ಸಂಗೀತ ಹೃದಯದ ಭಾಷೆ


Team Udayavani, Nov 18, 2021, 2:19 PM IST

ಸಂಗೀತ ಹೃದಯದ ಭಾಷೆ

 ಚಿಕ್ಕಬಳ್ಳಾಪುರ: ಸಂಗೀತ ಹೃದಯದ ಭಾಷೆಯಾಗಿದ್ದು ಅವ್ಯಕ್ತ ರೂಪದಿಂದ ವ್ಯಕ್ತವಾಗಿ ಹೃದಯಕ್ಕೆ ಹೃದಯವನ್ನು ಬೆಸೆಯುವ ಮಾಂತ್ರಿಕ ಶಕ್ತಿಗೆ ಸಂಗೀತ ಎನ್ನುತ್ತಾರೆ ಎಂದು ಸದ್ಗುರು ಶ್ರೀಮಧುಸೂದನ ಸಾಯಿ ತಿಳಿಸಿದರು.

ತಾಲೂಕಿನ ಮುದ್ದೇನಹಳ್ಳಿಯ ಸಾಯಿ ಗ್ರಾಮದ ಸತ್ಯಸಾಯಿ ಪ್ರೇಮಾಮೃತಂ ಸಭಾ ಭವನದಲ್ಲಿ ಭಗವಾನ್‌ ಸತ್ಯಸಾಯಿಬಾಬಾ ಅವರ 96ನೇ ಜನ್ಮದಿನಾಚರಣೆ ಪ್ರಯುಕ್ತ ನಡೆದ 2 ದಿನಗಳ ಭಾರತ ಸಂಗೀತ ಸಮ್ಮೇಳನ ಉದ್ಘಾಟನೆಯಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ದೇಹ ಮತ್ತು ಬುದ್ಧಿಯನ್ನು ಏಕಕಾಲದಲ್ಲಿ ಏಕತ್ವದಲ್ಲಿ ವಿಲೀನಗೊಳಿಸಿ ಪರಮಾನಂದ ಸ್ವರೂಪಿಯ ಪರಮ ಆನಂದವನ್ನು ಕರುಣಿಸುವ ಚೈತನ್ಯವೇ ಸಂಗೀತ ಎಂದು ಹೇಳಿದರು. ಆಧ್ಯಾತ್ಮಿಕತೆ ಭಾರತದ ನೆಲೆಗಟ್ಟು. ಭಾವ, ರಾಗ, ತಾಳಗಳ ಮಿಡಿತದಿಂದ ಉಂಟಾದ ಸಂಸ್ಕಾರ- ಸಂಸ್ಕೃತಿಯೇ ಭಾರತದ ಜೀವಾಳ. ನಮ್ಮ ನಿತ್ಯ ಜೀವನದಲ್ಲಿ ಸಂಗೀತವನ್ನು ಅಳವಡಿಸಿದರೆ ಅಹಂಕಾರ ಮಮಕಾರ ಮರೆತು ಬಾಳಿನ ಅರ್ಥದ ಅರಿವಾಗುತ್ತದೆ ಎಂದರು. ಕೋವಿಡ್‌ ಮಾರ್ಗಸೂಚಿ ಅನುಸಾರ ಸಮ್ಮೇಳನದ ಲಾಂಛನ ಅನಾವರಣ ಮತ್ತು ಜ್ಯೋತಿ ಪ್ರಜ್ವಲನದೊಂದಿಗೆ ವಿದ್ಯುಕ್ತವಾಗಿ ಚಾಲನೆ ಪಡೆಯಿತು.

