ಸತತ ಮಳೆಗೆ ಕೋಡಿ ಬಿದ್ದ ಹಂಗಳ ಹಿರಿಕೆರೆ


Team Udayavani, Nov 19, 2021, 1:56 PM IST

ಸತತ ಮಳೆಗೆ ಕೋಡಿ ಬಿದ್ದ ಹಂಗಳ ಹಿರಿಕೆರೆ

ಗುಂಡ್ಲುಪೇಟೆ: ಕಳೆದ 25 ದಿನಗಳಿಂದಲೂ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಬಂಡೀಪುರ ಅಭಯಾರಣ್ಯದ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಹಂಗಳ ಹಿರಿಕೆರೆ ಗುರುವಾರ ಭರ್ತಿಯಾಗಿ ಕೋಡಿ ಬಿದ್ದಿದೆ. ಕಳೆದ 4-5 ವರ್ಷದಿಂದಲೂ ಮಳೆ ಕೊರತೆಯಿಂದ ಬರಿದಾಗಿದ್ದ ಕೆರೆ ಇದೀಗ ಉತ್ತಮ ಮಳೆಯಾಗುತ್ತಿರುವ ಕಾರಣ ಹಂತ ಹಂತವಾಗಿ ತುಂಬಿ ಕೋಡಿ ಹರಿಯುತ್ತಿದೆ.  ಇದರಿಂದ ಸುತ್ತಮುತ್ತಲು ಬತ್ತಿ ಹೋಗಿದ್ದ ಕೊಳವೆಬಾವಿಗಳಲ್ಲೂ ನೀರು ಬರಲಾರಂಭಿಸಿದ್ದು, ಅಂತರ್ಜಲ ವೃದ್ಧಿಯಾಗಿದೆ.

ಹಂಗಳ ದೊಡ್ಡಕೆರೆಗೆ ಕೋಡಿ ನೀರು: ಹಿರಿಕೆರೆ ತುಂಬಿ ಕೋಡಿ ಬಿದ್ದಿರುವ ಹಿನ್ನೆಲೆ ಆ ನೀರು ಕಾಲುವೆಗಳ ಮೂಲಕ ಭತ್ತಿ ಹೋಗಿದ್ದ ಹಂಗಳ ದೊಡ್ಡ ಕೆರೆಗೆ ಬಂದು ಸೇರುತ್ತಿದೆ. ಹಿರಿಕೆರೆ ಹಂಗಳ ದೊಡ್ಡ ಕೆರೆಗೆ ಪ್ರಮುಖ ಜಲ ಮೂಲವಾಗಿದ್ದು, ಇದೀಗ ಹಿರಿಕೆರೆ ಕೋಡಿ ಬಿದ್ದಿರುವುದು ಹಂಗಳ ವ್ಯಾಪ್ತಿ ಯ ರೈತರಿಗೆ ನೆಮ್ಮದಿ ತರಿಸಿದೆ. ಜೊತೆಗೆ ಗ್ರಾಮದಲ್ಲಿ ತಾಂಡವ ವಾಡು ತ್ತಿರುವ ನೀರಿನ ಸಮಸ್ಯೆ ಕಡಿಮೆಯಾಗುವುದೇ ಕಾದು ನೋಡಬೇಕಿದೆ.

ಹಿರಿಕೆರೆ ಏರಿ ಬಿರುಕು: ಸತತ ಮಳೆಯಿಂದ ತುಂಬಿ ಕೋಡಿ ಬಿದಿದ್ದ ಹಿರಿಕೆರೆ ಏರಿಯಲ್ಲಿ ಇದೀಗ ಬಿರುಕು ಕಾಣಿಸಿಕೊಂಡಿದೆ. 50ಕ್ಕೂ ಅಧಿಕ ಎಕರೆ ವಿಸ್ತೀರ್ಣ ಹೊಂದಿರುವ ಕೆರೆ ಮಳೆಯಿಂದ ತುಂಬಿರುವ ಖುಷಿ ಒಂದು ಕಡೆಯಾದರೆ ಮತ್ತೂಂದೆಡೆ ಕೆರೆ ಏರಿ ಬಿರುಕು ಬಿಟ್ಟಿರುವುದು ಜನರನ್ನು ಚಿಂತೆಗೆ ದೂಡಿದೆ. ಸಂಬಂಧಪಟ್ಟ ಗ್ರಾಪಂ ಹಾಗೂ ಜಿಪಂ ಇಂಜಿನಿಯರ್‌ ಇತ್ತ ಗಮನ ಹರಿಸಿ ಶೀಘ್ರವಾಗಿ ಕೆರೆ ಏರಿ ಬಿರುಕು ದುರಸ್ತಿ ಪಡಿಸುವ ಕೆಲಸ ಮಾಡಬೇಕು ಎಂದು ರೈತ ಮುಖಂಡ ಹಂಗಳ ಮಾಧು ಆಗ್ರಹಿಸಿದ್ದಾರೆ.

ಇದನ್ನೂ ಓದಿ:- ಕಟ್ಟಡ ನಿರ್ಮಾಣ ಮಾಡಿದರೂ ಹಣ ನೀಡದ ಗ್ರಾಪಂ

ಅರಣ್ಯದ ಕೆರೆ-ಕಟ್ಟೆ ಬಹುತೇಕ ಭರ್ತಿ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಎಲ್ಲಾ ವಲಯಗಳಲ್ಲೂ ಸತತವಾಗಿ ಮಳೆಯಾಗುತ್ತಿರುವ ಕಾರಣ ಕಾಡಿನೊಳಗಿರುವ ಬಹುತೇಕ ಕೆರೆ, ಕಟ್ಟೆ, ಹಳ್ಳ-ಕೊಳ್ಳಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಇದರಿಂದ ಕಾಡು ಪ್ರಾಣಿಗಳಿಗೆ ಉಪಯುಕ್ತವಾಗಿದ್ದು, ಬೇಸಿಗೆಯಲ್ಲಿ ಸಂಭವಿಸುವ ನೀರಿನ ದಾಹಕ್ಕೆ ಬ್ರೇಕ್‌ ಬಿದ್ದಿದೆ.

ಇನ್ನೂ ನಿರಂತರ ಮಳೆಯಾಗುತ್ತಿರುವ ಕಾರಣ ಅರಣ್ಯ ಇಲಾಖೆಯಿಂದ ನಾಟಿ ಮಾಡಿದ್ದ ಗಿಡಗಳು ಚಿಗುರೊಡೆದಿದ್ದು, ಅಭಯಾರಣ್ಯವು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಈ ಮಧ್ಯೆ ಮಳೆಯಿಂದ ಅರಣ್ಯದೊಳಗಿರುವ ರಸ್ತೆಗಳು ಕೆಸರುಮಯವಾಗಿರುವ ಹಿನ್ನೆಲೆ ಸಫಾರಿ ತೆರಳುವ ವಾಹನಗಳು ಹರಸಾಹಸದಿಂದ ಮುಂದೆ ಚಲಿಸುವಂತಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.