![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 20, 2021, 3:44 PM IST
ಭಾರತದ ಎರಡು ಬಹುನಿರೀಕ್ಷಿತ ಚಿತ್ರಗಳು ಒಂದೇ ದಿನ ತೆರೆಕಾಣಲು ರೆಡಿಯಾಗಿದೆ. ಅಮಿರ್ ಖಾನ್ ಅವರು ತಮ್ಮ ‘ಲಾಲ್ ಸಿಂಗ್ ಚಡ್ಡಾ’ ಚಿತ್ರದ ರಿಲೀಸ್ ಡೇಟ್ ಘೋಷಣೆ ಮಾಡಿದ್ದು, ಕನ್ನಡದ ರಾಕಿಂಗ್ ಸ್ಟಾರ್ ಗೆ ಸಡ್ಡು ಹೊಡೆದಿದ್ದಾರೆ.
ಹೌದು, ಅಮಿರ್ ಖಾನ್ ಅವರ ಲಾಲ್ ಸಿಂಗ್ ಚಢ್ಢಾ ಚಿತ್ರ ಮುಂದಿನ ವರ್ಷದ ಎಪ್ರಿಲ್ 14ರಂದು ಬಿಡುಗಡೆಯಾಗಲಿದೆ. ಈ ಬಗ್ಗೆ ಇಂದು ಅಮಿರ್ ಖಾನ್ ಪ್ರೊಡಕ್ಷನ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಅಧಿಕೃತ ಘೋಷಣೆ ಮಾಡಿಕೊಂಡಿದೆ.
ಆದರೆ ಅದೇ ದಿನ ಯಶ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ ಪಾನ್ ಇಂಡಿಯಾ ಚಿತ್ರ ‘ಕೆಜಿಎಫ್ -2’ ಬಿಡುಗಡೆಯಾಗುತ್ತಿದೆ. ಒಂದೇ ದಿನ ಎರಡು ದೊಡ್ಡ ಚಿತ್ರಗಳು ತೆರೆಕಾಣಲು ಸಜ್ಜಾಗಿದೆ.
ಇದನ್ನೂ ಓದಿ:ಪಾವನಾ ‘ಇನ್’ ಸೈಡ್ ಸ್ಟೋರಿ!
ಬಾಲಿವುಡ್ ಟ್ರೇಡ್ ಎನಲಿಸ್ಟ್ ತರಣ್ ಆದರ್ಶ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, “ ದಿ ಬಿಗ್ ಕ್ಲ್ಯಾಶ್” ಎಂದು ಕರೆದಿದ್ದಾರೆ. “14 ಏಪ್ರಿಲ್ 2022 ಎರಡು ದೊಡ್ಡವರ ಘರ್ಷಣೆಗೆ ಸಾಕ್ಷಿಯಾಗಲಿದೆ. ಲಾಲ್ ಸಿಂಗ್ ಚಡ್ಡಾ ಮತ್ತು ಕೆಜಿಎಫ್ 2… ಅಮೀರ್ ಖಾನ್ ವರ್ಸಸ್ ಯಶ್” ಎಂದು ತರಣ್ ಆದರ್ಶ್ ಟ್ವೀಟ್ ಮಾಡಿದ್ದಾರೆ.
‘LSC’ VERSUS ‘KGF2’: THE BIGGG CLASH… 14 April 2022 will witness the clash of the two biggies: #LaalSinghChaddha and #KGF2… #AamirKhan versus #Yash. pic.twitter.com/JYvumuIUNi
— taran adarsh (@taran_adarsh) November 20, 2021
ಕೆಜೆಎಫ್ ಚಿತ್ರದ ಮೊದಲ ಭಾಗ 2018ರ ಡಿಸೆಂಬರ್ 21ರಂದು ಬಿಡುಗಡೆಯಾಗಿತ್ತು. ಆಗಲೂ ಬಾಲಿವುಡ್ ನಲ್ಲಿ ಶಾರುಖ್ ಖಾನ್ ಅಭಿನಯದ ‘ಜೀರೋ’ ಚಿತ್ರ ಬಿಡುಗಡೆಯಾಗಿತ್ತು. ಕೆಜಿಎಫ್ ಬಾಕ್ಸಾಫೀಸ್ ಧೂಳಿಪಟ ಮಾಡಿದ್ದರೆ, ಶಾರುಖ್ ಚಿತ್ರ ಯಶಸ್ಸು ಕಾಣಿರಲಿಲ್ಲ.
ಅಮಿರ್ ಖಾನ್ ಅವರ ‘ಲಾಲ್ ಸಿಂಗ್ ಚಡ್ಡಾ’ ಚಿತ್ರವು 1994ರಲ್ಲಿ ತೆರೆಕಂಡ ಫಾರೆಸ್ಟ್ ಗಂಪ್ ಚಿತ್ರದ ರಿಮೇಕ್. ಚಿತ್ರದಲ್ಲಿ ಅಮಿರ್ ಜೊತೆ ಕರೀನಾ ಕಪೂರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅದ್ವೈತ್ ಚಂದನ್ ನಿರ್ದೇಶನವಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.