ಸಾಕಾರ ರೂಪ:ಶ್ರೀಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲ ಯದ ಕುಲಾಧಿಪತಿ ಬಿ.ಎನ್‌. ನರಸಿಂಹ ಮೂರ್ತಿ ಮಾತನಾಡಿ, ಸದಾಚಾರ, ಸತ್ಸಂಪ್ರದಾಯ ದೇಶದ ಜೀವಾಳ. ಇದನ್ನರಿತು ಬಾಳಿದವನ ಬದುಕು ಅರ್ಥ ಪೂರ್ಣವಾಗುತ್ತದೆ. ಭಕ್ತಿ ಜ್ಞಾನದ ಸರಳ ಪಥವೇ ಸಂಗೀತ. ಅದಕ್ಕೆ ಮಹತ್ವ ನೀಡಿ ಗತವೈಭವಕ್ಕೆ ಮರು ಮೆರುಗನ್ನು ಭಗವಾನ್‌ ಶ್ರೀಸತ್ಯಸಾಯಿಬಾಬಾ ಅವರ ಸಾಕಾರ ರೂಪವಾದ ಸದ್ಗುರು ಮಧುಸೂದನ ಸಾಯಿ ನೀಡುತ್ತಿದ್ದಾರೆಂದು ತಿಳಿಸಿದರು.

ಇದನ್ನೂ ಓದಿ:- ಶ್ರೀಕಿ ನಾಪತ್ತೆ ವಿಚಾರವನ್ನು ಪೊಲೀಸರು ನೋಡಿಕೊಳ್ಳುತ್ತಾರೆ: ಬೊಮ್ಮಾಯಿ

ಸಮ್ಮೇಳನಕ್ಕೆ ಗಾನಕಲಾ ಭೂಷಣ ಬಿರುದಾಂಕಿತ ಡಾಕ್ಟರ್‌ ಆರ್‌.ಕೆ.ಪದ್ಮನಾಭ ಮಾತನಾಡಿ, ಜಗತ್ತಿನ ಸಂಗೀತ ಪರಂಪರೆಯಲ್ಲಿ ಕರ್ನಾಟಕ ಸಂಗೀತ ಮತ್ತು ಹಿಂದುಸ್ತಾನಿ ಸಂಗೀತ ಪ್ರಮುಖ ಮಜಲು. ಅರ್ಥಪೂರ್ಣ ಬದುಕಿಗೆ ಸಾರ್ಥಕತೆ ಲೇಪನ ಪಡೆಯಬೇಕಾದರೆ ಸಂಗೀತ ಮನೆ ಮಾತಾಗಬೇಕು ಎಂದು ತಿಳಿಸಿದರು. ದೇಶದ ಪ್ರಸಿದ್ಧ ಕೊಳಲು ವಾದನ ಮಾಂತ್ರಿಕ ಪಂಡಿತ ರೋನು ಮಜುಂದಾರ್‌ ಮಾತನಾಡಿ, ನಿರಾಸೆ ಜೀವನಕ್ಕೆ ಸಂಗೀತ ಚೈತನ್ಯ ತುಂಬಬಲ್ಲ ಶಕ್ತಿ ಹೊಂದಿದೆ. ಸಂಗೀತದಲ್ಲಿ ತಲ್ಲೀನರಾದಾಗ ಅಹಂಕಾರ ಮಮಕಾರ ಮರೆಯಾಗುತ್ತದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಭಾರತ ಸಂಗೀತ ಸಮ್ಮೇಳನ ಸಂಘಟಕ ರಲ್ಲಿ ಒಬ್ಬರಾದ ಡಾ.ಮೈಸೂರು ಮಂಜುನಾಥ್‌, ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಉಪಕುಲಪತಿ ಗಳಾದ ಡಾಕ್ಟರ್‌ ಶಿವಕಂಠಮೂರ್ತಿ ಇದ್ದರು. ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ದೊರಕಿದ ನಂತರ ಮಾಂತ್ರಿಕ ಸ್ಪರ್ಶದ ಸಂಗೀತದ ಕುರಿತ ಗೋಷ್ಠಿ, ಸಂವಾದ ನೆರವೇರಿದವು. ಕಾರ್ಯಕ್ರಮದಲ್ಲಿ ವಿವಿ ವಿದ್ಯಾರ್ಥಿಗಳು, ಬೋಧಕರು, ಆಮಂತ್ರಿತ ಅತಿಥಿಗಳು, ಆಡಳಿತ ವರ್ಗದ ಸದಸ್ಯರು, ಹಿರಿಯ ತ್ಯಾಗ ಜೀವಿಗಳು, ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.