17ರಂದು ಬೈಲಹೊಂಗಲ ಬಂದ್‌ಗೆ ಕರೆ

ಮೆರವಣಿಗೆ ಮೂಲಕ ತೆರಳಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.

Team Udayavani, Nov 15, 2021, 3:55 PM IST

17ರಂದು ಬೈಲಹೊಂಗಲ ಬಂದ್‌ಗೆ ಕರೆ

ಬೈಲಹೊಂಗಲ: ಪಟ್ಟಣದ ಶಾಖಾ ಮೂರುಸಾವಿರ ಮಠದ ಶ್ರೀ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಆಡಳಿತ ಮಂಡಳಿಯವರು ಶ್ರೀಮಠದ ಪೀಠಾಧಿಕಾರಿ ಪ್ರಭುನೀಲಕಂಠ ಸ್ವಾಮೀಜಿ ಅವರಿಗೆ ಸಂಸ್ಥೆಯ ಅಧಿಕಾರ ಹಸ್ತಾಂತರಿಸಲು ಹಿಂದೇಟು ಹಾಕುತ್ತಿರುವ ಕುರಿತು ಚರ್ಚಿಸಲು ಕರೆದ ಸಾರ್ವಜನಿಕರ ಸಭೆಯಲ್ಲಿ ಬುಧವಾರ ದಿ.17 ರಂದು ಬೈಲಹೊಂಗಲ ಬಂದ್‌ಗೆ ಕರೆ ನೀಡಿ, 10 ಗಂಟೆಗೆ ಶ್ರೀಮಠದಲ್ಲಿ
ಸೇರಿ ಮೆರವಣಿಗೆ ಮೂಲಕ ತೆರಳಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.

ಶ್ರೀಮಠದಲ್ಲಿ ನಡೆದ ಸಭೆಯಲ್ಲಿ ಮುರಗೋಡ ನೀಲಕಂಠ ಸ್ವಾಮೀಜಿ, ಹೊಸೂರ ಗಂಗಾಧರ ಸ್ವಾಮೀಜಿ ಮಾತನಾಡಿ, ಗಂಗಾಧರ ಶ್ರೀಗಳು ಲಿಂಗೈಕ್ಯರಾದ ನಂತರ ನಾಡಿನ ಮಠಾಧಿಶರು, ಹಿರಿಯರ ಸಮ್ಮುಖದಲ್ಲಿ ಪ್ರಭುನೀಲಕಂಠ ಸ್ವಾಮೀಜಿ ಅವರನ್ನು ಶ್ರೀಮಠಕ್ಕೆ ಪೀಠಾ ಧಿಕಾರಿಯನ್ನಾಗಿ ನೇಮಿಸಿ, ಅವರು ವಿದ್ಯಾಭ್ಯಾಸ ಮುಗಿಸಿ, ಪ್ರಬುದ್ದತೆಗೆ ಬರುವವರೆಗೆ ಸಂಸ್ಥೆಯ ಜವಾಬ್ದಾರಿಯನ್ನು ಆಡಳಿತ ಮಂಡಳಿಗೆ ವಹಿಸಿಕೊಡಲಾಗಿತ್ತು.

ಆಡಳಿತ ಮಂಡಳಿಯ ಐವರು ರಾಜೀನಾಮೆ ಪತ್ರ ನೀಡಿದ್ದಾರಾದರೂ ಕಾರ್ಯಾಧ್ಯಕ್ಷ ಸಿ.ಎಸ್‌. ಸಾಧುವನರ ಅವರು ಮುಖಂಡರ ಮಾತಿಗೆ ಸ್ಪಂದಿಸದಿರುವುದರಿಂದ ಸೇರಿದ ಜನಸ್ತೋಮದ ನಿರ್ಧಾರದಂತೆ ಬೈಲಹೊಂಗಲ ಬಂದ್‌ ಗೆ ಕರೆ ನೀಡಿ ಹೋರಾಟ  ಮಾಡಲು ನಿರ್ಧರಿಸಲಾಗುತ್ತಿದೆ. ಶಾಂತಯುತವಾಗಿ ಬಂದ್‌ ಮಾಡಿ ಹೋರಾಟ ಮಾಡೋಣ ಎಂದರು. ಮುಖಂಡ ಶಿವರಂಜನ ಬೊಳನ್ನವರ ಮಾತನಾಡಿ, ಸಂಸ್ಥೆ ಅಭಿವೃದ್ದಿಗಾಗಿ ಪ್ರಭುನೀಲಕಂಠ ಶ್ರೀಗಳಿಗೆ ಸಂಸ್ಥೆಯ ಅಧಿ ಕಾರ ವಹಿಸಿಕೊಡಲು ಜಯ ಸಿಗುವವರೆಗೆ ಹೋರಾಟ ಮಾಡೋಣ ಎಂದರು.

