ವಾಹನ ಸಂಚಾರಕ್ಕೆ ತೊಡಕು, ನಡೆದು ಹೋಗಲೂ ಕಷ್ಟ 


Team Udayavani, Nov 14, 2021, 3:10 AM IST

ವಾಹನ ಸಂಚಾರಕ್ಕೆ ತೊಡಕು, ನಡೆದು ಹೋಗಲೂ ಕಷ್ಟ 

ಕಡಬ: ಕೊಂಬಾರು ಗ್ರಾ.ಪಂ. ವ್ಯಾಪ್ತಿಯ ಸುಂಕದಕಟ್ಟೆ-ಬೋಳ್ನಡ್ಕ ಸಂಪರ್ಕ ರಸ್ತೆಯ ಕೊಂಬಾರುಗದ್ದೆಯಲ್ಲಿ ಬೋರೆ ಹೊಳೆ ಬದಿಗೆ ನಿರ್ಮಾಣವಾಗುತ್ತಿದ್ದ ತಡೆಗೋಡೆ ನಿರ್ಮಾಣದ ಕಾಮಗಾರಿ ಅಪೂರ್ಣ ಸ್ಥಿತಿಯಲ್ಲಿದ್ದು, ಅಲ್ಲಿನ ಜನರು ವಾಹನ ಸಂಚಾರ ಬಿಡಿ ನಡೆದು ಹೋಗಲೂ ಸಾಧ್ಯವಾಗದೆ ಪರದಾಡುವಂತಾಗಿದೆ.

ತಡೆಗೋಡೆಯ ಕಾಮಗಾರಿ ಸ್ಥಗಿತ ಗೊಂಡು ಸುಮಾರು ಎರಡು ತಿಂಗಳೇ ಕಳೆದಿದೆ. ಕಾಮಗಾರಿಗಾಗಿ ಮಣ್ಣು ಹಾಕಿರುವುದರಿಂದ ವಾಹನ ಸಂಚಾರವೂ ಸಾಧ್ಯವಿಲ್ಲ ಎಂಬಂತಾಗಿದೆ. ಬನಾರಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಸೇರಿದಂತೆ ಹಲವು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ತಡೆಗೋಡೆ ಕಾರ್ಯ ಸ್ಥಗಿತಗೊಂಡಿದೆ.

ಶ್ರೀಘ್ರ ಕಾಮಗಾರಿ ಮುಗಿಸಲು ಆಗ್ರಹ :

ಕಾಮಗಾರಿ ಅರ್ಧದ‌ಲ್ಲಿರುವುದರಿಂದ ಸ್ಥಳೀಯರು ಹಾಗೂ ರಬ್ಬರ್‌ ತೋಟಗಳ ಕಾರ್ಮಿಕರು ಕೆಲಸಕ್ಕೆ ಹೋಗಲು ಪರದಾಡುತ್ತಿದ್ದಾರೆ. ಮುಖ್ಯವಾಗಿ ಬನಾರಿ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಹೋಗಲು ಸಮಸ್ಯೆಯಾಗಿದೆ. ಜನವರಿ 14 ರಂದು ದೇವಸ್ಥಾನದಲ್ಲಿ ವಿಶೇಷ ಪೂಜೆ ಇದೆ. ಅದಕ್ಕಿಂತ ಮೊದಲು ಕಾಮಗಾರಿ ಪೂರ್ತಿಗೊಳಿಸುವಲ್ಲಿ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು ಎಂದು ಕೊಂಬಾರು ಗ್ರಾ.ಪಂ. ಮಾಜಿ ಉಪಾಧ್ಯಕ್ಷ  ಮುತ್ತುಕುಮಾರ್‌ ಆಗ್ರಹಿಸಿದ್ದಾರೆ.

