ಪತ್ರಕರ್ತರಿಗೆ ಸ್ವಯಂ ಮಿತಿ ಅಗತ್ಯ
Team Udayavani, Nov 17, 2021, 11:35 AM IST
ಬೆಂಗಳೂರು: ಪತ್ರಕರ್ತರು ಕೆಲವೊಂದು ಸ್ವಯಂ-ನಿಯಮಗಳನ್ನು ಅಳವಡಿಸಿಕೊಳ್ಳುವ ಮೂಲಕ ಅವುಗಳ ಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಜಗದೀಶ್ ಹೇಳಿದರು.
ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಮಾಧ್ಯಮ ಕಂಡರೆ ಯಾರಿಗೆ ಭಯವಿಲ್ಲ? ಎಂಬ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿ, ಸರ್ಕಾರ ಮತ್ತು ಜನರ ನಡುವೆ ಮಾಹಿತಿ ತಲುಪಿಸಲು ಸೇತುವೆಯಾಗಿ ಮಾಧ್ಯಮ ಕೆಲಸ ನಿರ್ವಹಿಸುತ್ತಿದೆ.
ಪತ್ರಕರ್ತರ ವೃತ್ತಿ ಕೆಲಸವನ್ನು ಯಾವುದೇ ರಾಜಕಾರಣಿಗಳು ಅಥವಾ ಅಧಿಕಾರಿಗಳು ಯಾವುದೇ ಮೇಲ್ವಿಚಾರಣೆ ಮಾಡುವುದಿಲ್ಲ. ಆದರೆ ಸ್ವಯಂ ಪ್ರೇರಣೆಯಿಂದ ಪತ್ರಕರ್ತರೇ ಕೆಲ ಇತಿ-ಮಿತಿ ಅರಿತು ಕಾರ್ಯ ನಿರ್ವಹಿಸಿದಾಗ ಮಾತ್ರ ಜನರಿಗೆ ಬೇಕಾದ ಮಾಹಿತಿ ತಲುಪಿಸಲು ಸಾಧ್ಯ ಎಂದರು. ಮಾಧ್ಯಮ ರಂಗದವರು ಇರೋ ವಿಷಯವನ್ನು ಇದ್ದ ಹಾಗೆ ವರದಿ ಮಾಡಿ, ಜನರನ್ನು ಎಚ್ಚರಿಸುವಂತಹ ಕೆಲಸ ಮಾಡಬೇಕು.
ಇದನ್ನೂ ಓದಿ:- ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 10,197 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ
ಸಾಮಾನ್ಯವಾಗಿ ನೈಜ ಪತ್ರಕರ್ತರನ್ನು ಸರ್ಕಾರದ ರಚನಾತ್ಮಕ ಟೀಕಾಕಾರರು ಎಂದು ಮತ್ತು ಅವರನ್ನು ಪತ್ರಿಪಕ್ಷದ ಸ್ನೇಹಿತರಾಗಿರಬೇಕು. ಆಗ ಮಾತ್ರ ಅಧಿಕಾರಿಗಳು ಅದೆಷ್ಟೋ ಸಮಸ್ಯೆಗಳ ಸುಧಾರಣೆಯಾಗಲು ಸಾಧ್ಯವಾಗುತ್ತದೆ ಎಂದರು. ನಟ, ನಿರ್ದೇಶಕ ರಮೇಶ್ ಅರವಿಂದ್ ಮಾತನಾಡಿ, ಸಮಾಜದಲ್ಲಿನ ಪ್ರತಿಯೊಂದು ಕ್ಷೇತ್ರದಲ್ಲಿಯೂ ಮಾಧ್ಯಮದ ಅವಶ್ಯಕತೆಯಿದೆ.
ಹಾಗೆಯೇ ನನ್ನ ಸಿನಿಮಾ ಮತ್ತು ಜನರ ಮಧ್ಯೆ ಇದ್ದ ಸೇತುವೆ ಎಂದರೆ ಮಾದ್ಯಮ ಎಂದು ತಿಳಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ., ಅಕಾಡೆಮಿ ಸದಸ್ಯರಾದ ಶಿವಾನಂದ ತಗಡೂರು, ಕೆ.ಕೆ. ಮೂರ್ತಿ, ಶಿವಕುಮಾರ್ ಬೆಳ್ಳಿತಟ್ಟೆ, ಕಾರ್ಯದರ್ಶಿ ಸಿ.ರೂಪಾ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.