ಸಿ.ಆರ್‌. ಪಾಟೀಲ, ಮಹಾಂತೇಶ ಮು. ಮೆಟಗುಡ್ಡ, ಮಹಾಂತೇಶ ಮತ್ತಿಕೊಪ್ಪ, ರುದ್ರಪ್ಪ ಹೊಸಮನಿ, ಜಿಪಂ ಮಾಜಿ ಸದಸ್ಯ ಶಂಕರ ಮಾಡಲಗಿ, ಶಿವಾನಂದ ಇಂಚಲ, ಎಸ್‌.ಡಿ. ಗಂಗನ್ನವರ, ಬಸವರಾಜ ಪುಟ್ಟಿ, ಸೋಮಲಿಂಗ ಮೆಳ್ಳಿಕೇರಿ, ಬಾಬುಸಾಬ ಸುತಗಟ್ಟಿ ಹಾಗೂ ಅನೇಕ ಮುಖಂಡರು ಮಾತನಾಡಿದರು.

ಪ್ರಭುನೀಲಕಂಠ ಸ್ವಾಮೀಜಿ, ಹಿರಿಯರಾದ ಶಂಕ್ರೆಪ್ಪ ಸಿದ್ನಾಳ, ಶಂಕ್ರೆಪ್ಪ ತುರಮರಿ, ಬಸವರಾಜ ಕೌಜಲಗಿ, ಪುರಸಭೆ ಅಧ್ಯಕ್ಷ ಬಾಬು ಕುಡಸೋಮಣ್ಣವರ, ರಾಜು ಜನ್ಮಟ್ಟಿ, ಸಂಸ್ಥೆಯ ನಿರ್ದೇಶಕರಾದ ವೀರುಪಾಕ್ಷಯ್ಯ ಕೋರಿಮಠ, ಎಸ್‌.ಎಸ್‌. ಸಿದ್ನಾಳ, ಮುಖಂಡರಾದ ತಿಪ್ಪಣ್ಣ ಬಿಳ್ಳೂರ, ರಾಜಶೇಖರ ಮೂಗಿ, ಈಶ್ವರ ಕೊಪ್ಪದ, ಶಿವಬಸಪ್ಪ ತುರಮರಿ, ಗುರು ಮೆಟಗುಡ್ಡ, ಕುಮಾರ ದೇಶನೂರ, ಎಸ್‌.ಎಫ್‌. ಹರಕುಣಿ,
ಮಹಾಂತೇಶ ಅಕ್ಕಿ, ಈರಣ್ಣ ಬೇಟಗೇರಿ, ರಾಚಪ್ಪ ಬೋಳತ್ತಿನ, ಮಡಿವಾಳಪ್ಪ ಹೋಟಿ, ಪ್ರಮೋದಕುಮಾರ ವಕ್ಕುಂದಮಠ, ಸುಭಾಷ ತುರಮರಿ, ಬಿ.ಬಿ. ಗಣಾಚಾರಿ, ಶಿವಾನಂದ ಕೋಲಕಾರ, ಇತರರು ಇದ್ದರು.

ಹೋರಾಟಕ್ಕೆ ಕರವೇ, ಪ್ರವೀಣ ಶೆಟ್ಟಿ ಬಣದ ಕರವೇ, ನವ ನಿರ್ಮಾಣ ಪಡೆ, ಜಯ ಕರ್ನಾಟಕ, ಕರುನಾಡು ಸೇನೆ, ದಲಿತ ಸಂಘರ್ಷ ಸಮಿತಿ ಸೇರಿ ಅನೇಕ ಸಂಘಟನೆಗಳು ಬೆಂಬಲ ಸೂಚಿಸಿದವು. ಪಟ್ಟಣ ಸೇರಿ, ಹೊಸೂರ, ಬುಡರಕಟ್ಟಿ, ಪಟ್ಟಿಹಾಳ, ಸಂಪಗಾಂವ, ತಿಗಡಿ ಗ್ರಾಮಗಳ ಭಕ್ತರು ಇದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.