ಆದ್ದರಿಂದ 100-200 ಮೀ. ಕ್ರಮಿಸಿ ಮನೆ ಸೇರುತ್ತಿದ್ದ ಜನ ಈಗ 6-7 ಕಿ.ಮೀ. ಸುತ್ತು ಬಳಸಿ ಹೋಗಬೇಕಾದ ಅನಿವಾರ್ಯ ಎದುರಾಗಿದೆ. ಸುಂಕದಕಟ್ಟೆಗೆ ಸುಲಭ ಸಂಪರ್ಕ ಕಲ್ಪಿಸುವ ಈ ರಸ್ತೆಗೆ ಈಗ ಸಂಚಕಾರ ಉಂಟಾಗಿದೆ. ಮುಖ್ಯವಾಗಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಮೂಜೂರು ರಬ್ಬರ್‌ ಘಟಕಕ್ಕೆ ಹೋಗುವ 60 ಕ್ಕಿಂತಲೂ ಹೆಚ್ಚು ರಬ್ಬರ್‌ ಕಾರ್ಮಿಕರು ಮುಂಜಾವಿನಲ್ಲಿ ಇದೇ ನೂತನ ತಡೆಗೋಡೆ ಬದಿಯ ರಸ್ತೆಯಲ್ಲಿ ಸಾಗಲು ಹರಸಾಹಸ ಪಡುತ್ತಿದ್ದಾರೆ. ಬೀಡು ಮಜಲು ಎಂಬಲ್ಲಿ ನಿರ್ಮಾಣವಾಗಬೇಕಿದ್ದ ಮೋರಿ ನಿರ್ಮಾಣದ ಕಾಮಗಾರಿಯೂ ಬಾಕಿಯಾಗಿದೆ. ಕಾಮಗಾರಿ ಸ್ಥಗಿತದಿಂದಾಗಿ ಸಮಸ್ಯೆ ಎದುರಿಸುತ್ತಿರುವ ಜನರು ಸಂಬಂಧ ಪಟ್ಟವರಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಕಾಮಗಾರಿಗೆ 50 ಲಕ್ಷ  ರೂ. ಅನುದಾನ :

ಜಿ.ಪಂ. ಮಾಜಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರ ಮುತು ವರ್ಜಿಯಿಂದಾಗಿ ಇಲ್ಲಿನ ಕಾಮಗಾರಿಗೆ 50 ಲಕ್ಷ ರೂ. ಅನುದಾನ ಲಭಿಸಿತ್ತು. ಕ್ಷೇತ್ರದ ಶಾಸಕ ಪ್ರಸ್ತುತ ಸಚಿವರಾಗಿರುವ ಎಸ್‌. ಅಂಗಾರ ವರ್ಷದ ಹಿಂದೆ ಗುದ್ದಲಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು. ಕಾಮಗಾರಿ ಮುಗಿಯುವ ಹಂತಕ್ಕೆ ತಲುಪಿದಾಗ ಸ್ಥಳೀಯ ವ್ಯಕ್ತಿಯೊಬ್ಬರು ಮೋರಿ ಅಳವಡಿಸುವ ವಿಚಾರ ದಲ್ಲಿ ತಗಾದೆ ತೆಗೆದ ಕಾರಣದಿಂದಾಗಿ ಗುತ್ತಿಗೆ ದಾರರು ಕಾಮಗಾರಿಯನ್ನು ನಿಲ್ಲಿಸಿರು ವುದರಿಂದ ಸಮಸ್ಯೆ ಎದುರಾಗಿದೆ.

ನಾವು ಕಾಮಗಾರಿಯನ್ನು ಎಂಜಿನಿಯರ್‌ ಎಸ್ಟಿಮೇಟ್‌ ಪ್ರಕಾರವೇ ಮಾಡಿಕೊಂಡು ಬಂದಿದ್ದೇವೆ. ಆದರೆ ಅಲ್ಲಿ ಮೋರಿ ಅಳವಡಿಸುವಾಗ ಸ್ಥಳೀಯ ವ್ಯಕ್ತಿ ಆಕ್ಷೇಪ ವ್ಯಕ್ತಪಡಿಸಿದ್ದರಿಂದಾಗಿ ಕಾಮಗಾರಿ ನಿಲ್ಲಿಸಲಾಗಿದೆ. ಅದರಿಂದಾಗಿ ನಮಗೂ ನಷ್ಟವಾಗಿದೆ. ಸಾರ್ವಜನಿಕರಿಗೂ ತೊಂದರೆಯಾಗಿದೆ. ಸಮಸ್ಯೆಯನ್ನು ಬಗೆಹರಿಸಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡಲಾಗಿದ್ದು, ಅವರ ಮಾರ್ಗದರ್ಶನದಂತೆ ಶೀಘ್ರ ಕಾಮಗಾರಿ ಆರಂಭಿಸಲಾಗುವುದು. ಉದಯ್‌, ಕಾಮಗಾರಿಯ ಗುತ್ತಿಗೆದಾರರು.

 

-ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.