೋಲಾರದಿಂದ ಬಂದಿದ್ದ ಸತೀಶ್‌ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ತರಕಾರಿ- ಹೂಗಳನ್ನು ಬೆಳೆಯಲಾಗುತ್ತಿದೆ. ಜಿಲ್ಲೆಯಲ್ಲಿ ನೀರಿನ ಅಭಾವ ಇರುವುದರಿಂದ ಕಡಿಮೆ ನೀರು ಬಳಸಿಕೊಂಡು ಬೆಳೆಯಬಹುದಾದ ಆಧುನಿಕ ತಂತ್ರಜ್ಞಾನಗಳನ್ನು ತಿಳಿದುಕೊಳ್ಳಲು ಬಂದಿದ್ದೇನೆ ಎಂದು ಹೇಳಿದರು.

“ಸಿಲಿಕಾನ್‌ ಸಿಟಿಯಲ್ಲಿ ಫಾಸ್ಟ್‌ ಫ‌ುಡ್‌ ಗಳಿಗೆ ತುಂಬಾನೇ ಬೇಡಿಕೆ ಇದೆ. ಪಿಜ್ಜಾ, ಬರ್ಗರ್‌ ಸೇರಿದಂತೆ ಇನ್ನಿತರ ಫಾಸ್ಟ್‌ ಫ‌ುಡ್‌ಗಳಿಗೆ ಬೇಕಾಗುವ ಸೊಪ್ಪು-ತರಕಾರಿ ಬೆಳೆಯಲು ಕೃಷಿ ಇಲಾಖೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು.” ಸಿದ್ಧಲಿಂಗಪ್ಪ, ತುಮಕೂರು.

“ಸಿರಿಧಾನ್ಯಗಳನ್ನು ಒಕ್ಕಣೆ ಮಾಡಲು ಮತ್ತು ಸ್ವತ್ಛಗೊಳಿಸಲು ಬೇಕಾಗುವ ಸಲಕರಣೆಗಳನ್ನು ಒದಗಿಸುವ ಬಗ್ಗೆ ಸರ್ಕಾರ ಮತ್ತಷ್ಟು ಕಾಳಜಿ ವಹಿಸಬೇಕು. ನಗರದ ಜನತೆ ಸಿರಿಧಾನ್ಯಗಳನ್ನು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಳಸುತ್ತಿದ್ದಾರೆ. ಬೇಡಿಕೆ ಕಡಿಮೆ ಇರುವುದರಿಂದ ಸಿರಿಧಾನ್ಯಗಳಿಗೆ ಹೆಚ್ಚಿನ ಬೆಲೆ ಇದೆ. ದೊಡ್ಡ ಮಟ್ಟದಲ್ಲಿ ಬೆಳೆದರೆ, ಎಲ್ಲರೂ ಸಿರಿಧಾನ್ಯ ಬಳಸಲು ಸಹಕಾರಿಯಾಗಲಿದೆ.” ತಿಪ್ಪೇಸ್ವಾಮಿ, ಚಿತ್ರದುರ್ಗ

ಟಾಪ್ ನ್ಯೂಸ್

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

10-bng

Bengaluru: ಇಬ್ಬರು ಡ್ರಗ್ಸ್‌ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ

9–bng

Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.