“ಕಾಂಡೋಮ್” ಹಿಡಿದು ಬಂದ ಛತ್ರಿವಾಲಿ ನಟಿ ರಾಕುಲ್ ಪ್ರೀತ್ ಸಿಂಗ್!
ಕಾಂಡೋಮ್ ಅನ್ನು ಹಿಡಿದು ಬರುವ ಮೂಲಕ ಸಿನಿ ಪ್ರಿಯರಿಗೆ ಅಚ್ಚರಿ ಹುಟ್ಟಿಸಿದ್ದಾರೆ
Team Udayavani, Nov 13, 2021, 2:55 PM IST
ಮುಂಬಯಿ: ಬಾಲಿವುಡ್ ನ ಬಹುಬೇಡಿಕೆಯ ನಟಿ ರಾಕುಲ್ ಪ್ರೀತ್ ಸಿಂಗ್ ಈಗಾಗಲೇ ಹಲವಾರು ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದಿದ್ದು, ಇದೀಗ ಅದಕ್ಕೆ ಮತ್ತೊಂದು ಸೇರ್ಪಡೆಯಾಗಿದೆ. ಹೌದು ತಮ್ಮ ಮುಂಬರುವ ಸಿನಿಮಾದ ಫಸ್ಟ್ ಲುಕ್ ನಲ್ಲಿ “ಕಾಂಡೋಮ್” ಹಿಡಿದುಕೊಂಡು ಬರುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ.
ಇದನ್ನೂ ಓದಿ:ಅಪಘಾತವಾಗಿ ಬಿದ್ದಿದ್ದ ಯುವಕರಿಗೆ ಉಪಚರಿಸಿ ಮಾನವೀಯತೆ ಮೆರೆದ ಆರಗ ಜ್ಞಾನೇಂದ್ರ
ತಮ್ಮ ಮುಂಬರುವ “ಛತ್ರಿವಾಲಿ” ಎಂಬ ಹೊಸ ಸಿನಿಮಾದಲ್ಲಿ ರಾಕುಲ್ ಪ್ರೀತ್ ಸಿಂಗ್ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಲಕ್ನೋದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಛತ್ರಿವಾಲಿ ಸಿನಿಮಾದ ಫಸ್ಟ್ ಲುಕ್ ಅನ್ನು ಅನಾವರಣಗೊಳಿಸಿದ್ದಾರೆ.
ಫಸ್ಟ್ ಲುಕ್ ಪೋಸ್ಟರ್ ನಲ್ಲಿ ನಟಿ ರಾಕುಲ್ ಪ್ರೀತ್ ಸಿಂಗ್ ಕಾಂಡೋಮ್ ಅನ್ನು ಹಿಡಿದು ಬರುವ ಮೂಲಕ ಸಿನಿ ಪ್ರಿಯರಿಗೆ ಅಚ್ಚರಿ ಹುಟ್ಟಿಸಿದ್ದಾರೆ. ಛತ್ರಿವಾಲಿ ಸಿನಿಮಾದಲ್ಲಿ ರಾಕುಲ್ ಕಾಂಡೋಮ್ ಪರೀಕ್ಷೆ ಮಾಡುವ ಪ್ರತಿನಿಧಿಯಾಗಿ ಕಾಣಿಸಿಕೊಳ್ಳಲಿದ್ದಾರಂತೆ.
ಬಾಲಿವುಡ್ ನ ಛತ್ರಿವಾಲಿ ಸಾಮಾಜಿಕ ಕೌಟುಂಬಿಕ ಕಾಮಿಡಿ ಸಿನಿಮಾವಾಗಿದೆ. ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗಿ ಯುವತಿಯೊಬ್ಬಳು ತನಗೆ ಕೆಲಸವಿಲ್ಲದೇ ನಿರಾಸೆಗೊಳಗಾದಾಗ ಕರ್ನಲ್ ಎಂಬ ಪುಟ್ಟ ಊರಿನಲ್ಲಿ ಕಾಂಡೋಮ್ ಪರೀಕ್ಷೆ ಮಾಡುವ ಕೆಲಸದಲ್ಲಿ ತೊಡಗಿಕೊಳ್ಳುತ್ತಾಳೆ. ಕಾಂಡೋಮ್ ಪರೀಕ್ಷಕಳಾಗಿ ಹೇಗೆ ಕೆಲಸ ಮಾಡುತ್ತಾಳೆ ಎಂಬ ಕಥಾ ಹಂದರ ಛತ್ರಿವಾಲಿ ಸಿನಿಮಾದ್ದಾಗಿದೆ.
ರಾಕುಲ್ ಈಗಾಗಲೇ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಛತ್ರಿವಾಲಿಯಲ್ಲಿಯೂ ಅವರು ಹೊಸ ಪಾತ್ರದೊಂದಿಗೆ ಕಾಣಿಸಿಕೊಂಡಿದ್ದಾರೆ. ಈ ಕಾಮಿಡಿ ಸಿನಿಮಾವನ್ನು ಪ್ರೇಕ್ಷಕರು ಖಂಡಿತ ಒಪ್ಪಿಕೊಳ್ಳುತ್ತಾರೆ. ಅಲ್ಲದೇ ಛತ್ರಿವಾಲಿಯಲ್ಲಿ ರಾಕುಲ್ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ ಎಂಬ ನಂಬಿಕೆ ಇದ್ದಿರುವುದಾಗಿ ನಿರ್ದೇಶಕ ತೇಜಸ್ ಡಿಯೋಸ್ಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Japan ಆ್ಯನಿಮೇಟೆಡ್ ರಾಮಾಯಣ ಅ.18ಕ್ಕೆ ಮರು ಬಿಡುಗಡೆ
Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.